Wednesday, August 06, 2025
Menu

ಲಾಕ್ ಡೌನ್ ವೇಳೆ ಅಂಗಡಿ ತೆರೆದ್ದಿದ್ದನ್ನು ಪ್ರಶ್ನಿಸಿದ ಪೊಲೀಸರ ಮೇಲೆ ಹಲ್ಲೆ: 23 ಆರೋಪಿಗಳಿಗೆ ಜೈಲು ಶಿಕ್ಷೆ!

ತುಮಕೂರು: ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ 23 ಆರೋಪಿಗಳಿಗೆ 1 ವರ್ಷ ಶಿಕ್ಷೆ ಹಾಗೂ ತಲಾ 15.000 ರೂ.ನಂತೆ ಒಟ್ಟು 3.45 ಲಕ್ಷ ರೂ. ದಂಡ ವಿಧಿಸಿ ತುಮಕೂರು ಜೆಎಂಎಫ್‌ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಏನಿದು ಘಟನೆ?

2021 ಜುಲೈ 3 ರಂದು ಸಂಜೆ 5.00 ಗಂಟೆಗೆ ಕೋವಿಡ್-19 ವಾರದ ಲಾಕ್ ಡೌನ್ ಸಮಯದಲ್ಲಿ ಸರ್ಕಾರದ ಆದೇಶದನ್ವಯ ವಾರದ ಅಂತ್ಯದ ಲಾಕ್ ಡೌನ್ ಆದೇಶದಂತೆ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ಅಂಗಡಿ ತೆರೆಯಲು ಅವಕಾಶ ವಿಧಿಸಲಾಗಿತ್ತು.

ಹೀಗಿದ್ದರೂ ಸರ್ಕಾರದ ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಗುಬ್ಬಿ ತಾಲೂಕಿನ ಚಿಕ್ಕಕುನ್ನಾಲ ಸರ್ಕಲ್​​ನಲ್ಲಿ ಅಪರಾಧಿ-1 ಆದೀರ್ ಅಹಮದ್ ಅಂಗಡಿ ತೆರೆದು ವ್ಯಾಪಾರ ಮಾಡುತ್ತಿದ್ದ. ಸರ್ಕಾರದ ಆದೇಶದಂತೆ ಅಂಗಡಿ ಮುಚ್ಚುವಂತೆ ಸೂಚಿಸಿ ಪೊಲೀಸರನ್ನು 22 ಮಂದಿ ಸೇರಿ ಎಳೆದಾಡಿ ತಳ್ಳಿ ಕಲ್ಲಿನಿಂದ ಹೊಡೆದು ಗಾಯಗೊಳಿಸಿದ್ದರು. ಪೊಲೀಸರು ಜೀಪು ಹತ್ತಿ ವಾಪಸ್ಸಾಗುತ್ತಿದ್ದಾಗ ಕಲ್ಲು ಎಸೆದು ಸರ್ಕಾರಿ ವಾಹನವನ್ನು ಜಖಂ ಮಾಡಿದ್ದರು.

ಈ ಬಗ್ಗೆ ಸಿಎಸ್ ಪುರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಎಪಿಡೆಮಿಕ್ ಆಕ್ಟ್ ಪ್ರಕಾರ ಪ್ರಕರಣ ದಾಖಲಾಗಿತ್ತು. ಪ್ರಕರಣದ ಸಂಬಂಧ ಪ್ರಕರಣದ ತನಿಖೆ ನಡೆಸಿದ್ದ ಗುಬ್ಬಿ ವೃತ್ತ ನಿರೀಕ್ಷಕ ನದಾಫ್ ಆರೋಪಿಗಳ ವಿರುದ್ಧ ದೋಷರೋಪಣ ಪತ್ರವನ್ನು ಜೆಎಂಎಫ್​​ಸಿ ಘನ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ಸಿಸಿ ನಂ-2921/2021 ರಂತೆ ವಿಚಾರಣೆ ನಡೆದು, ಆರೋಪಿಗಳು ಮಾಡಿದ ಕೃತ್ಯವು ಘನ ನ್ಯಾಯಾಲಯದಲ್ಲಿ ಸಾಬೀತಾದ ಕಾರಣ 23 ಆರೋಪಿಗಳಿಗೆ 1 ವರ್ಷ ಸಾದಾ ಶಿಕ್ಷೆ ಹಾಗೂ ತಲಾ 15,000 ರೂ ನಂತೆ ಒಟ್ಟು 3,45,000 ರೂ ದಂಡವನ್ನು ವಿಧಿಸಿದೆ.

ದಂಡದ ಮೊತ್ತದಲ್ಲಿ ಪ್ರಕರಣದ ಪ್ರಮುಖ ಸಾಕ್ಷಿದಾರರಾದ ಸೋಮಶೇಖರ್ ಪಿಎಸ್‌ಐ, ಕುಮಾರಸ್ವಾಮಿ ಎಎಸ್‌ಐ, ಸಿಬ್ಬಂದಿ ರಾಜು ದೊಡ್ಡನಿಂಗಣ್ಣನವರ್ ಹಾಗೂ ದುಶ್ಯಂತ್ ಅವರುಗಳಿಗೆ ತಲಾ 15,000/- ರೂಗಳನ್ನು ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

Related Posts

Leave a Reply

Your email address will not be published. Required fields are marked *