Featured
ನೇಪಾಳ ಪ್ರವಾಹ: ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿಕೆ ಶಿವಕುಮಾರ್ ಅಭಯ
ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ ಹೊರ ಬರುವ ಪ್ರಯತ್ನ ಮಾಡುವುದು ಬೇಡ. ನಿಮ್ಮ ಜೊತೆ ನಮ್ಮ ಸರ್ಕಾರವಿದೆ. ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗ ಮಲ್ಲಿನಾಥ್ ಅವರಿಗೆ ಧೈರ್ಯ ತುಂಬಿದರು. ನವದೆಹಲಿಯ ಪ್ರವಾಸದಲ್ಲಿರುವ ಸಿಎಂ ಅವರು,ಅಲ್ಲಿಂದಲೇ ವೀಡಿಯೊ ಕರೆ ಮಾಡಿ ಮಾತನಾಡಿ, ಸಂಕಷ್ಟದಲ್ಲಿರುವ ಕನ್ನಡಿಗರ ಆತ್ಮಸ್ಥೈರ್ಯ ಹೆಚ್ಚಿಸಿದರು. ಕರ್ನಾಟಕದಿಂದ ನೇಪಾಳ ಪ್ರವಾಸಕ್ಕೆ ಹೊರಟವರ ಸಂಪರ್ಕ ಕಡಿತವಾಗಿದೆ. ಹುಡುಕಾಟದ ಪ್ರಕ್ರಿಯೆ ನಡೆಯುತ್ತಿದೆ.
ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಗೃಹ ಸಚಿವರ ವಿರುದ್ಧ ಎಂಎಲ್ಸಿ ನಾರಾಯಣಸ್ವಾಮಿ ವಾಗ್ದಾಳಿ
ರಾಯಚೂರು ಜಿಲ್ಲೆಯಲ್ಲಿ ದಲಿತರ ಮೇಲಿನ ಕೊಲೆ, ಅತ್ಯಾಚಾರ ಸೇರಿದಂತೆ ಗಂಭೀರ ಪ್ರಕರಣಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಕರಡಕಲ್ ಗ್ರಾಮದ ರಾಣೆಮ್ಮ ಅವರ ಕುಟುಂಬಕ್ಕೆ ಭೇಟಿ
ನೇಪಾಳ ಪ್ರವಾಹ: ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹಿಸಿ ಪ್ರಧಾನಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ನೇಪಾಳ ಪ್ರವಾಹದಲ್ಲಿ ಕರ್ನಾಟಕ ಮಾತ್ರವಲ್ಲದೆ ದೇಶದ ಸಾಕಷ್ಟು ಜನ ಸಿಲುಕಿದ್ದಾರೆ. ನೂರಾರು ಕೊಚ್ಚಿಕೊಂಡು ಹೋಗಿದ್ದಾರೆ, ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತ್ತೆತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ಎಷ್ಟು ಜನ
ನೇಪಾಳ ಪ್ರವಾಹ: ಇಶಾ ಫೌಂಡೇಷನ್ನ 77 ಯಾತ್ರಿಗಳು ನಾಪತ್ತೆ
ನೇಪಾಳದಲ್ಲಿ ಬುಧವಾರ ಭೀಕರ ಪ್ರವಾಹ ಮತ್ತು ಭೂಕುಸಿತದಲ್ಲಿ ಜಗ್ಗಿ ವಾಸುದೇವ್ ನಡೆಸುತ್ತಿರುವ ಇಶಾ ಫೌಂಡೇಷನ್ನ ೭೭ ಯಾತ್ರಿಗಳು ನಾಪತ್ತೆಯಾಗಿದ್ದಾರೆ. ಟಿಬೆಟ್ ಮಾನಸ ಕೈಲಾಸ ಸರೋವರ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ಯಾತ್ರಿಗಳ ತಂಡವು ವಲಸೆ ಕಚೇರಿಯಲ್ಲಿದ್ದಾಗ ಈ ದುರಂತ ಸಂಭವಿಸಿರುವುದಾಗಿ ಜಗ್ಗಿ ವಾಸುದೇವ್
ಕೊಡಗಿನಲ್ಲಿ ಉತ್ತಮ ಮಳೆ: ಕೆಆರ್ಎಸ್ಗೆ ಒಳಹರಿವು ಹೆಚ್ಚಳ
ಕೊಡಗು ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಸುರಿಯುತ್ತಿರುವುದರಿಂದ ಕೃಷ್ಣರಾಜಸಾಗರ ಅಣೆಕಟ್ಟೆಗೆ ಒಳಹರಿವು ಪ್ರಮಾಣ ಗಣನೀಯ ಏರಿಕೆಯಾಗಿದೆ. ಬುಧವಾರ ಬೆಳಗ್ಗೆ 9,438 ಕ್ಯೂಸೆಕ್ ಇದ್ದ ಒಳಹರಿವು, ನಿರಂತರ ಮಳೆಯಿಂದಾಗಿ 17,427 ಕ್ಯೂಸೆಕ್ಗೆ ಹೆಚ್ಚಳವಾಗಿದೆ. ಒಳಹರಿವು ಹೆಚ್ಚಾದ್ದರಿಂದ ಜಲಾಶಯದಲ್ಲಿ ನೀರಿನ ಮಟ್ಟವು
ಶಿಕ್ಷಣ ಕ್ಷೇತ್ರ ಸುಧಾರಣೆಗೆ ಸಚಿವ ಸಂಪುಟ ಉಪಸಮಿತಿ: ಯುಟಿ ಖಾದರ್ ಅಧ್ಯಕ್ಷರು
ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯವಿರುವ ಸುಧಾರಣೆ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಸಮಗ್ರ ಅಧ್ಯಯನ ನಡೆಸಿ ಶಿಫಾರಸು ಸಲ್ಲಿಸಲು ರಾಜ್ಯ ಸರ್ಕಾರವು ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿ ಆರೋಗ್ಯ ಸಚಿವ ಯು.ಟಿ ಖಾದರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ. ಉನ್ನತ ಶಿಕ್ಷಣ ಸಚಿವ
ನೇಪಾಳ ಪ್ರವಾಹ: ಮಾನಸ ಸರೋವರ ಯಾತ್ರೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ
ನೇಪಾಳ-ಟಿಬೆಟ್ ಗಡಿ ಪ್ರದೇಶಗಳಲ್ಲಿ ಭೀಕರ ಪ್ರವಾಹ, ಭೂಕುಸಿತವುಂಟಾಗಿ ಭಾರಿ ಪ್ರಮಾಣದ ಸಾವು ನೋವುಗಳಾಗಿವೆ, ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಎನ್ಆರ್ಐ ಕನ್ನಡಿಗರು ನಾಪತ್ತೆಯಾಗಿದ್ದಾರೆ, ಇವರು ಬೆಂಗಳೂರಿನವರು ಎನ್ನಲಾಗಿದೆ. ಅಮೆರಿಕದ ನಿವಾಸಿಗಳಾಗಿದ್ದ ಈ ನಾಲ್ವರು ಯಾತ್ರಿಕರು ಮಾನಸ ಸರೋವರ ಯಾತ್ರೆಗಾಗಿ ನೇಪಾಳಕ್ಕೆ
ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಕೆ ಶಿವಕುಮಾರ್
ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಸರ್ಕಾರ ನಿಮ್ಮ ಜೊತೆಗೆ ನಿಲ್ಲಲಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಮರ್ಕಝಿ ಮಿಲಾದ್ ಒ ಸೀರತ್ ಕಮಿಟಿ ಸುನ್ನಿ ಜಮಾಯತ್ ಆಲ್ ಕರ್ನಾಟಕ ವತಿಯಿಂದ ಬೆಂಗಳೂರಿನ ವೈಎಂಸಿಎ
ಲೋಪರಹಿತ ಯುಪಿಐ ಸರ್ಕಾರದ ಲಕ್ಷ್ಯವಾಗಲಿ
ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ ನಗದು ರಹಿತ ಯುಪಿಐ ಪಾವತಿಯ ನೂತನ ವ್ಯವಸ್ಥೆಯೊಂದನ್ನು ಜಾರಿಗೆ ತಂದಿದ್ದು ಸರಿಯಷ್ಟೆ. ಆದರೆ ಮುಂದಿನ ದಶಕದಲ್ಲಿ ಈ ವ್ಯವಸ್ಥೆಯಲ್ಲೀಗ ಕಂಡು ಬಂದ ಪ್ರಮುಖ ದೋಷಗಳು ಮತ್ತು ತೊಡಕುಗಳನ್ನು ನಿವಾರಿಸಿ ಜನ ಸ್ನೇಹಿ ಸುಗಮ ವ್ಯವಸ್ಥೆಗೆ ಸರ್ಕಾರ
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯವೆಂದು ಕರಡು ಅಧಿಸೂಚನೆ: ಚರ್ಚೆಗೆ ವಿಶೇಷ ಅಧಿವೇಶನವೆಂದ ಸಿಎಂ
ಡಾ. ಕೆ. ಕಸ್ತೂರಿರಂಗನ್ ವರದಿ ಆಧರಿಸಿ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಕೇಂದ್ರ ಸರ್ಕಾರ ಹೊರಡಿಸಿತು 7 ನೇ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಬಗ್ಗೆ ಚರ್ಚಿಸಿ ಪಕ್ಷಾತೀತ ತೀರ್ಮಾನ ಕೈಗೊಳ್ಳಲು ಒಂದು ದಿನದ ವಿಶೇಷ ಅಧಿವೇಶನ ಕರೆಯಲಾಗುವುದು




