Featured
ಬೆಂಗಳೂರು ಚುನಾವಣಾ ಅಕ್ರಮ: ಎಸ್ಐಟಿ ತನಿಖೆ ಮನವಿ ನಿರಾಕರಿಸಿದ ಸುಪ್ರೀಂ
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವ ಬಗ್ಗೆ ಎಸ್ಐಟಿ ತನಿಖೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷಗಳು ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವುದಾಗಿ ಆರೋಪಿಸಿವೆ. ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಯಮಾಲ್ಯ ಬಾಗಚಿ ಅವರಿದ್ದ ಸುಪ್ರೀಂ ನ್ಯಾಯಪೀಠ, ಎಸ್ಐಟಿಗೆ ತನಿಖೆ ವಹಿಸಲು ನಿರಾಕರಿಸಿತು. ಈ ವಿಷಯವನ್ನು ಭಾರತೀಯ ಚುನಾವಣಾ ಆಯೋಗದಲ್ಲಿ ಬಗೆಹರಿಸಿಕೊಳ್ಳಬೇಕೆಂದು ಅರ್ಜಿದಾರರಿಗೆ ಸೂಚಿಸಿದೆ. ಅರ್ಜಿದಾರರ
ವೀರೇಂದ್ರ ಪಪ್ಪಿ ಬಿಡುಗಡೆ ಕೋರಿ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್
ಆನ್ಲೈನ್ ಬೆಟ್ಟಿಂಗ್ ದಂಧೆ ಸೇರಿದಂತೆ ಅಕ್ರಮ ವ್ಯವಹಾರಗಳಿಗೆ ಸಂಬಂಧಿಸಿದಂತೆ ಇಡಿ ಬಂಧನದಲ್ಲಿರುವ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬಿಡುಗಡೆಗೆ ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಪಪ್ಪಿ ಬಂಧನ ಕಾನೂನುಬಾಹಿರವೆಂದು ಬಿಡುಗಡೆ ಕೋರಿ ಅರ್ಜಿ ಸಲ್ಲಿಕೆಯಾಗಿದ್ದು, ಇಡಿ ಪರ ಎಎಸ್ಜಿ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಎಚ್.ಡಿ.ದೇವೇಗೌಡರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಸಂಪೂರ್ಣ ಚೇತರಿಸಿಕೊಂಡಿರುವ ಅವರನ್ನು ಸೋಮವಾರ ಬೆಳಿಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್
ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್ ಲಾಡ್ ಚರ್ಚೆ
ಋತುಚಕ್ರ ರಜೆ ನೀತಿ ಕುರಿತು, ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ಅವರು, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾದ ಅಶೋಕ್ ಬಿ ಹಿಂಚಿಗೇರಿ ಅವರೊಂದಿಗೆ ಚರ್ಚೆ ನಡೆಸಿದರು. ಸಚಿವರ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಈ ಭೇಟಿ ನಡೆಯಿತು. ಋತುಚಕ್ರ ರಜೆ ನೀತಿಗೆ ಇತ್ತೀಚೆಗೆ
ಕೋಲಾರದಲ್ಲಿ ದ್ವಿಚಕ್ರ ವಾಹನಗಳ ಕಳ್ಳ ಅರೆಸ್ಟ್
ಕೋಲಾರದಲ್ಲಿ ಹೊಂಚು ಹಾಕಿ ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಲೀಂಖಾನ್(27) ಬಂಧಿತ ಕಳ್ಳ. ವಿಚಾರಣೆ ವೇಳೆ ಸಹಚರ ನವಾಜ್ ಜೊತೆ ಸೇರಿ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಕೋಲಾರ ನಗರದ ತೇರಹಳ್ಳಿ ಬೆಟ್ಟದ
ಚಿಕ್ಕಬಳ್ಳಾಪುರದಲ್ಲಿ ನವವಿವಾಹಿತೆ ಆತ್ಮಹತ್ಯೆ: ಸಂಬಂಧಿಕರ ಪ್ರತಿಭಟನೆ
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ಸಿರೀಶಾನಾವರ ಮೃತದೇಹವನ್ನು ಬಶೆಟ್ಟಿಹಳ್ಳಿ ರಸ್ತೆಯಲ್ಲಿ ಇಟ್ಟು ಸಂಬಂಧಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಶ್ರೀನಾಥ್ ಎಂಬುವರನ್ನು ಪ್ರತಿಸಿ ವಿವಾಹವಾಗಿದ್ದ ಸಿರೀಶಾ ಕ್ರಿಮಿನಾಶಕ ಮಾತ್ರೆ ತಿಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತರ ಕುಟುಂಬದವರು ದೂರು ದಾಖಲಿಸಿದರೂ ಪೊಲೀಸರು ಆರೋಪಿಗಳನ್ನು
ಧಾರವಾಡದಲ್ಲಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಇಬ್ಬರ ಸಾವು
ಧಾರವಾಡದ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಎಂಟು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸುರೇಶ ತುಪ್ಪದ (52), ಮಹಾಂತಪ್ಪ ತುಪ್ಪದ (65) ಮೃತಪಟ್ಟವರು. ಗದಗ ಮೂಲದ
ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ
ಕೊಪ್ಪಳದಲ್ಲಿ ವಿಚಾರಣಾಧೀನ ಕೈದಿಯಿಂದ ಪೊಲೀಸ್ ಮೇಲೆ ಹಲ್ಲೆ ಯತ್ನ
ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಕರೆತರಲಾಗಿದ್ದ ವಿಚಾರಣಾಧೀನ ಕೈದಿ, ಕುಖ್ಯಾತ ಕಳ್ಳ ಬಾಂಬೆ ಸಲೀಂ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಟಿನ್ನರ್ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೊಲೀಸರಿಗೆ ಬೆದರಿಕೆ ಹಾಕಿ ಡ್ರಾಮಾ ಮಾಡಿದ್ದಾನೆ. ಪೊಲೀಸ್ ಸಿಬ್ಬಂದಿ ಸಂತೋಷ್ ಹಾಗೂ ಹುಲಗಪ್ಪ ಎಂಬುವರ
ನಾನು ಯುದ್ಧ ನಿಲ್ಲಿಸೋದರಲ್ಲಿ ನಿಪುಣ: ಮತ್ತೆ ತನ್ನ ಬೆನ್ನು ತಾನೇ ತಟ್ಟಿಕೊಂಡ ಟ್ರಂಪ್
ನಾನು ಯುದ್ಧ ನಿಲ್ಲಿಸುವುದರಲ್ಲಿ ನಿಪುಣ, ಭಾರತ ಮತ್ತು ಪಾಕ್ ಯುದ್ಧ ಸೇರಿದಂತೆ ವಿಶ್ವದ ಹಲವು ಸಂಘರ್ಷಗಳನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತನ್ನ ಬೆನ್ನು ತಾನೇ ತಟ್ಟಿಕೊಂಡಿದ್ದಾರೆ. ಇದನ್ನೆಲ್ಲ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಮಾಡಿಲ್ಲ




