Menu

ಮಂಗಳೂರಿನಲ್ಲಿ ಉದ್ಯಮಿಯ ಹನಿಟ್ರ್ಯಾಪ್‌, ವೀಡಿಯೊ ಮುಂದಿಟ್ಟು ಎರಡುವರೆ ಕೋಟಿ ದೋಚಿದ್ದ ಕೈ ಮುಖಂಡ ಅರೆಸ್ಟ್‌

ಮಂಗಳೂರಿನ ಉದ್ಯಮಿಯನ್ನು ಹನಿಟ್ರ್ಯಾಪ್‌ ಮಾಡಿ ಅಶ್ಲೀಲ ವೀಡಿಯೊ ಮುಂದಿಟ್ಟು ಬ್ಲ್ಯಾಕ್‌ಮೇಲ್‌ ಮಾಡಿ 2 ಕೋಟಿ 77 ಲಕ್ಷ ರೂಪಾಯಿ ದೋಚಿರುವ ಪ್ರಕರಣ ಸಂಬಂಧ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಮತ್ತು ಜಿತೇಶ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 2024ರಲ್ಲಿ ಉದ್ಯಮಿಯನ್ನು ಜಿತೇಶ್ ಹನಿಟ್ರ‍್ಯಾಪ್ ಮಾಡಿದ್ದು, ಅಶ್ಲೀಲ ಫೋಟೋ, ವೀಡಿಯೊ ಇಟ್ಟುಕೊಂಡು ನಿನ್ನ ಪತ್ನಿಗೆ ತೋರಿಸುವುದಾಗಿ ಬೆದರಿಸುತ್ತ 35 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ. ಮರ್ಯಾದೆಗೆ ಹೆದರಿ ಉದ್ಯಮಿ ಚೆಕ್

ಭಾರತದ ಪ್ರಜಾಪ್ರಭುತ್ವ ಹಾಳುಗೆಡವಿದ ಮೋದಿ ಸಾಧನೆಗೆ ಬಿಜೆಪಿ ಸಂಭ್ರಮ: ಮಾಜಿ ಸಿಎಂ ಸಿದ್ದರಾಮಯ್ಯ

ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ ನರೇಂದ್ರ ಮೋದಿ ಅವರ ಸಾಧನೆಯ ಬಗ್ಗೆ ಬಿಜೆಪಿ ಸಂಭ್ರಮಿಸುತ್ತಿರುವುದು ಪ್ರಜಾಪ್ರಭುತ್ವದ ವಿರುದ್ಧದ ಅತಿದೊಡ್ಡ ಅಣಕವಾಗಿದೆ. ಇದಕ್ಕೆ ಜ್ವಲಂತ ಉದಾಹರಣೆಯಾಗಿ ಮಧ್ಯಪ್ರದೇಶದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಮೀನಾಕ್ಷಿ ನಟರಾಜನ್‌ ಅವರ ನಾಮಪತ್ರವನ್ನು

ಪಂಕ್ಚರ್‌ ಆಗಿ ನಿಂತಿದ್ದ ಟ್ಯಾಂಕರ್‌ಗೆ ಲಾರಿ ಡಿಕ್ಕಿ: ಚಾಲಕ ಸಜೀವ ದಹನ

ಪಂಕ್ಚರ್‌ ಆಗಿ ನಿಂತಿದ್ದ ಟ್ಯಾಂಕರ್‌ಗೆ  ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳು ತಕ್ಷಣ ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಗಡಿಭಾಗ ಆಂಧ್ರದ ಅನಂತಪುರ ಜಿಲ್ಲೆಯ ಡಿ. ಹಿರೇಹಾಳ ಬಳಿ ನಡೆದಿದೆ. ಪಂಕ್ಚರ್ ಆಗಿದ್ದ ಸಿಮೆಂಟ್ ಟ್ಯಾಂಕರ್‌

ಬಳ್ಳಾರಿ ಪಿಜಿಯಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಸಾವು: ಕೊಲೆಯೆಂದು ಪೋಷಕರ ಆರೋಪ

ಬಳ್ಳಾರಿಯ ಅಶೋಕ್ ನಗರದ ಚೌದ್ರಿ ರೆಸಿಡೆನ್ಸ್ ಪಿಜಿ ಕೊಠಡಿಯಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಶ್ವಾಸ್ (24) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮೃತನ ತಲೆಗೆ ಹಾಗೂ ಎದೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ

ಇರಾನ್‌ ದಾಳಿಗೆ ಅಮೆರಿಕ ಪ್ರತಿದಾಳಿ, ಬಹರೇನ್‌ನ ಯುಎಸ್‌ ನೆಲೆಗೆ ಟೆಹ್ರಾನ್‌ ದಾಳಿ, ಯುದ್ಧ ಭೀತಿ

ಒಮನ್ ಬಳಿ ಅಮೆರಿಕದ ಹೆಲಿಕಾಪ್ಟರ್ ಪತನಗೊಂಡ ನಂತರ ಇರಾನ್ ಮೇಲಿನ ವೈಮಾನಿಕ ದಾಳಿಯನ್ನು ಪೂರ್ಣಗೊಳಿಸಿರುವುದಾಗಿ ಅಮೆರಿಕ ಸೇನೆ ಹೇಳಿದೆ. ಹರ್ಮುಜ್ ಜಲಸಂಧಿ ಬಳಿ ಇರಾನ್‌ನ ವಾಯು ರಕ್ಷಣಾ ವ್ಯವಸ್ಥೆ, ನಿಯಂತ್ರಣ ಕೇಂದ್ರಗಳು ಮತ್ತು ರಾಡಾರ್ ಕಣ್ಗಾವಲು ತಾಣಗಳನ್ನು ನಿಖರ ದಾಳಿಯೊಂದಿಗೆ ಹೊಡೆದುರುಳಿಸಲಾಗಿದೆ

ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ಟ್ರಾಕ್ಸನ್ ಉನ್ನತೀಕರಣ

ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ಎಳೆತ (ಟ್ರಾಕ್ಸನ್) ವ್ಯವಸ್ಥೆಯ ಉನ್ನತೀಕರಣಕ್ಕೆ ಭಾರತೀಯ  ರೈಲ್ವೆ ಅನುಮೋದನೆ ನೀಡಿದೆ  ಎಂದು ಕೇಂದ್ರ ಬೃಹತ್‌ ರೈಲ್ವೆ  ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ಹಾಗೂ ತುಮಕೂರು ಲೋಕಸಭಾ ಸದಸ್ಯ  ವಿ. ಸೋಮಣ್ಣ ತಿಳಿಸಿದ್ದಾರೆ. ರಾಜ್ಯದ ಅತ್ಯಂತ

ಮಸೀದಿಯಲ್ಲಿ ಆಝಾನ್ ಕೂಗುತ್ತಿರುವಾಗಲೇ ಕುಸಿದು ಮೃತಪಟ್ಟ ಧರ್ಮಗುರು

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಸೀದಿಯಲ್ಲಿ ಆಝಾನ್ ಕೂಗುತ್ತಿರುವಾಗಲೇ ಬಂಟ್ವಾಳದ ಧರ್ಮಗುರು ಹೃದಯಾಘಾತದಿಂದ ಕುಸಿದು ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಪುಚ್ಚೆಕೆರೆ ನಿವಾಸಿ ನೂಜಿ ಉಸ್ಮಾನ್ ಅವರ ಪುತ್ರ ಅಬ್ದುಲ್ ಲತೀಫ್ ಮದನಿ (50) ಮೃತಪಟ್ಟವರು. ಸಂಜೆ

ದೇವೇಗೌಡರಿಗೆ ಬಿಜೆಪಿಯಿಂದ ರಾಜ್ಯಸಭೆ ಟಿಕೆಟ್ ತಪ್ಪಿದ್ದೇಕೆ?

ದೇವೇಗೌಡರ ವಯೋಮಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಇವರಿಗೆ ಟಿಕೆಟ್ ನೀಡಲಿಲ್ಲ ಎಂದು ಈಗ ಹೇಳುವ ಹಾಗಿಲ್ಲ. ಈ ಮಾತುಗಳನ್ನು ದಿಲ್ಲಿ ವರಿಷ್ಠರು ಮೊದಲೇ ಯಾಕೆ ಸ್ಪಷ್ಟಪಡಿಸಲಿಲ್ಲ ಎಂಬ ಪ್ರಶ್ನೆ ತಲೆಯೆತ್ತುವುದು ಸಹಜ. ಇದರಿಂದ ಬಿಜೆಪಿಗೆ ಹಳೇ ಮೈಸೂರಿನಲ್ಲಿ ರಾಜಕೀಯವಾಗಿ ಸಂಭವಿಸುವ ಹಾನಿಯಂತೂ

ಸಚಿವ ಸ್ಥಾನ ಕುರಿತು ಹೈಕಮಾಂಡ್ ತೀರ್ಮಾನ ಅಂತಿಮ: ಮಧು ಬಂಗಾರಪ್ಪ

ಸಚಿವ ಸಂಪುಟ ಪುನಾರಚನೆ ಹಾಗೂ ಸಚಿವ ಸ್ಥಾನಗಳ ಹಂಚಿಕೆ ಕುರಿತು ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದ್ದು, ಆ ನಿರ್ಧಾರಕ್ಕೆ ಪಕ್ಷದ ಎಲ್ಲ ನಾಯಕರು ಬದ್ಧರಾಗಿರಬೇಕಾಗುತ್ತದೆ ಎಂದು ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

ಮಂಡ್ಯದಲ್ಲಿ ತಂದೆ, ತಾಯಿ, ಮಗನ ಸಾವು

ಮಂಡ್ಯದ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ನಿಗೂಢವಾಗಿ ಮೃತಪಟ್ಟಿದ್ದು, ತಂದೆ ನೇಣಿ ಬಿಗಿದುಕೊಂಡಿದ್ದರೆ, ತಾಯಿ ಮತ್ತು ಮಗ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಪ್ರಭಾಕರ್ (ತಂದೆ), ಜ್ಯೋತಿ (ತಾಯಿ) ಮತ್ತು ಸಂತೋಷ್ (ಪುತ್ರ) ಎಂದು ಗುರುತಿಸಲಾಗಿದೆ. ಜ್ಯೋತಿ ಮತ್ತು ಅವರ ಪುತ್ರ