Menu

ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ ಖರ್ಗೆ- ಡಿಕೆ ಶಿವಕುಮಾರ್ ಮಾತುಕತೆ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಗೊಂದಲಗಳು ಮುಂದುವರೆದ ನಡುವೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದಿಢೀರ್ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಭಾರಿ ಬದಲಾವಣೆ ಬದಲಾವಣೆಯ ಮುನ್ಸೂಚನೆ ನೀಡಿದೆ. ಹೈಕಮಾಂಡ್

ನರೇಗಾ ಕಾಯ್ದೆ ರದ್ದುಗೊಳಿಸಿ ಬಡವರ ಬದುಕು ಕಸಿದ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಕಲಬುರಗಿ: ನರೇಗಾ ಕಾಯ್ದೆ ರದ್ದುಗೊಳಿಸಿ ಮೋದಿ ಸರ್ಕಾರ ಬಡವರ ಬದುಕನ್ನು‌ಕಸಿದುಕೊಂಡಿದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ, ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ

ಜ.15ರಂದು ಬೆಂಗಳೂರಿನಲ್ಲಿ ಟೆಸ್ಲಾ ಕಾರು ಶೋರೂಂ ಓಪನ್!

ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ‘ಟೆಸ್ಲಾ’ ಬೆಂಗಳೂರಿನಲ್ಲಿ ಜನವರಿ 15ರಂದು ಶೋ ರೂಂ ಆರಂಭಿಸುತ್ತಿದೆ. ಈ ಮೂಲಕ ವಿಶ್ವದ ಅತ್ಯಂತ ಶ್ರೀಮಂತ ಇಲಾನ್ ಮಸ್ಕ್ ಕಂಪನಿ ಸಿಲಿಕಾನ್ ಸಿಟಿಗೆ ಕಾಲಿಡಲಿದೆ. ಬೆಂಗಳೂರಿನ ಕೂಡ್ಲೂ ಗೇಟ್ ನಲ್ಲಿ ತಾತ್ಕಾಲಿಕವಾಗಿ ಎಸಿಕೆಒ ಡ್ರೈವ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿಕೆ ಶಿವಕುಮಾರ್

ಜೇವರ್ಗಿ: ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದೆ. ಅಷ್ಟೇ ಅಲ್ಲದೇ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿದೆ. ಆ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸಕ್ಕರೆ ಕಾರ್ಖಾನೆ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವು

ಬೆಳಗಾವಿ: ಇಲ್ಲಿನ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕ್ರಶಿಂಗ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಹುಕ್ಕೇರಿ ತಾಲ್ಲೂಕಿನ ಅಮ್ಮಿನಭಾವಿ ಗ್ರಾಮದ ನಿವಾಸಿ ಸಚೀನ ಬಸಪ್ಪ ದ್ಯಾಮಣ್ಣಿ (36) ಮೃತಪಟ್ಟ ದುರ್ದೈವಿ. ಘಟನೆಯ

ವಿಜಯ್ ಹಜಾರೆ ಟ್ರೋಫಿ: ಮುಂಬೈ ಸೋಲಿಸಿ ಸೆಮೀಸ್ ಪ್ರವೇಶಿಸಿದ ಕರ್ನಾಟಕ

ಬೆಂಗಳೂರು: ಆರಂಭಿಕ ದೇವದತ್ ಪಡಿಕ್ಕಲ್ ಮತ್ತು ಕರಣ್ ನಾಯರ್ ಅವರ ಅಜೇಯ ಅರ್ಧಶತಕಗಳ ನೆರವಿನಿಂದ ಕರ್ನಾಟಕ ತಂಡ 55 ರನ್ ಗಳಿಂದ ಮುಂಬೈ ತಂಡವನ್ನು ಸೋಲಿಸಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ಬೆಂಗಳೂರಿನಲ್ಲಿ ಸೋಮವಾರ ನಡೆದ ಮೊದಲ ಕ್ವಾರ್ಟರ್ ಫೈನಲ್

ಜ.15ರಿಂದ ಸುತ್ತ ಬನ್ನಿ ಸುತ್ತೂರು ಜಾತ್ರೆ

ಸುತ್ತೂರು: ಹತ್ತೂರ ಜಾತ್ರೆಗೆ ಸುತ್ತೂರ ಜಾತ್ರೆ ಮೇಲೂ ಎಂಬ ಜನಪದ ಮಾತಿನಂತೆ ಜ.15ರಿಂದ ಈ ಬಾರಿಯ ಸುತ್ತೂರು ಜಾತ್ರೆ ಸಕಲ ರೀತಿಯಲ್ಲಿಯೂ ಹಲವು ವೈವಿದ್ಯಗಳೊಂದಿಗೆ ಸಿದ್ಧಗೊಂಡಿದೆ. ಈ ಕುರಿತು ಸುತ್ತೂರು ಗದ್ದಿಗೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆಎಸ್ ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಮಂಜುನಾಥ್

ಏಕದಿನ ಸರಣಿಯಿಂದ ಹೊರಬಿದ್ದ ವಾಷಿಂಗ್ಟನ್, ಆಯುಷ್ ಬದೋನಿಗೆ ಸ್ಥಾನ!

ಗಾಯಗೊಂಡಿರುವ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಇವರ ಸ್ಥಾನಕ್ಕೆ ಆಯುಷ್ ಬದೋನಿ ಅವರನ್ನು ಆಯ್ಕೆ ಮಾಡಲಾಗಿದೆ. ವಡೋದರದಲ್ಲಿ ಭಾನುವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಬೌಲಿಂಗ್ ವೇಳೆ ವಾಷಿಂಗ್ಟನ್ ಸುಂದರ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು.

ಯಡ್ರಾಮಿಯಲ್ಲಿ 906 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ

ಕಲಬುರಗಿ ( ಯಡ್ರಾಮಿ): ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಲಬುರಗಿ ಇವರ ಸಮುಕ್ತಶ್ರಯದಲ್ಲಿ ಕೆಪಿಎಸ್

ದ್ವೇಷ ಭಾಷಣ ಮಸೂದೆಗೆ ಅನುಮೋದನೆ ನೀಡದಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ

ಬೆಂಗಳೂರು: ಕರ್ನಾಟಕವನ್ನು ಗೂಂಡಾ ರಾಜ್ಯದಿಂದ ಕಾಪಾಡಿ ಎಂದು ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾಗಿ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು. ಲೋಕಭವನದ ಬಳಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಬಿಜೆಪಿ ನಿಯೋಗವು ಇಂದು ಮಾನ್ಯ ರಾಜ್ಯಪಾಲರನ್ನು ಭೇಟಿ ಮಾಡಿತು. ದ್ವೇಷ