Menu

ಆಪರೇಷನ್​​​​ ಸಿಂಧೂರ ವೀಡಿಯೊ ತುಣುಕು ಶೇರ್‌: ಶಿವಮೊಗ್ಗ ವ್ಯಕ್ತಿ ವಿರುದ್ಧ ಕೇಸ್‌

ಭಾರತದ ವಾಯುಪಡೆ ನಡೆಸಿದ ಆಪರೇಷನ್​​​​ ಸಿಂಧೂರ ಕಾರ್ಯಾಚರಣೆ ಬಗ್ಗೆ ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್​​ ಹಾಕಿಕೊಂಡಿದ್ದ ​ವ್ಯಕ್ತಿಯ ವಿರುದ್ಧ ಶಿವಮೊಗ್ಗದ ಕೋಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಕ್​ನಲ್ಲಿನ ಉಗ್ರರ ನೆಲೆಗಳ ಮೇಲೆ ಆಪರೇಷನ್​​​​​​ ಸಿಂಧೂರ ಹೆಸರಿನಲ್ಲಿ ಮೇ 7ರಂದು ಭಾರತೀಯ ಸೇನಾಪಡೆಗಳು ದಾಳಿ ನಡೆಸಿದ್ದ ವೀಡಿಯೊ ತುಣಕನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿದ ಆರೋಪದ ಮೇಲೆ ಶಿವಮೊಗ್ಗದ ಇಬ್ಬು ಅಲಿಯಾಸ್​​ ಇಬ್ರಾಹಿಂ ಖಾನ್​​​ ಎಂಬಾತನ ವಿರುದ್ಧ ಕೇಸ್​ ದಾಖಲಾಗಿದೆ.

ಕೋಟೆ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್ ಪ್ರಕಾಶ್​ ಎಂಬವರು ಇಬ್ಬು ಅಲಿಯಾಸ್ ಇಬ್ರಾಹಿಂ ವಿರುದ್ದ ದೂರು ನೀಡಿದ್ದಾರೆ. ಭಾರತ ದೇಶದ ಪ್ರಜೆಯಾಗಿದ್ದು ಕೊಂಡು ಪಾಕಿಸ್ತಾನದ ಪರವಾಗಿ ದೇವರಲ್ಲಿ ಬೇಡಿಕೊಂಡಿರುವುದಾಗಿ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಕಾನ್ಸ್​ಟೇಬಲ್ ನೀಡಿದ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related Posts

Leave a Reply

Your email address will not be published. Required fields are marked *