Menu

ನೆಲಮಂಗಲದಲ್ಲಿ ಆಯಿಲ್‌ ಗೋದಾಮು ಬೆಂಕಿಗಾಹುತಿ

ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಶಾರ್ಟ್‌ ಸರ್ಕ್ಯೂಟ್‌ನಿಂದ ಶಲ್‌ ಕಂಪನಿಗೆ ಸೇರಿದ ಆಯಿಲ್‌ ಗೋದಾಮು ಬೆಂಕಿಗಾಹುತಿಯಾಗಿದೆ. ಬೆಳಗಿನ ಜಾವ ಮೂರು ಗಂಟೆಗೆ ಈ ದುರಂತ ನಡೆದಿದೆ.

ನೆಲಮಂಗಲ, ಪೀಣ್ಯ ಯಶವಂತಪುರ ಭಾಗದ 8 ಕ್ಕೂ ಹೆಚ್ಚು ಅಗ್ನಿಶಾಮಕ ತಂಡಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದು, ಕ್ಷಣಕ್ಷಣಕ್ಕೂ ಬೆಂಕಿ ಇನ್ನಷ್ಟು ವ್ಯಾಪಿಸುತ್ತಿದೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಕ್ಕಪಕ್ಕದ ಗೋದಾಮು ಹಾಗೂ ಮನೆಗೆ ಬೆಂಕಿ ತಗುಲುವ ಆತಂಕ ಎದುರಾಗಿದೆ. ಅಂದಾಜು 30 ಕೋಟಿ ರೂಪಾಯಿ ಮೌಲ್ಯದ ಆಯಿಲ್ ಬೆಂಕಿಗಾಹುತಿ ಆಗಿದೆ ಎಂದು ಹೇಳಲಾಗುತ್ತಿದೆ.

ಭಾರತ-ಪಾಕಿಸ್ತಾನ ನಡುವಿನ ಯುದ್ಧ ಆರಂಭದ ಹಿನ್ನೆಲೆ ಕಂಪನಿ ಸಾಕಷ್ಟು ಪ್ರಮಾಣದಲ್ಲಿ ಆಯಿಲ್ ಶೇಖರಣೆ ಮಾಡಿತ್ತು. ಬೆಂಕಿ ಅವಘಡದಿಂದ ಆಯಿಲ್‌ ನಷ್ಟವಾಗಿದೆ. ಕಂದಾಯ ಮಾಜಿ ಸಚಿವ ಹೆಚ್.ಸಿ.ಶ್ರೀಕಂಠಯ್ಯ ಅಳಿಯ ಕೃಷ್ಣಪ್ಪ ಎಂಬವರಿಗೆ ಸೇರಿದ ಗೋದಾಮು ಇದಾಗಿದ್ದು, ಶಲ್ ಕಂಪನಿಗೆ ಬಾಡಿಗೆಗೆ ನೀಡಲಾಗಿತ್ತು.

Related Posts

Leave a Reply

Your email address will not be published. Required fields are marked *