Featured
ಇಸ್ರೇಲ್- ಇರಾನ್ ಯುದ್ಧದಿಂದ ಬದುಕು ಅತಂತ್ರ: ದಂಪತಿ ಕೊಡಗಿನಲ್ಲಿ, ಮಕ್ಕಳು ಇರಾನ್ನಲ್ಲಿ
ಮಕ್ಕಳನ್ನು ಇರಾನ್ನಲ್ಲಿ ಬಿಟ್ಟು ದೀರ್ಘ ರಜೆಯಲ್ಲಿ ಕೊಡಗಿಗೆ ಬಂದಿದ್ದ ದಂಪತಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಮಾನ ಸಂಚಾರ ರದ್ದುಗೊಂಡ ಕಾರಣ ಇರಾನ್ಗೆ ಹೋಗಲಾಗದೆ ಪರಿತಪಿಸುತ್ತಿದ್ದರೆ ಮತ್ತೊಂದೆಡೆ ಅವರಿಗೆ ಇರಾನ್ನಲ್ಲಿರುವ ಮಕ್ಕಳನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ದಂಪತಿಯ ಪಾಸ್ಪೋರ್ಟ್ ಅವಧಿ ಮುಕ್ತಾಗೊಳ್ಳುವ ಹಂತದಲ್ಲಿದ್ದು, ಮತ್ತೆ ಇರಾನ್ಗೆ ಹೋಗಲು ಸಾಧ್ಯವಾಗುವುದೋ ಇಲ್ಲವೋ ಎಂಬ ಭಯದಲ್ಲಿದ್ದಾರೆ. ಇರಾನ್ ಪ್ರಜೆಯನ್ನು ಮದುವೆಯಾಗಿರುವ ಕೊಡಗು ಮೂಲದ ಮಹಿಳೆ ದೀರ್ಘ ರಜೆಯ ಮೇಲೆ ಮೂರ್ನಾಡು ಸಮೀಪದ ಕಾಂತೂರಿಗೆ ಬಂದಿದ್ದರು. ಕೊಡಗಿನ
ಲವ್, ಸೆಕ್ಸ್ ಬಳಿಕ ಮದುವೆಗೆ ಮೂರು ಕೋಟಿ ಬೇಡಿಕೆಯಿಟ್ಟ ಯುವಕನ ಬಂಧನ
ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಬ್ಬ ಬೆಳಗಾವಿಯ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿ ಮದುವೆಯಾಗಲು ಮೂರು ಕೋಟಿ ರೂಪಾಯಿ ಬೇಡಿಕೆಯಿಟ್ಟು ವಂಚಿಸಿದ್ದಾನೆ. ಸಂತ್ರಸ್ತೆ ನೀಡಿರುವ ದೂರು ಆಧರಿಸಿ ಶಹಾಪುರ ಪೊಲೀಸರು ಆರೋಪಿ ಈಶ್ವರಸಿಂಗ್ ಬಡಗೂಜರ್ನನ್ನು ಬಂಧಿಸಿದ್ದಾರೆ. ಆರೋಪಿಇನ್ಸ್ಟಾಗ್ರಾಂ ಮೂಲಕ ಸಂತ್ರಸ್ತ ಯುವತಿಯ
ದೇವೇಗೌಡರು, ಕುಮಾರಸ್ವಾಮಿ, ಚಲವಾದಿ ಬಿಜೆಪಿ-ಮೋದಿ ಬಗ್ಗೆ ಎಂಥ ಮಾತುಗಳಾಡಿದ್ದರು: ಸಿದ್ದರಾಮಯ್ಯ
ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರಶ್ನಿಸಿದರು. ದಾವಣಗೆರೆಯಲ್ಲಿ ಮಾಧ್ಯಮದವರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿ, ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿರುವ ಇವರೆಲ್ಲಾ ಮೊದಲೆಲ್ಲಾ ಬಿಜೆಪಿ, RSS, ಮೋದಿಯವರ
ಭಾರತದಿಂದ ಇಸ್ರೇಲ್ಗೆ ಏರ್ ಇಂಡಿಯಾ ವಿಮಾನ ಮೇ 31 ರವರೆಗೆ ರದ್ದು
ಇರಾನ್- ಇಸ್ರೇಲ್ ಸಂಘರ್ಷದ ಭಾಗವಾಗಿ ಪಶ್ಚಿಮ ಏಷ್ಯಾ ಹೊತ್ತಿ ಉರಿಯುತ್ತಿರುವ ಕಾರಣ ಏರ್ ಇಂಡಿಯಾ ಮೇ 31 ರವರೆಗೆ ಇಸ್ರೇಲ್ಗೆ ವಿಮಾನಗಳನ್ನು ಸ್ಥಗಿತಗೊಳಿಸಿದೆ. ನವದೆಹಲಿ-ಟೆಲ್ ಅವೀವ್ ಮಾರ್ಗದಲ್ಲಿ ಮೇ 31 ರವರೆಗೆ ವಿಮಾನಯಾನವನ್ನು ಏರ್ ಲೈನ್ಸ್ ಸ್ಥಗಿತಗೊಳಿಸಿದೆ ಎಂದು ಏರ್ ಇಂಡಿಯಾ
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಚಿನ್ನಕಳವು ಪ್ರಕರಣ ಏನಾಯ್ತು: ಡಿಕೆ ಶಿವಕುಮಾರ್
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಚಿನ್ನದ ಕಳವು ಪ್ರಕರಣ ಏನಾಯ್ತು? ಕರ್ನಾಟಕದಲ್ಲಿ ಒಬ್ಬ ಅಧಿಕಾರಿ ಒಂದು ನಿಗಮದಲ್ಲಿ ಸ್ವಲ್ಪ ಕೋಟಿ ಹಣವನ್ನು ವರ್ಗಾವಣೆ ಮಾಡಿದ ಕಾರಣಕ್ಕೆ ಕೇಂದ್ರ ತನಿಖಾ ಸಂಸ್ಥೆಗಳು ದಾಳಿ ಮಾಡಿದವು. ಈ ಪ್ರಕರಣದಲ್ಲಿ ನಮ್ಮ ಸರ್ಕಾರ ರಚಿಸಿದ ವಿಶೇಷ
ಇಸ್ರೇಲ್ನ 15 ಕ್ಕೂ ಹೆಚ್ಚು ಕಡೆ ಇರಾನ್ ದಾಳಿ
ಉತ್ತರ ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಹೈಫಾ ನಗರ ಸೇರಿದಂತೆ 15 ಕ್ಕೂ ಹೆಚ್ಚು ಕಡೆಗಳಲ್ಲಿ ಸ್ಫೋಟ ಸಂಭವಿಸಿದೆ. ಅಮೆರಿಕ-ಇಸ್ರೇಲ್ ನಡೆಸಿದ ದಾಳಿಗಳಲ್ಲಿ ತನ್ನ 34 ಪ್ರಜೆಗಳನ್ನು ಕಳೆದುಕೊಂಡಿದ್ದಕ್ಕೆ ಇರಾನ್ ಈ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ. ಹೈಫಾದಲ್ಲಿ ಬಹುಮಹಡಿ
ಮಹಿಳೆ ಆತ್ಮಹತ್ಯೆ: ವಿಷಯ ತಿಳಿದು ಆಸ್ಪತ್ರೆಗೆ ಬರುತ್ತಿದ್ದ ಪತಿ ಅಪಘಾತದಲ್ಲಿ ಸಾವು
ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಆಸ್ಪತ್ರೆಗೆ ಆಗಮಿಸುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ನಡೆದಿದೆ. ಮಧುರಾ ಕರೆಪ್ಪ ಮಾದರ (30), ಕರೆಪ್ಪ ಗಂಗಪ್ಪ ಮಾದರ (36) ಮೃತ ದಂಪತಿ. ಮಧುರಾ ಹೊಟ್ಟೆನೋವಿನಿಂದ
ಸ್ನೇಹಿತನ ಮದುವೆಗೆಂದು ಬೆಂಗಳೂರಿನಿಂದ ಹೋಗಿದ್ದ ಟೆಕ್ಕಿ ಭದ್ರಾ ನದಿ ಪಾಲು
ಚಿಕ್ಕಮಗಳೂರು ನರಸಿಂಹರಾಜಪುರ ತಾಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತ ವ್ಯಕ್ತಿ ಅಭಿಷೇಕ್ (27)ಗದಗದವರಾಗಿದ್ದು, ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಭಿಷೇಕ್ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಇತರ
ಹಾವೇರಿಯಲ್ಲಿ ಟ್ರ್ಯಾಕ್ಟರ್ ಹರಿದು ಮನೆ ಮುಂದೆ ನಿಂತಿದ್ದ ಮಗು ಸಾವು
ಹಾವೇರಿಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ಮನೆ ಮುಂದೆ ನಿಂತಿದ್ದ ಎರಡು ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದಿದ್ದು, ಮಗು ಸ್ಥಳದಲ್ಲಿಯೇ ಅಸು ನೀಗಿದೆ. ರಬೀಯಾ ದೊಡ್ಡಮನಿ ಮೃತಪಟ್ಟ ಮಗು. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರ್ಮುಜ್ ತೆರೆಯುವಂತೆ ಟ್ರಂಪ್ ಬೆದರಿಕೆ: ನಷ್ಟ ತುಂಬಿ ಕೊಡಿ ಎಂದ ಇರಾನ್
ಇಸ್ರೇಲ್- ಅಮೆರಿಕ ಮಾಡಿರುವ ದಾಳಿಗಳಿಂದ ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದಲ್ಲಿ ಹರ್ಮುಜ್ ಜಲಸಂಧಿ ತೆರೆಯುವ ಮಾತೇ ಇಲ್ಲ ಎಂದು ಇರಾನ್ ಹೊಸ ಷರತ್ತುಗಳನ್ನು ಅಮೆರಿಕದ ಮುಂದಿಟ್ಟಿದೆ. ಒಪ್ಪಂದಕ್ಕೆ ಬನ್ನಿ ಅಥವಾ ಶರಣಾಗಿ. ಇಲ್ಲವಾದಲ್ಲಿ ಮಾರಕ ದಾಳಿ ಎದುರಿಸಬೇಕಾಗುತ್ತದೆ ಎಂದು ಅಮೆರಿಕ




