ಚಳ್ಳಕೆರೆ : ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿ 15,000 ಗೌರವ ಧನವನ್ನು ಹೆಚ್ಚಿಸುವುದಾಗಿ ಭರವಸೆ ನೀಡಿದ್ದರು ಸರ್ಕಾರ ಆರನೇ ಗ್ಯಾರಂಟಿಯಾಗಿ ಈ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಎಐಟಿಯುಸಿಯ ರಾಜ್ಯ ಸಂಚಾಲಕ ಸಿವೈ ಶಿವರುದ್ರಪ್ಪ ಆಗ್ರಹಿಸಿದರು.
ನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎಐಟಿಯುಸಿ ಸಂಘಟನೆ ವತಿಯಿಂದ ಮೆರವಣಿಗೆ ನಡೆಸಿ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಶಿವರುದ್ರಪ್ಪ ಅಂಗನವಾಡಿಗೆ ಪರ್ಯಾಯವಾಗಿ ಶಿಶು ಪಾಲನ ಕೇಂದ್ರಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ ಇದು ಅಂಗನವಾಡಿ ವ್ಯವಸ್ಥೆಗೆ ವಿರುದ್ಧವಾಗಿದೆ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಅಂಗನವಾಡಿ ವ್ಯವಸ್ಥೆಯನ್ನು ಬಳಸಿಕೊಳ್ಳಬೇಕು ಅಂಗನವಾಡಿಗೆ ವಿರುದ್ಧವಾಗಿ ಬೇರೆ ವ್ಯವಸ್ಥೆಯನ್ನು ಜಾರಿಗೊಳಿಸುವುದಕ್ಕೆ ತೀವ್ರ ವಿರೋಧವಿದೆ ಎಂದರು.
ಅಖಿಲ ಭಾರತ ಕಿಸಾನ್ ಸೆಲ್ ಅಧ್ಯಕ್ಷ ದೊಡ್ಡ ಉಳ್ಳಾರ್ತಿ ಕರಿಯಣ್ಣ ಮಾತನಾಡಿ ಅಂಗನವಾಡಿಗೆ 9 ತಿಂಗಳಿನಿಂದ ಎಲ್ಪಿಜಿ ಸಿಲಿಂಡರ್ ಪೂರೈಕೆಯಾಗಿಲ್ಲ ಅನೇಕ ಅಂಗನವಾಡಿಗಳ ಬಾಡಿಗೆ ಕೂಡ ಪಾವತಿ ಮಾಡಿಲ್ಲ ಅಂಗನವಾಡಿ ನಡೆಸಲು ಇದರಿಂದ ತೊಂದರೆ ಉಂಟಾಗಿದೆ ಮಕ್ಕಳ ದೃಷ್ಟಿಯಿಂದ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಅಂಗನವಾಡಿ ಕಾರ್ಯಕರ್ತೆಯರನ್ನು ಅನ್ಯ ಕಾರ್ಯಗಳಿಗೆ ನೇಮಿಸಿಕೊಳ್ಳಬಾರದು ಅಂಗನವಾಡಿ ಕಾರ್ಯಕರ್ತರಿಗೆ 15000 ಸಹಾಯಕಿಯರಿಗೆ 10,000 ವೇತನವನ್ನು ಸರ್ಕಾರ ಕೂಡಲೇ ಜಾರಿಗೊಳಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಐಟಿಯುಸಿ ತಾಲೂಕು ಅಧ್ಯಕ್ಷ ತಿಪ್ಪೇರುದ್ರಪ್ಪ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಒಬ್ಬಕ್ಕ ಪುಟ್ಟಕ್ಕ ಸರೋಜಮ್ಮ ಲಕ್ಷ್ಮಿ ವೀಣ ಸಾವಿತ್ರಮ್ಮ ನಾಗವೇಣಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.