Menu

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉದ್ಯಮಿಗಳ ಬೆದರಿಸಿ 20 ಲಕ್ಷ ರೂ. ಕಿತ್ತುಕೊಂಡ ಸಿಐಡಿ ಇನ್ಸ್‌ಪೆಕ್ಟರ್

ಸಿಐಡಿ ವಿಭಾಗದ ಇನ್ಸ್‌ಪೆಕ್ಟರ್ ತಂಡ ಕಟ್ಟಿಕೊಂಡು ಪೊಲೀಸ್‌ ಜೀಪ್‌ನಲ್ಲಿ ಬೆಂಗಳೂರಿನ ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ  ಕೇರಳದ ಉದ್ಯಮಿಗಳನ್ನು ಬೆದರಿಸಿ 20 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ದರೋಡೆಯ ಸಂಚು ರೂಪಿಸಿದ್ದು, ಪೊಲೀಸರ ತನಿಖೆ ತೀವ್ರಗೊಳ್ಳುತ್ತಿದ್ದಂತೆಯೇ ಪರಾರಿಯಾಗಿದ್ದಾರೆ. ವ್ಯಾಪಾರ ಉದ್ದೇಶಗಳಿಗಾಗಿ ಹಣದೊಂದಿಗೆ ಬಂದಿದ್ದ ಕೇರಳದ ಉದ್ಯಮಿಗಳು ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ಬಗ್ಗೆ ನಿಖರ ಮಾಹಿತಿ ಪಡೆದಿದ್ದ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ, ಹ್ಯಾರಿಸ್,

ಮೈಸೂರು ಕಾಲೇಜು ಕ್ಯಾಂಪಸ್‌ನಲ್ಲೇ ಕುಸಿದು ವಿದ್ಯಾರ್ಥಿ ಸಾವು

ಮೈಸೂರಿನ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿಯೊಬ್ಬರು ಹೃದಯಾಘಾತಗೊಂಡು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮಾದೇಶ್ ಮೃತಪಟ್ಟ ವಿದ್ಯಾರ್ಥಿ. ಇವರು ಮದ್ದೂರು ತಾಲೂಕಿನವರಾಗಿದ್ದು, ಮೈಸೂರು ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ಬಂದಿದ್ದ ಮಾದೇಶ್, ಕ್ಯಾಂಪಸ್‌ನಲ್ಲಿ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ. ಕಾಲೇಜಿನ ಸಿಬ್ಬಂದಿ

ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪಕ್ಷಾತೀತ ಬೆಂಬಲ: ಸಿಎಂ

ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಸರ್ಕಾರಕ್ಕೆ ಶಾಸಕರ ಬೆಂಬಲ ನೋಡಿ ನನಗೆ ಆಶ್ಚರ್ಯವಾಗಿದೆ. ಇದು ನಮ್ಮ ಸರ್ಕಾರಕ್ಕೆ ಮಾತ್ರ ನೀಡಿರುವ ಬೆಂಬಲವಲ್ಲ. ರಾಜ್ಯದ ಜನತೆಯ ಹಿತಕ್ಕಾಗಿ ನಿಮ್ಮ ಜೊತೆ ಇದ್ದೇವೆ ಎಂದು ನೀಡಿರುವ ಬೆಂಬಲ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.

ವಿಪಕ್ಷಗಳ ಗ್ಯಾರಂಟಿ ವಿರೋಧಿ ನೀತಿಗೆ ಅವರ ಶಾಸಕರಿಂದಲೇ ಉತ್ತರ: ಸುರ್ಜೇವಾಲಾ

ಮೂರು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಮಾಡಿದ ಜನಪರ ಕೆಲಸಗಳಿಗೆ ಶಾಸಕರು ನೀಡಿರುವ ಬೆಂಬಲ ಈ ಪರಿಷತ್ ಚುನಾವಣೆ ಪಲಿತಾಂಶ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಗ್ಯಾರಂಟಿ ವಿರೋಧಿ ನಿಲುವನ್ನು ಅವರ ಪಕ್ಷದ ಶಾಸಕರೇ ವಿರೋಧಿಸಿ ಸಂದೇಶ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ

ಕಾರ್ಮಿಕ ವಿವಾದಗಳಲ್ಲಿ ಎಸ್‌ಸಿ ಎಸ್​ಟಿ ಕಾಯ್ದೆ ದುರ್ಬಳಕೆ ಸಲ್ಲದು: ಹೈಕೋರ್ಟ್​

ಕಾರ್ಮಿಕ ಮತ್ತು ಸಿವಿಲ್ ಪ್ರಕರಣಗಳಿಗೆ ಕ್ರಿಮಿನಲ್ ರೂಪ ನೀಡಿ, ಅದರಲ್ಲೂ ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್​ ಹೇಳಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್​ಐಆರ್ ಮತ್ತು ಅದಕ್ಕೆ ಸಂಬಂಧಿಸಿದ

ರಾಜ್ಯಸಭೆಯಲ್ಲಿ ಎನ್‌ಡಿಎ ಸಂಖ್ಯಾ ಬಲ ಇನ್ನಷ್ಟು ಹೆಚ್ಚಳ

ಜಾರ್ಖಂಡ್ ರಾಜ್ಯಸಭಾ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪರಿಮಳ್ ನತ್ಲಾನಿ ಅವರ ಗೆಲುವಿನೊಂದಿಗೆ, ಮೇಲ್ಮನೆಯಲ್ಲಿ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)  ಸಂಖ್ಯಾಬಲವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ. ಪ್ರಮುಖ ಸಾಂವಿಧಾನಿಕ ತಿದ್ದುಪಡಿಗಳನ್ನು ಅಂಗೀಕರಿಸಲು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತದ ಗಡಿಗೆ ಎನ್‌ಡಿಎ

ಚಿನ್ನದ ಆಮದು ಇಳಿಮುಖ: ಅರ್ಥಿಕ ಚೇತರಿಕೆ ಏರುಮುಖ

ಪ್ರಧಾನಿ ಮೋದಿ ಚಿನ್ನದ ಆಭರಣ ಖರೀದಿಯನ್ನು ಒಂದು ವರ್ಷ ಮುಂದೂಡಲು ಮನವಿ ಮಾಡಿದ್ದು ಫಲಕಾರಿಯಾಗಿದೆ. ಶೇ.೭೦ ರಷ್ಟು ಚಿನ್ನದ ಆಮದು ಕಡಿಮೆಯಾಗಿದೆ. ಇದರಿಂದ ದೇಶದ ಆರ್ಥಿಕತೆಯಲ್ಲಿ ಚೇತರಿಕೆ ಕಂಡು ಬರಲು ಸಾಧ್ಯವಾಗಿದೆ. ಪ್ರತಿ ತಿಂಗಳು ೭೫-೧೦೦ ಟನ್ ಚಿನ್ನ ಆಮದಾಗುತ್ತಿತ್ತು. ಈಗ

ವಿಧಾನ ಪರಿಷತ್​​ ನ ಏಳು ಸ್ಥಾನಗಳಲ್ಲಿ ಐದು ಕಾಂಗ್ರೆಸ್​​ ಪಾಲು

ಭಾರಿ ಕುತೂಹಲ ಮೂಡಿಸಿದ್ದ ವಿಧಾನಸಭೆಯಿಂದ ವಿಧಾನ ಪರಿಷತ್​​ ನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಪರಾಭವಗೊಂಡಿದ್ದು, ಬಿಜೆಪಿ ಮತ್ತು ಜೆಡಿಎಸ್​​ನಿಂದ ಅಡ್ಡ ಮತದಾನ( ಕ್ರಾಸ್​​ ವೋಟಿಂಗ್​​)

ನೆಲಮಂಗಲದಲ್ಲಿ ಆಟವಾಡುತ್ತಿದ್ದ ಮಗು ಮಹಡಿಯಿಂದ ಬಿದ್ದು ಸಾವು

ಆಟವಾಡುತ್ತಿದ್ದ ಮಗು ಮೊದಲನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ.  ಟಿ.ದಾಸರಹಳ್ಳಿ ನಿವಾಸಿ ನವೀನ್ ಕುಮಾರ್ ಹಾಗೂ ಕಾವ್ಯ ದಂಪತಿಯ ಎರಡು ವರ್ಷದ ಮಗು ದೀಕ್ಷಿತ್ (2) ಮೃತಪಟ್ಟಿದೆ. ಆಟವಾಡುವಾಗ ಮೆಟ್ಟಿಲ ಮೇಲಿಂದ ಮಗು

ಅತ್ಯಾಚಾರ, ಚಿತ್ರಹಿಂಸೆ ನೀಡಿ ಮಹಿಳೆಯ ಆಸ್ತಿ ಕಬಳಿಸಿದ ಸ್ವಯಂಘೋಷಿತ ಗುರು ಅರೆಸ್ಟ್‌

ಅನಾರೋಗ್ಯ ಮತ್ತು ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸುವುದಾಗಿ ನಂಬಿಸಿದ ಸ್ವಯಂಘೋಷಿತ ಗುರುವೊಬ್ಬನನ್ನು  ಮಹಿಳೆಯ ಮೇಲೆ ೧೫ ವರ್ಷ ಲೈಂಗಿಕ ದೌರ್ಜನ್ಯ ಜೊತೆಗೆ ಮೂತ್ರ ಕುಡಿಸಿ ವಿದ್ಯುತ್‌ ಶಾಕ್‌ ನೀಡಿರುವ ಆರೋಪದಡಿ  ಏಳು ಮಂದಿ ಸಹಚರರೊಂದಿಗೆ ಪುಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರಮುಖ ಆರೋಪಿಯನ್ನು