ಬೆಂಗಳೂರು: ವಾಟಾಳ್ ನಾಗರಾಜ್ ರವರು ಮಾತನಾಡಿ ಕಮಲಹಾಸನ್ ಕನ್ನಡದ ಮುಂದೆ ತೀರ ಸಣ್ಣ ವ್ಯಕ್ತಿ, ತಮಿಳುನಾಡಿನಲ್ಲಿ ಅವರ ಜನಬೆಂಬಲ ಇಲ್ಲ, ಪಾರ್ಟಿ ಕಟ್ಟಿ ಸೋತಿದ್ದಾರೆ ಎಂದು ಕನ್ನಡ ಪರ ಸಂಘಟನೆಯ ಮುಖಂಡ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಿಳಿನಿಂದ ಕನ್ನಡ ಬಂತು ಈ ಮಾತನ್ನ ಆಡಿದ್ದಾರೆ, ಯಾರು ಮಾತನಾಡಿದರು ಎಂಬುದು ಅರ್ಥವಾಗುತ್ತಿಲ್ಲ. ಈ ಪದ ಯಾಕೆ ಉಪಯೋಗಿಸಿದರು ಎಂಬುದು ಅರಿವಾಗುತ್ತಿಲ್ಲ. ತಮಿಳಿನಿಂದ ಕನ್ನಡ ಹುಟ್ಟಿದ್ದೆ ಎಂದು ಹೇಳಿರುವುದು ಕೆಟ್ಟ ಸಂಸ್ಕೃತಿ, ಅಪರಾಧವಾಗಿದೆ. ನಾಗಪ್ರಸನ್ನ ನೇತೃತ್ವದ ಹೈಕೋರ್ಟ್ ಪೀಠದಲ್ಲಿ ವಾದಮಂಡನೆಯಾಗುತ್ತಿದೆ. ಭಾಷೆ ವಿಚಾರದಲ್ಲಿ ರಾಜಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಈ ಹಿಂದೆ ಸಿ.ರಾಜಗೋಪಾಲಚಾರಿ ರವರು ಕ್ಷಮಾಪಣೆ ಕೇಳಿದ್ದರು, ಪೆರಿಯಾರ ಕಾಲದಿಂದಲು ಭಾಷ ವಿವಾದವಿದೆ. ತಮಿಳುನಾಡು ಸರ್ಕಾರಕ್ಕೆ.ದೇಶ ಒಡೆಯುವ ವಾಸನೆ ಹೋಗಿಲ್ಲ. ಯಾವ ಕಾರಣಕ್ಕೂ ಕ್ಷೇಮಾಪಣೆ ಕೇಳದೇ ವಿಚಾರಣೆ ಮಾಡುವುದಿಲ್ಲ ಎಂದು ನ್ಯಾಯಧೀಶರಾದ ನಾಗಪ್ರಸನ್ನ, ಈ ನಾಡಿನ ಜನರ ನಾಡಿ ಮಿಡಿತವನ್ನು ಅರಿತಿರುವ ನ್ಯಾಯಧೀಶರಿಗೆ ಕನ್ನಡ ನಾಗಪ್ರಸನ್ನ ಎಂದು ಗೌರವಿಸಲಾಗುತ್ತದೆ. ಜಲ, ನೆಲದ ವಿಷಯದಲ್ಲಿ ರಾಜಿ ಇಲ್ಲ, ಕಮಲಹಾಸನ್ ಕ್ಷಮಾಪಣೆ ಹೇಳಬೇಕು ನಾವು ಬಿಡುವುದಿಲ್ಲ. ಅಂತಿಮವಾಗಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಕರ್ನಾಟಕ ಬಂದ್ ಕರೆ ನೀಡಲಾಗುವುದು. ಕಮಲಹಾಸನ್ ಕರ್ನಾಟಕ್ಕೆ ಬರಬಾರದು, ಬಹಿಷ್ಕಾರ ಮಾಡಲಾಗುವುದು ಎಂದು ಹೇಳಿದರು.