Featured
ಹಾವೇರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು ಆರೋಪ
ಹಾವೇರಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿರುವುದಾಗಿ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯ ವೈದ್ಯರು ಮತ್ತು ನರ್ಸ್ಗಳ ನಿರ್ಲಕ್ಷ್ಯಕ್ಕೆ ಹಸುಗೂಸು ಬಲಿಯಾಗಿದೆ ಎನ್ನಲಾಗುತ್ತಿದೆ. ಮಹಿಳೆ ಆಸ್ಪತ್ರೆಯ ಶೌಚಾಲಯಕ್ಕೆ ಹೋಗುತ್ತಿರುವಾಗಲೇ ಹೆರಿಗೆಯಾಗಿದ್ದು, ನವಜಾತ ಶಿಶುವಿಗೆ ಪೆಟ್ಟಾಗಿ ಮೃತಪಟ್ಟಿದೆ. ಇದಕ್ಕೆ ಆಸ್ಪತ್ರೆಯ ಸಿಬ್ಬಂದಿಯೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ರಾಣೆಬೆನ್ನೂರಿನ ಕಾಕೋಳ ಗ್ರಾಮ ರೂಪಾ ಗಿರೀಶ್ ಕರಬಣ್ಣನವರ ಎಂಬ ಮಹಿಳೆಯನ್ನು ಹೆರಿಗೆಗಾಗಿ ಆಸ್ಪತ್ರೆಗೆ ಕರತರಲಾಗಿತ್ತು. ಬಳಿಕ, ಹೆರಿಗೆ
ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ತುಮಕೂರಿನ ಬಾಲ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು,
ಮೇಕೆದಾಟು ಯೋಜನೆಗೆ ಪರಿಷ್ಕೃತ ಡಿಪಿಆರ್ ಸಲ್ಲಿಕೆ: ಡಿಕೆ ಶಿವಕುಮಾರ್
“ಮೇಕೆದಾಟು ಯೋಜನೆಗೆ ಪರಿಷ್ಕೃತ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಕುರಿತು ಅಧಿಕಾರಿಗಳ ಸಭೆ ಹಾಗೂ ಕಾವೇರಿ ನೀರಾವರಿ ನಿಗಮ ನಿರ್ದೇಶಕರ ಮಂಡಳಿ ಸಭೆ ಬಳಿಕ ಶಿವಕುಮಾರ್ ಮಾಧ್ಯಮಗಳ
ಮೈಸೂರಿನಲ್ಲಿ ಹೆಣ್ಣು ಹುಲಿ, 3 ಮರಿ ಸೆರೆ: 15ಕ್ಕೇರಿದ ಹುಲಿಗಳ ಸೆರೆ ಸಂಖ್ಯೆ
ರೈತನ ಮೇಲೆ ದಾಳಿ ಮಾಡಿದ್ದ ಹೆಣ್ಣು ಹುಲಿ ಹಾಗೂ ಅದರ ಮೂರು ಮರಿಗಳನ್ನು ಮೈಸೂರಿನಲ್ಲಿ ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ಇದರಿಂದ ಕಳೆದ ಒಂದು ತಿಂಗಳಲ್ಲಿ ಮೈಸೂರು ಭಾಗದಲ್ಲಿ ಸೆರೆಹಿಡಿಯಲಾದ ಹುಲಿಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಇತ್ತೀಚಿಗೆ ಮುಳ್ಳೂರು ತಾಲೂಕಿನ ರೈತರ ಮೇಲೆ
ಬಿಎಸ್ ಯಡಿಯೂರಪ್ಪಗೆ ಸಂಕಷ್ಟ: ಡಿ. 2ರಂದು ಖುದ್ದು ಹಾಜರಾತಿಗೆ ಸಮನ್ಸ್ ಜಾರಿ!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳಿಗೆ ಫೋಕ್ಸೊ ಪ್ರಕರಣದ ವಿಚಾರಣೆಗಾಗಿ ಖುದ್ದು ಹಾಜರಾತಿಗೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಬಾಲಕಿ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಆರೋಪದಡಿ ಫೋಕ್ಸೊ ಕಾಯ್ದೆಯಡಿ ಬಿಎಸ್ ಯಡಿಯೂರಪ್ಪ ಹಾಗೂ ನಾಲ್ವರ ವಿಚಾರಣೆ ನೀಡಿದ್ದ
ವಿಚ್ಚೇದಿತ ಪತ್ನಿಗೆ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣ ಸ್ಫೋಟ: ಬೆದರಿಕೆ ಆರೋಪಿ ಬಂಧನ
ಬೆಂಗಳೂರು: ನನ್ನ ವಿಚ್ಚೇದಿತ ಪತ್ನಿಗೆ ಮಾನಸಿಕ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುತ್ತೇನೆ” ಎಂದು ಬಿಎಂಆರ್ಸಿಎಲ್ ಅಧಿಕೃತ ಖಾತೆಗೆ ಇ ಮೇಲ್ ನಲ್ಲಿ ಬೆದರಿಕೆ ಹಾಕಿದ್ದ ಮಾನಸಿಕ ಅಸ್ವಸ್ಥನನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. rajivsettyptp@gmail.com ಹೆಸರಿನ ಖಾತೆಯಿಂದ ನವೆಂಬರ್ 13ರಂದು
ಮೆಟ್ರೋ ವಿಸ್ತರಣೆಯಿಂದ ಅಭಿವೃದ್ಧಿ, ರಾಜಕೀಯ ಬೇಡ: ಪರಮೇಶ್ವರ್ ಮನವಿ
ಬೆಂಗಳೂರು-ತುಮಕೂರು ಮೆಟ್ರೋ ಯೋಜನೆ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ ಎಂದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ. ತುಮಕೂರಿಗೆ ಮೆಟ್ರೋ ವಿಸ್ತರಣೆಯಿಂದ ಆಗುವ ಅನೇಕ
ಕರ್ನಾಟಕವು ಜಾಗತಿಕ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ
ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ
ಮಂಡ್ಯದ ಶಿವನಸಮುದ್ರ ನಾಲೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ!
ಮಂಡ್ಯದ ಶಿವನ ಸಮುದ್ರದ ನಾಲೆಗೆ ಬಿದ್ದಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸತತ 3 ಗಂಟೆಗಳ ಕಾರ್ಯಾಚರಣೆ ನಂತರ ರಕ್ಷಿಸಿದ್ದಾರೆ. ಶಿವನಸಮುದ್ರದ ನಾಲೆಗೆ ಬಿದ್ದಿದ್ದ ಕಾಡಾನೆ ಹೊರಗೆ ಬರಲು ಆಗದೇ ಕಳೆದೆರಡು ದಿನಗಳಿಂದ ಬಳಲುತ್ತಿತ್ತು. ಎರಡು ದಿನಗಳಿಂದ ಆಹಾರ ಇಲ್ಲದೇ ಹಾಗೂ
ಆಂಧ್ರಪ್ರದೇಶ ಗಡಿಯಲ್ಲಿ ಮದ್ವಿ ಹಿದ್ಮಾ ಸೇರಿ ಆರು ನಕ್ಸಲರ ಎನ್ಕೌಂಟರ್
ಛತ್ತೀಸ್ಗಢ-ಆಂಧ್ರಪ್ರದೇಶ ಗಡಿ ಪ್ರದೇಶದ ಾಲ್ಲೂರಿ ಸೀತಾರಾಮರಾಜ ಜಿಲ್ಲೆಯ ಮಾರೇಡುಮಿಲ್ಲಿ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಆರು ನಕ್ಸಲರು ಹತರಾಗಿದ್ದಾರೆ ಎಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹತರಾದವರಲ್ಲಿ ಭಾರತದ ಕುಖ್ಯಾತ ಮತ್ತು ಪೊಲೀಸ್ ಗೆ




