Menu

ಬೆಂಗಳೂರು ಉಪನಗರ ರೈಲು ಯೋಜನೆ ತ್ವರಿತಗೊಳಿಸಲು ಪ್ರಧಾನಿ ಸೂಚನೆ

pm modi

ಬೆಂಗಳೂರು ಉಪನಗರ ರೈಲ್ವೆ ಯೋಜನೆ ಕಾಮಗಾರಿ ವಿಳಂಬ ಗತಿಯಲ್ಲಿ ಸಾಗುತ್ತಿದ್ದು, ತ್ವರಿತಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಇತ್ತೀಚೆಗೆ ನಡೆಸಿದ ಪ್ರಗತಿ ಸಭೆಯಲ್ಲಿ ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಎರಡು ಮೆಗಾ ಯೋಜನೆಗಳನ್ನು ಪರಿಶೀಲಿಸಿದ ಬಳಿಕ ಈ ಸೂಚನೆ ನೀಡಿ, ವಿಳಂಬವಾಗುತ್ತಿರುವ ಈ ಯೋಜನೆಗೆ ಮತ್ತಷ್ಟು ವೇಗ ನೀಡುವಂತೆ ಹೇಳಿದ್ದಾರೆ.

ಯೋಜನೆ ಹಲವು ವರ್ಷಗಳಿಂದ ವಿಳಂಬವಾಗುತ್ತಿದ್ದು, ವೆಚ್ಚದಲ್ಲಿ ಭಾರಿ ಏರಿಕೆಯಾಗಿದೆ. ತ್ವರಿತ ಪ್ರಗತಿ ಸಾಧಿಸಬೇಕಿದೆ ಎಂದಿರುವ ಪ್ರಧಾನಿ, 2025ರ ಡಿಸೆಂಬರ್ 31 ರಂದು ನಡೆದ ಸಭೆಯಲ್ಲಿ ಬೆಂಗಳೂರು ಉಪನಗರ ರೈಲ್ವೆ ಯೋಜನೆ ಮತ್ತು ತೆಲಂಗಾಣದ ಜೆ ಚೊಕ್ಕಾ ರಾವ್ ದೇವದುಲ ಲಿಫ್ಟ್ ನೀರಾವರಿ ಯೋಜನೆಗಳ ಪರಿಶೀಲನೆ ನಡೆಸಿದ್ದರು.

ನಾಲ್ಕು ದಶಕಗಳಿಂದ ಚರ್ಚೆ ಬಳಿಕ ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ಅಂತಿಮವಾಗಿ 2020 ರಲ್ಲಿ ಮಂಜೂರು ಮಾಡಲಾಯಿತು. 2023 ರಲ್ಲಿ ಪೂರ್ಣಗೊಳ್ಳುವ ಗುರಿ ಹೊಂದಲಾಗಿತ್ತು. ಆದರೆ ಇನ್ನೂ ಪೂರ್ಣಗೊಂಡಿಲ್ಲ. ಈ ಯೋಜನೆಯು ನಗರದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲಿದೆ. ಯೋಜನೆಯು ನಗರ, ಉಪನಗರಗಳು ಮತ್ತು ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ನಾಲ್ಕು ಕಾರಿಡಾರ್‌ಗಳಲ್ಲಿ 148 ಕಿ.ಮೀ ವ್ಯಾಪ್ತಿ ಹೊಂದಿದೆ.

Related Posts

Leave a Reply

Your email address will not be published. Required fields are marked *