Menu

ಹಳೆ ವೈಷಮ್ಯ ಶಂಕೆ: ವಿಜಯಪುರದಲ್ಲಿ ಜೋಡಿ ಕೊಲೆ

ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಇಬ್ಬರನ್ನು ಕೊಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖರೇಷಿ (24) ಕೊಲೆಯಾದವರು, ಅಪರಿಚಿತರಿಂದ ಕೊಲೆಯಾಗಿರುವುದಾಗಿ ಹೇಳಲಾಗಿದೆ.

ಹತ್ಯೆ ಬಳಿಕ ಕೊಲೆಗಟುಕರು ಪರಾರಿಯಾಗಿದ್ದು, ಹಳೆಯ ವೈಷಮ್ಯದಿಂದ ಹಲ್ಲೆ ಮಾಡಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಎರಡು ವರ್ಷಗಳ ಹಿಂದೆ ತಮ್ಮೂರಿನ ಈರನಗೌಡ ಮೇಲೆ ಇಸಾಕ್ ಖುರೇಷಿ ಹಾಗೂ ಸಾಗರ ಹಲ್ಲೆ ಮಾಡಿದ್ದರು. ಕೆಲವು ದಿನ ಚಿಕಿತ್ಸೆ ಪಡೆದು ಈರನಗೌಡ ಮೃತಪಟ್ಟಿದ್ದ‌‌ರು.

ಈ ದ್ವೇಷದ ಕಾರಣ ಇಬ್ಬರ ಕೊಲೆ ನಡೆದಿರುವು ಅನುಮಾನವಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೋಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *