Menu

ಅಕ್ರಮ ಆಸ್ತಿ ಆರೋಪ: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಹೊಂದಿರುವ ಆರೋಪದಡಿ ಶಿವಮೊಗ್ಗ, ಬಳ್ಳಾರಿ, ಬೆಳಗಾವಿಯ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಅಧಿಕಾರಿ ಶೋಭಾ ಅವರ ಶಿವಮೊಗ್ಗದ ನವಲೆ ಬಡಾವಣೆಯ ರೂಂ, ಶಿಕಾರಿಪುರದ ಚನ್ನಕೇಶವ ನಗರದ ಮನೆ, ಶಿಕಾರಿಪುರ ತಾಲೂಕು ತರಲಘಟ್ಟದ ತೋಟದ ಮನೆ, ಸಾಗರ ತಾಲೂಕು ಆಚಾಪುರದ ಮಲ್ನಾಡ್ ಇಂಟರ್ ನ್ಯಾಶನಲ್ ಸ್ಕೂಲ್​ಗಳ ಮೇಲೆ ದಾಳಿ ನಡೆಸಲಾಗಿದೆ. ಬಿಸಿಎಂ ಇಲಾಖೆಯ ಅಧಿಕಾರಿ ರಾಘವೇಂದ್ರ ಅವರ ಶಿವಮೊಗ್ಗದ ಚಾಲುಕ್ಯನಗರ ಬಡಾವಣೆಯ ಮನೆ

ಅನೈತಿಕ ಸಂಬಂಧ: ಪ್ರೇಯಸಿಯ ಗಂಡನಿಗೆ ಮದ್ಯ ಕುಡಿಸಿ ಕೊಲೆ

ಅನೈತಿಕ ಸಂಬಂಧಕ್ಕೆ ತೊಂದರೆಯಾಗುತ್ತಿದೆ ಎಂದು ಪ್ರೇಯಸಿಯ ಪತಿಯನ್ನು ಪ್ರಿಯಕರ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುನೀಲ್ ನಾಯಕ್ ಕೊಲೆಯಾದ ವ್ಯಕ್ತಿ.  ಸುನೀಲ್‌ ನಾಯಕನ ಪತ್ನಿಯ ಪ್ರಿಯಕರ ಬಸುದೇವ್ ಮಲ್ಲಿಕ್ ಕೊಲೆ ಮಾಡಿದಾತ. ಬಸುದೇವ್ ಮಲ್ಲಿಕ್ ಸುನೀಲ್ ನಾಯಕ್ ಪತ್ನಿಯೊಂದಿಗೆ ಸಲುಗೆ

20 ಅಡಿ ಆಳದ ಬಾವಿಯಲ್ಲಿ ಅನ್ನ ನೀರಿಲ್ಲದೆ ಮೂರು ದಿನ: ಒಟಿಪಿಯಿಂದ ಬದುಕಿದ ಜೀವ

ಆಕಸ್ಮಿಕವಾಗಿ 20 ಅಡಿ ಆಳದ ಬಾವಿಗೆ ಬಿದ್ದಿದ್ದ 60 ವರ್ಷದ ವ್ಯಕ್ತಿಯೊಬ್ಬರು ಮೂರು ದಿನ ಅನ್ನ ನೀರು ಇಲ್ಲದೆ ಪವಾಡ ಸದೃಶವಾಗಿ ಸುರಕ್ಷಿತವಾಗಿ ಹೊರ ಬಂದಿರುವ ಘಟನೆ ಉಡುಪಿಯ ಕೊಡವೂರಿನಲ್ಲಿ ನಡೆದಿದೆ. ಇದಕ್ಕೆ ಕಾರಣ ಗ್ಯಾಸ್ ಸಿಲಿಂಡರ್‌ಗೆ ಸಂಬಂಧಿಸಿದಂತೆ ಮೊಬೈಲ್‌ಗೆ ಬಂದಿರುವ

ಕೆಎಸ್ಸಾರ್ಟಿಸಿ, ಬಿಎಂಟಿಸಿ ನೌಕರರಿಗೆ ವೇತನ ಹೆಚ್ಚಳ ಪ್ರಸ್ತಾವ

2025ರ ಏ.1ರಿಂದ ಜಾರಿಗೆ ಬರುವಂತೆ ಬಿಎಂಟಿಸಿ ನೌಕರರಿಗೆ ಶೇ.3 ಮತ್ತು ಕೆಎಸ್ಸಾರ್ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಕೆಕೆಆರ್‌ಟಿಸಿ ನೌಕರರಿಗೆ ಶೇ.5ರಷ್ಟು ವೇತನ ಹೆಚ್ಚಳದ ಪ್ರಸ್ತಾವವನ್ನು ಕೆಎಸ್ಸಾರ್ಟಿಸಿ ಅಧಿಕಾರಿಗಳು ಸಾರಿಗೆ ನೌಕರ ಸಂಘಟನೆಗಳ ಮುಂದಿಟ್ಟಿದ್ದಾರೆ. ಈ ಕುರಿತು ಚರ್ಚಿಸಲು ಏ.17ರಂದು ಸಭೆ ನಡೆಯಲಿದೆ. ವೇತನ ಹೆಚ್ಚಳ

ರಾಜ್ಯದ ಜನತೆ ಬಿಜೆಪಿಗೆ ಯಾವತ್ತೂ ಬಹುಮತ ನೀಡಿಲ್ಲ: ಮುಖ್ಯಮಂತ್ರಿ

ಬಿಜೆಪಿ ರಾಜ್ಯದಲ್ಲಿ ಒಂಬತ್ತು ವರ್ಷ ಅಧಿಕಾರ ನಡೆಸಿದ್ದರೂ ಒಮ್ಮೆಯೂ ಜನಾಭಿಪ್ರಾಯ ಪಡೆದು ಅಧಿಕಾರಕ್ಕೆ ಬರಲಿಲ್ಲ. ರಾಜ್ಯದ ಜನತೆ ಬಿಜೆಪಿಗೆ ಯಾವತ್ತೂ ಪೂರ್ಣ ಬಹುಮತ ಕೊಟ್ಟಿಲ್ಲ. ಎಂಟು ಜನ‌ ಶಾಸಕರಿಗೆ ಕೋಟ್ಯಾಂತರ ರೂಪಾಯಿ ಕೊಟ್ಟು ರಾಜೀನಾಮೆ ಕೊಡಿಸಿ ಬಳಿಕ ಚುನಾವಣೆಯಲ್ಲೂ 25-30 ಕೋಟಿ

ಗಾಜನೂರು ರೆಸಾರ್ಟ್‌ನಲ್ಲಿ ವಿದ್ಯುತ್‌ ಸ್ಪರ್ಶಕ್ಕೆ ಮಹಿಳೆ ಬಲಿ

ಶಿವಮೊಗ್ಗದ ಗಾಜನೂರು ಬಳಿಯ ತುಂತುರು ರೆಸಾರ್ಟ್‌ನಲ್ಲಿ ವಿದ್ಯುತ್ ಶಾಕ್‌ಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಅಬ್ಬಲಗೆರೆ ಗ್ರಾಮದ ನಿವಾಸಿ ನಾಗಮ್ಮ (45) ಮೃತಪಟ್ಟವರು. ರೆಸಾರ್ಟ್‌ನಲ್ಲಿ ನಡೆಯುತ್ತಿದ್ದ ನಿಶ್ಚಿತಾರ್ಥ ಕಾರ್ಯಕ್ರಮದ ಕ್ಯಾಟರಿಂಗ್ ಕೆಲಸಕ್ಕೆ ನಾಗಮ್ಮ ತೆರಳಿದ್ದರು. ರೆಸಾರ್ಟ್ ಅಲಂಕಾರಕ್ಕಾಗಿ ಅಳವಡಿಸಲಾಗಿದ್ದ ಲೈಟಿಂಗ್‌ನಿಂದಾಗಿ ಬೇಲಿಗೆ ವಿದ್ಯುತ್ ಪ್ರವಹಿಸಿತ್ತು, 

ರಾಜಕೀಯ ಮೀಸಲು: ಮಹಿಳಾ ಸಬಲೀಕರಣವೋ, ಬಿಜೆಪಿ ಶಕ್ತಿವರ್ಧನೆಯೋ?

ರಾಜಕೀಯವಾಗಿ ಮಹಿಳೆಯರಿಗೆ ಶೇ. ೫೦ ಮೀಸಲು ಕಲ್ಪಿಸಬೇಕಾದರೆ. ಲೋಕಸಭೆ ಮತ್ತು ದೇಶದ ಎಲ್ಲ ವಿಧಾನಸಭೆಗಳ ಈಗಿನ ಸೀಟುಗಳ ಪ್ರಮಾಣ ಹೆಚ್ಚಳವಾಗಲೇಬೇಕು. ಆದರೆ ಇದಕ್ಕೆ ಸಂಬಂಧಿಸಿದ ನೀಲನಕ್ಷೆ ಏನು, ಇದರ ಸ್ವರೂಪವೇನು . ಇದರ ಜಾರಿ ಮತ್ತು ಅನುಷ್ಠಾನ ಹೇಗೆ  ಎಂಬಿತ್ಯಾದಿ ವಿವರಗಳು

ಇಸ್ರೇಲ್‌- ಇರಾನ್‌ ಯುದ್ಧದಿಂದ ಬದುಕು ಅತಂತ್ರ: ದಂಪತಿ ಕೊಡಗಿನಲ್ಲಿ, ಮಕ್ಕಳು ಇರಾನ್‌ನಲ್ಲಿ

ಮಕ್ಕಳನ್ನು ಇರಾನ್‌ನಲ್ಲಿ ಬಿಟ್ಟು ದೀರ್ಘ ರಜೆಯಲ್ಲಿ ಕೊಡಗಿಗೆ ಬಂದಿದ್ದ ದಂಪತಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಮಾನ ಸಂಚಾರ ರದ್ದುಗೊಂಡ ಕಾರಣ ಇರಾನ್‌ಗೆ ಹೋಗಲಾಗದೆ ಪರಿತಪಿಸುತ್ತಿದ್ದರೆ ಮತ್ತೊಂದೆಡೆ ಅವರಿಗೆ ಇರಾನ್‌ನಲ್ಲಿರುವ ಮಕ್ಕಳನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ದಂಪತಿಯ ಪಾಸ್‌ಪೋರ್ಟ್‌ ಅವಧಿ ಮುಕ್ತಾಗೊಳ್ಳುವ ಹಂತದಲ್ಲಿದ್ದು, ಮತ್ತೆ

ಲವ್‌, ಸೆಕ್ಸ್‌ ಬಳಿಕ ಮದುವೆಗೆ ಮೂರು ಕೋಟಿ ಬೇಡಿಕೆಯಿಟ್ಟ ಯುವಕನ ಬಂಧನ

ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಬ್ಬ ಬೆಳಗಾವಿಯ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿ ಮದುವೆಯಾಗಲು ಮೂರು ಕೋಟಿ ರೂಪಾಯಿ ಬೇಡಿಕೆಯಿಟ್ಟು ವಂಚಿಸಿದ್ದಾನೆ.  ಸಂತ್ರಸ್ತೆ ನೀಡಿರುವ ದೂರು ಆಧರಿಸಿ ಶಹಾಪುರ ಪೊಲೀಸರು ಆರೋಪಿ ಈಶ್ವರಸಿಂಗ್ ಬಡಗೂಜರ್‌ನನ್ನು ಬಂಧಿಸಿದ್ದಾರೆ. ಆರೋಪಿಇನ್‌ಸ್ಟಾಗ್ರಾಂ ಮೂಲಕ ಸಂತ್ರಸ್ತ ಯುವತಿಯ

ದೇವೇಗೌಡರು, ಕುಮಾರಸ್ವಾಮಿ, ಚಲವಾದಿ  ಬಿಜೆಪಿ-ಮೋದಿ ಬಗ್ಗೆ ಎಂಥ ಮಾತುಗಳಾಡಿದ್ದರು: ಸಿದ್ದರಾಮಯ್ಯ

ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರಶ್ನಿಸಿದರು. ದಾವಣಗೆರೆಯಲ್ಲಿ ಮಾಧ್ಯಮದವರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿ, ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿರುವ ಇವರೆಲ್ಲಾ ಮೊದಲೆಲ್ಲಾ ಬಿಜೆಪಿ, RSS, ಮೋದಿಯವರ