Menu

ಬೆಂಗಳೂರಿನಲ್ಲಿ ಕಳೆದ ಏಳು ತಿಂಗಳಲ್ಲಿ ಸೈಬರ್‌ ವಂಚಕರು ದೋಚಿದ್ದು 558 ಕೋಟಿ ರೂ.

ಬೆಂಗಳೂರಿನಲ್ಲಿ ಕಳೆದ ಏಳು ತಿಂಗಳಲ್ಲಿ ಒಟ್ಟು 4,712 ಸೈಬರ್‌ ವಂಚನೆ ಪ್ರಕರಣಗಳು ದಾಖಲಾಗಿದ್ದು, ಜನರು 558 ಕೋಟಿ ರೂ. ಕಳೆದುಕೊಂಡಿದ್ದಾರೆ.  ನಗರದಲ್ಲಿ ಇಂಜಿನಿಯರ್‌ಗಳು, ವೈದ್ಯರು, ಶಿಕ್ಷಕರು, ಬ್ಯಾಂಕ್‌ ಸಿಬ್ಬಂದಿ, ಹಿರಿಯ ನಾಗರಿಕರು, ಗೃಹಿಣಿಯರನ್ನು ಗುರಿಯಾಗಿಸಿಕೊಂಡು ಸೈಬರ್‌ ವಂಚಕರು ಮೋಸದ ಜಾಲವನ್ನು ಬೀಸುತ್ತಿದ್ದಾರೆ. ಪ್ರತಿದಿನ ಸರಾಸರಿ 22 ಸೈಬರ್ ವಂಚನೆ ಪ್ರಕರಣಗಳು ದಾಖಲಾಗುತ್ತಿದ್ದು, ಪ್ರತಿನಿತ್ಯ 2.63 ಕೋಟಿ ರೂಪಾಯಿ ವಂಚನೆಯಾಗುತ್ತಿದೆ ಎಂದು ಗೃಹ ಇಲಾಖೆಯ ಅಧಿಕೃತ ಮಾಹಿತಿ ನೀಡಿದೆ. ಸೈಬರ್‌ ವಂಚಕರು

ನಾಡಗೀತೆ ಧಾಟಿ, ಸಮಯ ನಿಗದಿ: ರಾಜ್ಯ ಸರ್ಕಾರದ ಆದೇಶ ಪುರಸ್ಕರಿಸಿದ ಸುಪ್ರೀಂ

ನಾಡಗೀತೆ “ಜಯ ಭಾರತ ಜನನಿಯ ತನುಜಾತೆ” ಹಾಡಲು ನಿರ್ದಿಷ್ಟ ಧಾಟಿ ಮತ್ತು ಕಾಲಮಿತಿ ನಿಗದಿ ಪಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಸರ್ಕಾರದ ಈ ಆದೇಶ ವಿಚಾರದಲ್ಲಿ ಮಧ್ಯೆ ಪ್ರವೇಶಿಸಲು ನ್ಯಾಯಾಲಯವು ನಿರಾಕರಿಸಿದ್ದು, ಸಲ್ಲಿಕೆಯಾಗಿದ್ದ ವಿಶೇಷ ಅರ್ಜಿಯನ್ನು

ನೇಪಾಳದಲ್ಲಿ ಮತ್ತೊಂದು ಪ್ರವಾಹದ ಆತಂಕ

ನೇಪಾಳ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ಈಗಾಗಲೇ ನಲುಗಿದ್ದು, ಮತ್ತೊಂದು ಪ್ರವಾಹದ ಅಪಾಯ ಎದುರಾಗಿದೆ. ಭೋಟೆ ಕೋಶಿ ನದಿಯ ಮೂಲದ ಸಮೀಪ ಮತ್ತೊಂದು ತಡೆ ಜಲಾಶಯ ನಿರ್ಮಾಣ ಆಗಿರುವುದರಿಂದ ಕೆಳ ಭಾಗದಲ್ಲಿ ಭಾಗದಲ್ಲಿ ಪ್ರವಾಹದ ಅಪಾಯ ಎದುರಾಗಿದೆ. ಈ ತಡೆ ಜಲಾಶಯ

ಅನೈತಿಕ ಸಂಬಂಧ: ವ್ಯಕ್ತಿಯನ್ನು ಹೊಡೆದು ಕೊಲೆಗೈದ ಮಹಿಳೆಯ ಕುಟುಂಬ

ಮಹಿಳೆ ಜತೆ ಅನೈತಿಕ ಸಂಬಂಧ ಹೊಂದಿರುವುದಕ್ಕೆ ಆಕೆಯ ಕುಟುಂಬದವರು ವ್ಯಕ್ತಿಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಗದಗದ ಲಕ್ಷ್ಮೇಶ್ವರ ತಾಲೂಕಿನ ಪುಟಗಾಂವ್‌ ಬಡ್ನಿ ಗ್ರಾಮದಲ್ಲಿ ನಡೆದಿದೆ. 34 ವರ್ಷದ ಈರಣ್ಣ ಅಗಸಿಬಾಗಿಲು ಮೃತಪಟ್ಟ ವ್ಯಕ್ತಿ. ಆತ ರೇಣುಕಾ ಎಂಬ

175 ತಾಲೂಕುಗಳಲ್ಲಿ ಬರಗಾಲ ಘೋಷಿಸಿ ಹಣ ಬಿಡುಗಡೆ ಮಾಡಿ: ಸರ್ಕಾರಕ್ಕೆ ಆರ್‌ ಅಶೋಕ ಆಗ್ರಹ

ರಾಜ್ಯ ಸರ್ಕಾರ ಕಾಟಾಚಾರಕ್ಕೆ ಬರಗಾಲ ಘೋಷಣೆ ಮಾಡಿದೆ. ಆದರೆ 175 ತಾಲೂಕುಗಳಲ್ಲಿ ಬರ ಘೋಷಿಸಿ, ಹಣ ಬಿಡುಗಡೆ ಬಗ್ಗೆ ಸರಿಯಾಗಿ ತಿಳಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೊಳ್ಳೆ ಹೊಡೆದ ಮೇಲೆ ಕೋಟೆಯ ಬಾಗಿಲು ಹಾಕಿದಂತೆ

ಹೊಣೆಗೇಡಿಗಳ ಮಂಪರು ಬಿಡಿಸಿದ ಸಚಿವದ್ವಯರು

ಆಡಳಿತದ ಮಟ್ಟದಲ್ಲಿ ತುಂಬಿರುವ ಕೊಳೆ ಮತ್ತು ಕಸವನ್ನು ಒಂದೇ ದಿನದಲ್ಲಿ ಯಾವ ಸರ್ಕಾರವೂ ಸಂಪೂರ್ಣವಾಗಿ ತೊಲಗಿಸಲು ಸಾಧ್ಯವಿಲ್ಲ. ಸಚಿವರುಗಳಾಗಿ ಕೃಷ್ಣಬೈರೇಗೌಡ ಮತ್ತು ಖಾದರ್ ಈಗ ಆರಂಭಿಸಿರುವ ಜನಪರ ಕಾರ್ಯವನ್ನು ಡಿ ಕೆ ಸಂಪುಟದ ಇತರ ಮಂತ್ರಿಗಳೂ ಕೈಗೆತ್ತಿಕೊಂಡರೆ ರಾಜ್ಯಕ್ಕೆ ಬಹಳಷ್ಟು ಒಳಿತಾದೀತು.

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ರಾಜ್ಯದ ಪೈಲಟ್‌ ಸೇರಿ ಇಬ್ಬರ ಸಾವು

ಕಾನ್ಪುರ ಗಂಗಾನದಿ ದಡದಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದ ವಿಮಾನವೊಂದು ಪತನಗೊಂಡಿದ್ದು, ಕರ್ನಾಟಕ ಮೂಲದ ಪೈಲಟ್‌ ಸೇರಿ ಇಬ್ಬರು ಮೃತಪಟ್ಟಿರುವುದಾಗಿ ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದ್ದಾರೆ. ಗಾರ್ಗ್ ಏವಿಯೇಷನ್‌ಗೆ ಸೇರಿದ್ದ ಟೆಕ್ನಮ್ ವಿಮಾನವು ಗುರುವಾರ ಬೆಳಗ್ಗೆ 11.30ಕ್ಕೆ ಟೇಕ್ ಆಫ್ ಆಗಿ 20

ದಯಾಮರಣ ಕೋರಿದ್ದ ತುಮಕೂರಿನ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆ

ಈ ಹಿಂದೆ ಗೃಹಸಚಿವರಾಗಿದ್ದ ಪರಮೇಶ್ವರ್‌ ಅವರಲ್ಲಿ ದಯಾಮರಣ ಕೋರಿ ಮನವಿ ಸಲ್ಲಿಸಿದ್ದ   ತುಮಕೂರಿನ ಶಿರಾ ನಗರ ಹೊರ ವಲಯದ  ಮಹಿಳೆಯು ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಬಿಯಾ ಪಾಷಾ (39), ಮಗಳು ತಮನ್ನಾ (9), ಮಗ ಸಿಮ್ರಾನ್ (5) ಆತ್ಮಹತ್ಯೆ ಮಾಡಿಕೊಂಡವರು.

ನೇಪಾಳ ಪ್ರವಾಹ: ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿಕೆ ಶಿವಕುಮಾರ್ ಅಭಯ

ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ ಹೊರ ಬರುವ ಪ್ರಯತ್ನ ಮಾಡುವುದು ಬೇಡ. ನಿಮ್ಮ ಜೊತೆ ನಮ್ಮ ಸರ್ಕಾರವಿದೆ. ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗ ಮಲ್ಲಿನಾಥ್ ಅವರಿಗೆ ಧೈರ್ಯ ತುಂಬಿದರು. ನವದೆಹಲಿಯ

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಗೃಹ ಸಚಿವರ ವಿರುದ್ಧ ಎಂಎಲ್ಸಿ ನಾರಾಯಣಸ್ವಾಮಿ ವಾಗ್ದಾಳಿ

ರಾಯಚೂರು ಜಿಲ್ಲೆಯಲ್ಲಿ ದಲಿತರ ಮೇಲಿನ ಕೊಲೆ, ಅತ್ಯಾಚಾರ ಸೇರಿದಂತೆ ಗಂಭೀರ ಪ್ರಕರಣಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಕರಡಕಲ್ ಗ್ರಾಮದ ರಾಣೆಮ್ಮ ಅವರ ಕುಟುಂಬಕ್ಕೆ ಭೇಟಿ