Menu

ಕುಕ್ಕೆ, ಧರ್ಮಸ್ಥಳ ಸ್ಥಾನಘಟ್ಟಗಳಿಗೆ ಇಳಿಯದಂತೆ ಯಾತ್ರಿಗಳಿಗೆ ಎಚ್ಚರಿಕೆ

ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ. ನೇತ್ರಾವತಿ ಮತ್ತು ಕುಮಾರಧಾರ ನದಿಗಳು ತುಂಬಿ ಹರಿಯುತ್ತಿವೆ.

ಭಕ್ತರು ಸ್ನಾನಘಟ್ಟದ ಬಳಿ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಭಕ್ತರು ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ. ದೇವ ಸ್ಥಾನದ ಆಡಳಿತವು ಸ್ನಾನಘಟ್ಟದ ಸುತ್ತ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಿದೆ. ಪ್ರಕೃತಿ ವಿಕೋಪ ತಡೆ ಸಿಬ್ಬಂದಿ ನೇಮಕಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.

ಧರ್ಮಸ್ಥಳದ ಸ್ನಾನಘಟ್ಟದಲ್ಲಿಯೂ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಹೀಗಾಗಿ ಸುರಕ್ಷತೆ ಕಾರಣಕ್ಕೆ ನದಿಗೆ ಸ್ನಾನಕ್ಕೆ ಇಳಿಯದಂತೆ ಯಾತ್ರಿಕರಿಗೆ ಸೂಚನೆ ನೀಡಲಾಗಿದೆ. ನದಿಯ ಬಳಿ ಕಾವಲು ನಿಯೋಜಿಸಲಾಗಿದೆ.

ಶಿರಾಡಿ ಘಾಟಿಯಲ್ಲೂ ಭೂಕುಸಿತವಾಗುವ ಸಂಭವನೀಯ ಅಪಾಯ ಇದೆ. ಹೀಗಾಗಿ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ ದೇಗುಲ ಪ್ರವಾಸಕ್ಕೂ ಭಕ್ತರಿಗೆ ತೊಡಕಾ ಗಲಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 28ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Related Posts

Leave a Reply

Your email address will not be published. Required fields are marked *