Menu

ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಬ್ಯಾನರ್ ಹಾಗೂ ಪೋಸ್ಟರ್‌ ಹಾಕಬೇಡಿ: ಟಿವಿಕೆ ಪಕ್ಷ ಮನವಿ

ತಮಿಳುನಾಡಿನಲ್ಲಿ ರಾಜಕೀಯ ಬ್ಯಾನರ್ ಹಾಗೂ ಪೋಸ್ಟರ್‌ಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸಿಎಂ ವಿಜಯ್‌ ಅವರ ಟಿವಿಕೆ ಪಕ್ಷವು, ಚುನಾವಣೆಯಲ್ಲಿ ಗೆದ್ದ ಬಳಿಕ ವಿಜಯೋತ್ಸವದ ಹೆಸರಿನಲ್ಲಿ ರಸ್ತೆ, ಸಾರ್ವಜನಿಕ ಸ್ಥಳ ಹಾಗೂ ಫುಟ್‌ಪಾತ್‌ಗಳಲ್ಲಿ ಬ್ಯಾನರ್, ಪೋಸ್ಟರ್ ಹಾಕಬಾರದು ಎಂದು ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದೆ. ಟಿವಿಕೆ ಪ್ರಧಾನ ಕಾರ್ಯದರ್ಶಿ ಎನ್. ಆನಂದ್ ಈ ಸಂಬಂಧ ಹೇಳಿಕೆ ನೀಡಿದ್ದು, ರಾಜಕೀಯ ಆಚರಣೆಗಳು ಜನರ ಜೀವನಕ್ಕೆ ತೊಂದರೆ ಆಗಬಾರದು ಎಂದು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕ

ನಾನು ಧಾರವಾಡ ಪ್ರತ್ಯೇಕ ಪಾಲಿಕೆ ಪರವೆಂದ ಸಚಿವ ಸಂತೋಷ್‌ ಲಾಡ್‌

ಈ ಹಿಂದೆ  ಧಾರವಾಡ  ಪ್ರತ್ಯೇಕ ಪಾಲಿಕೆ ಕ್ಯಾಬಿನೆಟ್‌ನಲ್ಲಿ ಪಾಸ್ ಆಗಿ ರಾಜ್ಯಪಾಲರ ಬಳಿ ಹೋಗುವಂತೆ ಮಾಡುವಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈಗಲೂ ನಾನು ಪ್ರತ್ಯೇಕ ಪಾಲಿಕೆ ಪರವಾಗಿದ್ದೇನೆ.  ಕ್ಯಾಬಿನೆಟ್ ಸಭೆ ಇದ್ದು, ಸಭೆಯಲ್ಲೂ ಈ ಬಗ್ಗೆ ಪ್ರಸ್ತಾಪ ಮಾಡುವುದಾಗಿ ಸಚಿವ

ಐಪಿಎಲ್ ಬೆಟ್ಟಿಂಗ್‌ಗಾಗಿ ಸಾಲ: ಯುವಕ ಸುಸೈಡ್‌

ಐಪಿಎಲ್ ಬೆಟ್ಟಿಂಗ್‌ಗಾಗಿ ಸಾಲ ಮಾಡಿಕೊಂಡು ತೀರಿಸಲಾಗದೆ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ. ತಮಿಳುನಾಡಿನ ಸಿಂಗಸದನಪಲ್ಲಿ ಗ್ರಾಮದ ಶಿವಕುಮಾರ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಆರು ವರ್ಷದಿಂದ ನೆಲಮಂಗಲದ ಕಾರ್ ಗ್ಯಾರೇಜ್‌ನಲ್ಲಿ ಕೆಲಸ ಮಾಡಿಕೊಂಡು

ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮ ಆರೋಪ: NEET-UG ಪರೀಕ್ಷೆ ರದ್ದುಗೊಳಿಸಿದ NTA

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮ ಆರೋಪಗಳ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಮೇ ಮೂರರಂದು ದೇಶಾದ್ಯಂತ ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಅಧಿಕೃತವಾಗಿ ರದ್ದುಗೊಳಿಸಿದೆ. ಗಂಭೀರ ಆರೋಪಗಳ ಕಾರಣ ಕೇಂದ್ರ ಸರ್ಕಾರದ ಅನುಮೋದನೆಯೊಂದಿಗೆ ಈ

11 ಗಂಟೆ ಈಜಿ ಶ್ರೀಲಂಕಾದಿಂದ ಧನುಷ್ಕೋಡಿ ತಲುಪಿದ ಬೆಂಗಳೂರಿನ ಟೆಕ್ಕಿ ದಂಪತಿ

ಬೆಂಗಳೂರಿನ ಟೆಕ್ಕಿ ದಂಪತಿ ಶ್ರೀಲಂಕಾದಿಂದ 11 ಗಂಟೆ ಈಜಿಕೊಂಡು ಭಾರತದ ದಡ ಸೇರಿದ್ದಾರೆ. ಐಟಿ ಉದ್ಯಮಿಗಳಾದ ಡ್ಯಾನಿಶ್ ಅಬ್ದಿ ಮತ್ತು ವೃಶಾಲಿ ಪ್ರಸಾದೆ ಈ ದಾಖಲೆ ಸೃಷ್ಟಿಸಿದ್ದಾರೆ. ಶ್ರೀಲಂಕಾದಿಂದ ರಾಮ ಸೇತು ಮಾರ್ಗದ ಮೂಲಕ 11 ಗಂಟೆ ಈಜಿಕೊಂಡು ಭಾರತ ತಲುಪಿದ್ದು,

ಶಾಲೆ-ಕಾಲೇಜುಗಳು, ದೇವಸ್ಥಾನಗಳು, ಬಸ್ ನಿಲ್ದಾಣಗಳ ಬಳಿ ಮದ್ಯದಂಗಡಿ ಮುಚ್ಚಲು ತಮಿಳುನಾಡು ಸಿಎಂ ವಿಜಯ್‌ ಆದೇಶ

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ರಾಜ್ಯದ ಶಾಲೆ-ಕಾಲೇಜುಗಳು, ದೇವಸ್ಥಾನಗಳು, ಬಸ್ ನಿಲ್ದಾಣಗಳ ಬಳಿ ಇರುವ 717 ಟಾಸ್ಮ್ಯಾಕ್ ಮದ್ಯದಂಗಡಿಗಳನ್ನು ತಕ್ಷಣ ಮುಚ್ಚುವಂತೆ ಆದೇಶಿಸಿದ್ದಾರೆ. ಮುಂದಿನ ಎರಡು ವಾರಗಳೊಳಗೆ ಈ ಎಲ್ಲ ಅಂಗಡಿಗಳಿಗೆ ಬೀಗ ಹಾಕುವಂತೆ ಸಿಎಂ ವಿಜಯ್ ಖಡಕ್ ಆಗಿ ಸೂಚಿಸಿದ್ದಾರೆ.

ಕೆಆರ್‌ಎಸ್‌ ನೀರಿನ ಮಟ್ಟ 90 ಅಡಿಗೆ ಕುಸಿತ: ಬೆಂಗಳೂರಿಗೂ ಆತಂಕ

ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟಿನ ನೀರಿನ ಮಟ್ಟವು 90 ಅಡಿಗೆ ಕುಸಿದಿದ್ದು, ಬೆಂಗಳೂರು ನಗರ ಸೇರಿದಂತೆ ಹಳೆ ಮೈಸೂರು ಭಾಗದ ಜನರಿಗೆ ಕುಡಿಯುವ ನೀರಿನ ಆತಂಕ ಎದುರಾಗಿದೆ. 124.80 ಅಡಿ ಗರಿಷ್ಠ ಮಟ್ಟವನ್ನು ಹೊಂದಿರುವ ಜಲಾಶಯದಲ್ಲಿ ಈಗ 90 ಅಡಿ

ಯಾದಗಿರಿಯಲ್ಲಿ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವು

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ತುಮಕೂರು ಗ್ರಾಮದ ಸಿದ್ದಪ್ಪ ಎಂಬವರ ಮನೆಯ ಗೋಡೆ ನಿರಂತರ ಮಳೆಗೆ ಕುಸಿದಿದೆ .ಈ ವೇಳೆ ಮನೆಯ

ಕೊಪ್ಪಳದಲ್ಲಿ ವೈಭವದ ಹುಲಿಗೆಮ್ಮ ದೇವಿ ರಥೋತ್ಸವ

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಹುಲಿಗೆಮ್ಮ ದೇವಿ ರಥೋತ್ಸವವವು ಮೇ 11ರಂದು ಸಡಗರ, ಸಂಭ್ರಮದಿಂದ ನೆರವೇರಿತು. ಕೊಪ್ಪಳ ತಾಲೂಕಿನ ಸುಕ್ಷೇತ್ರ ಹುಲಿಗಿ ಗ್ರಾಮದಲ್ಲಿ ಗೋಧೂಳಿ ಸಮಯ ಸಂಜೆ ಸರಿಯಾಗಿ 5.30ಕ್ಕೆ ಆರಂಭಗೊಂಡ ರಥೋತ್ಸವದ ಚಾಲನಾ ಸಮಾರಂಭಕ್ಕೆ ಕೊಪ್ಪಳ ಸೇರಿದಂತೆ ಗಡಿ ಜಿಲ್ಲೆ ವಿಜಯನಗರ,

ಕೇಂದ್ರ ಸಚಿವರು, ಅಧಿಕಾರಿಗಳು ಸಾರ್ವಜನಿಕ ಸಾರಿಗೆ ಬಳಸಲಿ, ಬಿಜೆಪಿಯಿಂದ ತ್ಯಾಗ ಶುರುವಾಗಲಿ

“ಚಿನ್ನ ಖರೀದಿ ಮಾಡಬೇಡಿ, ಇಂಧನ ಬಳಕೆ ಕಡಿಮೆ ಮಾಡಿ ಎಂದು ಸಲಹೆ ನೀಡುತ್ತಿರುವ ಪ್ರಧಾನ ಮಂತ್ರಿಗಳು, ಇವುಗಳ ಬೆಲೆ ಏರಿಕೆಯಾಗಿದ್ದು ಯಾಕೆ? ಯಾರಿಂದ ಬೆಲೆ ಏರಿಕೆಯಾಗಿದೆ ಎಂಬುದನ್ನು ವಿವರಿಸಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನ ಸರ್ಕಾರಿ ನಿವಾಸ ಕುಮಾರಪಾರ್ಕ್