Menu

ಅಸ್ಸಾಂನಲ್ಲಿ ಪ್ರವಾಹ ಅವಾಂತರ: ಒಂದೇ ದಿನ 21 ಮಂದಿ ಸಾವು

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಬುಧವಾರ ಒಂದೇ ದಿನದಲ್ಲಿ 21 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದ 16 ಜಿಲ್ಲೆಗಳಲ್ಲಿನ 5.64 ಲಕ್ಷಕ್ಕೂ ಹೆಚ್ಚು ಜನರ ಬದುಕು ಪ್ರವಾಹಕ್ಕೆ ತತ್ತರಿಸಿದೆ. ಈ ವರ್ಷ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ವರದಿ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಅಂದರೆ 13 ಮಂದಿ ಅಸು ನೀಗಿದ್ದಾರೆ. ಚರೈದಿಯೋ ಜಿಲ್ಲೆಯಲ್ಲಿ ಐವರು,

ಅಮೆರಿಕದಲ್ಲಿ ರಸ್ತೆ ಅಪಘಾತ: ಹೈದರಾಬಾದ್‌ನ ಒಂದೇ ಕುಟುಂಬದ ಮೂವರು ಬಲಿ

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹೈದರಾಬಾದ್‌ನ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೈದರಾಬಾದ್‌ನ ಸೈದಾಬಾದ್ ನಿವಾಸಿಶೇಖ್ ನವೀದ್ ಪತ್ನಿ ಮತ್ತು ಮಕ್ಕಳೊಂದಿಗೆ ಕಾರಿನಲ್ಲಿ ಪ್ರಯಾಣಿಸುದ್ದಾಗ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ತೀವ್ರ ಏರಿಕೆ

ಅಮೆರಿಕ ಮತ್ತು ಇರಾನ್‌ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ಉದ್ವಿಗ್ನಗೊಂಡಿರುವ ಮಧ್ಯೆಯೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ತೀವ್ರ ಏರಿಕೆ ಕಂಡಿದೆ. ಬ್ರೆಂಟ್ ಕಚ್ಚಾ ತೈಲ ಬೆಲೆಯು 1.2% ಕ್ಕೂ ಹೆಚ್ಚು ಹೆಚ್ಚಳಗೊಂಡು ಪ್ರತಿ ಬ್ಯಾರಲ್‌ ಬೆಲೆ 92.09 ಡಾಲರ್‌ ತಲುಪಿದ್ದು,

ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್‌ ಕ್ರೌರ್ಯ: ದೂರು ದಾಖಲಿಸಿಕೊಳ್ಳಲು ಸುಪ್ರೀಂ ನಿರಾಕರಣೆ

ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಸಂಸದ್‌ ಚಲೊ ನಡೆಸಿದ ವಿದ್ಯಾರ್ಥಿಗಳು ಮತ್ತು ಸಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯದ ವೀಡಿಯೊಗಳನ್ನು ವೀಕ್ಷಿಸಲು ಸಮಯ ಇಲ್ಲ ಎಂದು ಹೇಳಿದ ಸುಪ್ರೀಂಕೋರ್ಟ್‌, ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ನಿರಾಕರಿಸಿದೆ. ವಿದ್ಯಾರ್ಥಿಗಳ

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿಪಕ್ಷ ನಾಯಕರ ಬಂಧನ: ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ

ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ,  ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ಹಾಗೂ ಇತರ ವಿರೋಧ ಪಕ್ಷದ ನಾಯಕರನ್ನು ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಕ್ರೂರ ದಾಳಿಯನ್ನು ವಿರೋಧಿಸಿ ಪ್ರಧಾನಮಂತ್ರಿಯವರ ನಿವಾಸದ ಸಮೀಪ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರನ್ನು

ನೀಟ್‌ ರದ್ದುಗೊಳಿಸಲು ಟಿವಿಕೆ, ಡಿಎಂಕೆ ಆಗ್ರಹ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಗಳ ಕುರಿತು ತಮಿಳುನಾಡಿನ ಆಡಳಿತಾರೂಢ ಟಿವಿಕೆ ವಿರೋಧ ಪಕ್ಷಗಳ ಸಾಲಿಗೆ ಸೇರ್ಪಡೆಗೊಂಡಿದೆ.  ವಿಜಯ್ ಸರ್ಕಾರ ತನ್ನ ಧ್ವನಿಯನ್ನು ತೀವ್ರಗೊಳಿಸಿದ್ದು, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ಮಾತ್ರವಲ್ಲದೆ, ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನೇ ಸಂಪೂರ್ಣವಾಗಿ ರದ್ದುಪಡಿಸಬೇಕೆಂದು

ವಿದ್ಯಾರ್ಥಿಗಳ ಬೇಡಿಕೆ ಈಡೇರಿಸದಿದ್ದರೆ ಲಕ್ಷಾಂತರ ಮಂದಿ ದೆಹಲಿಗೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನೀಟ್‌ ಅಕ್ರಮದಿಂದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸಬೇಕು, ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಬೇಕು ಎಂಬ ಆಗ್ರಹ ಸೇರಿದಂತೆ ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಲಕ್ಷಾಂತರ ಮಂದಿ ದೆಹಲಿಗೆ ಮುನ್ನುಗ್ಗಲಿದ್ದಾರೆ ಎಂದು ಕಾಕ್ರೋಚ್ ಜನತಾ

ಸಚಿವ ಸಂಪುಟ ವಿಸ್ತರಣೆ: ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ ಎಂದ ಸಿಎಂ ಡಿಕೆ ಶಿವಕುಮಾರ್‌

ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ. ನಮ್ಮ ಅಭಿಪ್ರಾಯ ಪಡೆದು ತೀರ್ಮಾನ ಮಾಡುತ್ತಾರೆ. ಹೊಸ ಮುಖ, ಜಿಲ್ಲೆ ಹಾಗೂ ಪ್ರಾಂತ್ಯವಾರು ಲೆಕ್ಕಾಚಾರ ಮಾಡಿ ತೀರ್ಮಾನ ಮಾಡುತ್ತಾರೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಸಚಿವ

ನೀಟ್ ಅಕ್ರಮ: ಸಂಸತ್‌ನಲ್ಲಿ ಚರ್ಚೆಯಾಗಲಿ

ನೀಟ್ ಪರೀಕ್ಷೆ ಲೋಪಗಳನ್ನು ಸರಿಪಡಿಸಲು ಸರ್ಕಾರದ ಬಳಿ ದಾರಿ ಇಲ್ಲವೇ ? ಈ ವಿಚಾರದಲ್ಲಿ ಎರಡು ದಿನಗಳ ಹಿಂದೆ ಸಿಜೆಪಿ ಮುಖಂಡರು ಮತ್ತು ದೇಶದ ಇತರ ಪ್ರಮುಖ ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳ ಜೊತೆ ಕೇಂದ್ರ ಸರ್ಕಾರದ ಸಂಬಂಧಿತ ಸಚಿವರು ಚರ್ಚೆಗೆ

ನೀಟ್‌ ಅಕ್ರಮ: ಸಚಿವರು ರಾಜೀನಾಮೆ ನೀಡಲಿ, ವಿದ್ಯಾರ್ಥಿಗಳಿಗೆ ಕೇಂದ್ರ ನ್ಯಾಯ ಒದಗಿಸಲಿ ಎಂದು ಸಿಎಂ ಆಗ್ರಹ

ನೀಟ್‌ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ  ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿ ಹೋರಾಟವನ್ನು ದಮನಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದನ್ನು ಇದೇ ದೇಶ ಖಂಡಿಸುತ್ತದೆ. ಕಾಂಗ್ರೆಸ್‌ ವಿದ್ಯಾರ್ಥಿಗಳ