ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಹೊಸವರ್ಷಕ್ಕೆ ಶುಭಾಶಯ ಕೋರಿ ಶಿವಮೊಗ್ಗ ನಗರದ ಮೂವರು ಗಣ್ಯರಿಗೆ ವಿಷಪೂರಿತ ಸ್ವೀಟ್ ಬಾಕ್ಸ್ಗಳನ್ನು ಕೊರಿಯರ್ ಮೂಲಕ ಕಳುಹಿಸಿರುವ ಪ್ರಕರಣ ಬಯಲಾಗಿದೆ.
ಕೊರಿಯರ್ ಮೂಲಕ ಭದ್ರಾವತಿಯಿಂದ ಪಾರ್ಸೆಲ್ ಕಳುಹಿಸಲಾಗಿತ್ತು. ಒಬ್ಬರು ಸ್ವೀಟ್ ಬಾಯಲ್ಲಿ ಹಾಕಿಕೊಂಡ ತಕ್ಷಣ ಕಹಿ ಅಂಶ ಪತ್ತೆಯಾಗಿ ಪ್ರಕರಣ ಬೆಳಕಿಗೆ ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಎಂಎಲ್ಸಿ ಧನಂಜಯ ಸರ್ಜಿ ಸ್ವೀಟ್ ಅನ್ನು ಲ್ಯಾಬ್ಗೆ ಕಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಸ್ವೀಟ್ ಬಾಕ್ಸ್ ಕಳುಹಿಸಿದ ಅನಾಮಧೇಯ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವ ಭರವಸೆ ಎಸ್ಪಿ ನೀಡಿದ್ದಾರೆ ಎಂದು ಎಂಎಲ್ಸಿ ಡಾ.ಧನಂಜಯ ಸರ್ಜಿ ಹೇಳಿದ್ದಾರೆ. ಪೊಲೀಸರು ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದಾರೆ.