Menu

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 3 ಸಾವಿರಕ್ಕೂ ಹೆಚ್ಚು ಆಮೆ, ಉಡ ವಶ

ವಿದೇಶಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರ ಬಳಿ 3 ಸಾವಿರಕ್ಕೂ ಹೆಚ್ಚು ಆಮೆ, ಉಡ ಪತ್ತೆಯಾಗಿದ್ದು, ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಶಂಕಿತ ವನ್ಯಜೀವಿ ಕಳ್ಳಸಾಗಣೆದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಥಾಯ್ಲೆಂಡ್​​ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಾಲಸುಬ್ರಮಣಿಯನ್ ಷಣ್ಮುಗಂ, ವಿಜಯರಾಘವನ್ ಧನಪಾಲ್ ಹಾಗೂ ಭಾನುವಾರ ಮಲೇಷ್ಯಾದಿಂದ ಬಂದ ಅರುಣ್‌ಕುಮಾರ್ ನಾರಾಯಣಸ್ವಾಮಿ ಎಂಬವರ ಬಳಿಯಿಂದ ಆಮೆ, ಉಡ, ಆಫ್ರಿಕನ್ ಆಮೆಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಕ್ಕೆ ಪಡೆಯಲಾದ ಮೂವರು ಪ್ರಯಾಣಿಕರ ಬಳಿ ವನ್ಯಜೀವಿಗಳನ್ನು ತೆಗೆದುಕೊಂಡು ವಿದೇಶ ಪ್ರಯಾಣ ಮಾಡಲು ಅಗತ್ಯವಾದ ಅಧಿಕೃತ ದಾಖಲೆಗಳು ಇರಲಿಲ್ಲ. ಪ್ರಾಣಿಗಳನ್ನು ವಶಪಡಿಸಿಕೊಂಡು ಅವುಗಳ ಮೂಲ ದೇಶಗಳಾದ ಮಲೇಷ್ಯಾ ಮತ್ತು ಥಾಯ್ಲೆಂಡ್​ಗೆ ಕಳುಹಿಸಿಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಳೆದ ಎರಡು ತಿಂಗಳುಗಳಲ್ಲಿ ವನ್ಯಜೀವಿ ಕಳ್ಳಸಾಗಣೆ ಪ್ರಕರಣಗಳುಹೆಚ್ಚಿದ್ದು, ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಕರಣ ಕಡಿಮೆಯಾಗಿವೆ. ಸಮಸ್ಯೆ ಇಲ್ಲದೆ ಕಳ್ಳಸಾಗಣೆ ಮಾಡುವುದಕ್ಕಾಗಿ ಪ್ರಾಣಿಗಳಿಗೆ ಕಡಿಮೆ ಡೋಸ್​​ನ ನಿದ್ರಾ ಔಷಧ ನೀಡಲಾಗುತ್ತದೆ ಎಂದು ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋದ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಮಲೇಷ್ಯಾದಿಂದ ಭಾರತಕ್ಕೆ ಕಳ್ಳಸಾಗಣೆ ಮಾಡಲಾಗುವ ಕೆಂಪು ಕಿವಿಯ ಆಮೆಗಳು ಹೆಚ್ಚಿನ ಪ್ರಮಾಣದಲ್ಲಿ ಕಳ್ಳಸಾಗಣೆ ಆಗುತ್ತವೆ. ಕಳೆದ ವಾರ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 3,000 ಆಮೆಗಳನ್ನು ವಶಪಡಿಸಿ ಕೊಳ್ಳಲಾಗಿತ್ತು.

 

Related Posts

Leave a Reply

Your email address will not be published. Required fields are marked *