Saturday, February 22, 2025
Menu

ಸಚಿವ ಜಾರ್ಜ್‌ ವಿರುದ್ಧ ಹರಿ ಹಾಯ್ದ ಆರ್‌. ಅಶೋಕ್‌

ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ವಲ್ಲ ಅಂತ ಹೇಳಿದ್ದೀರಲ್ಲಾ, ಇದೇನಾ ಮತದಾರರಿಗೆ ನೀವು ಕೊಡುವ ಗೌರವ ಎಂದು ಪ್ರತಿಪಕ್ಷ ನಾಯಕ  ಆರ್‌. ಅಶೋಕ್‌ ಅವರು ಸಚಿವ ಟಿ.ಜಾರ್ಜ್‌ ವಿರುದ್ಧ ಹರಿಹಾಯ್ದಿದ್ದಾರೆ.

ಗೃಹಲಕ್ಷ್ಮಿ ಹಣ ಕೊಡಿ, ಅನ್ನಭಾಗ್ಯದ ಹಣ ಕೊಡಿ ಅಂತ ಮತದಾರರೇನು ನಿಮ್ಮ ಬಳಿ ಭಿಕ್ಷೆ ಬೇಡುತ್ತಿಲ್ಲ. ಈ ಗ್ಯಾರೆಂಟಿ ಯೋಜನೆಗಳನ್ನು ಪ್ರಾರಂಭಿಸಿ ಅಂತ ಜನತೆ ಕೇಳಿಯೂ ಇರಲಿಲ್ಲ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ  ಪೋಸ್ಟ್‌ ಮಾಡಿದ್ದಾರೆ.

ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕಾರದ ತೆವಲಿಗೆ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಈಗ ಮತದಾರರ ಬಗ್ಗೆ ಕೀಳಾಗಿ ಯಾಕೆ ಮಾಡುತ್ತೀರಿ? ನಿಮ್ಮ ಕೈಲಾದರೆ ಕೊಟ್ಟ ಮಾತಿನಂತೆ ಗ್ಯಾರೆಂಟಿ ಯೋಜನೆಗಳನ್ನು ಗೌರವದಿಂದ ಜಾರಿ ಮಾಡಿ. ನಿಮ್ಮ ಕೈಲಾಗದಿದ್ದರೆ ಬಿಟ್ಟುಬಿಡಿ. ಗ್ಯಾರೆಂಟಿ ಯೋಜನೆಗಳು ಜಾರಿ ಆಗುವ ಮುನ್ನವೂ ಜನರು ತಮ್ಮ ಬದುಕು ಕಟ್ಟಿಕೊಂಡಿದ್ದರು. ಅವು ಇಲ್ಲದೆಯೂ ತಮ್ಮ ಬದುಕು ಕಟ್ಟಿಕೊಳ್ಳುತ್ತಾರೆ. ಕಾಂಗ್ರೆಸ್ ಕೋಳಿ ಕೂಗಿದರೆ ಕರ್ನಾಟಕದಲ್ಲಿ ಬೆಳಕು ಹರಿಯುತ್ತದೆ ಎನ್ನುವ ದುಸ್ಥಿತಿ ಕನ್ನಡಿಗರಿಗೆ ಬಂದಿಲ್ಲ ಎಂದು ತಿಳಿಸಿದ್ದಾರೆ.

ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ. ಈಗಾಗಲೇ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಅಡ್ರೆಸ್ ಇಲ್ಲದಂತಾಗಿದೆ. ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ನಿರ್ನಾಮ ಆಗುವುದು ಗ್ಯಾರೆಂಟಿ ಎಂದು ಅಶೋಕ್‌ ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *