Menu

ಪೂಜೆಗೆ ಹೋಗಿದ್ದ ಮಹಿಳೆ ಮೇಲೆ ರೇಪ್‌ಗೆ ಯತ್ನಿಸಿದ ಅರ್ಚಕನ ಬಂಧನ

ಪೂಜೆ ಮಾಡಿಸಲೆಂದು ದೇಗುಲಕ್ಕೆ ತೆರಳಿದ್ದ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿ, ಬೆತ್ತಲೆ ವೀಡಿಯೊ ಮಾಡಿ ಬ್ಲ್ಯಾಕ್​ಮೇಲ್ ಮಾಡಿದ ಆರೋಪದಲ್ಲಿ ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನದ ಅರ್ಚಕ ಅರುಣ್ ಎಂಬಾತನನ್ನು ಬೆಂಗಳೂರಿನ ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ, ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದು, ಪೊಲೀಸರು ಶೋಧ ಆರಂಭಿಸಿದ್ದಾರೆ.
ಪೂಜೆ ಮಾಡಿಸಲೆಂದು ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಗೆ ಮಾಟ ಮಾಂತ್ರದ ಬೆದರಿಕೆಯೊಡ್ಡಿ ಮುಖ್ಯ ಅರ್ಚಕ ಹಾಗೂ ಅರ್ಚಕ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಪೆರಿಂಗೋಟ್ಟುಕ್ಕಾರ ದೇಗುಲದಲ್ಲಿ ಪೂಜೆ ಮಾಡಿಸಲೆಂದು ತೆರಳಿದ್ದ ಬೆಂಗಳೂರಿನ ಮಹಿಳೆಗೆ ಪರಿಚಯವಾದ ಅರ್ಚಕರು ಪೂಜೆ ಮತ್ತು ಮಾಟ-ಮಂತ್ರ ಹೆಸರಿನಲ್ಲಿ ಮಹಿಳೆ ಜತೆ ವಾಟ್ಸ್​​ಆ್ಯಪ್​ ವೀಡಿಯೊ ಕಾಲ್ ಮೂಲಕ ಅಸಭ್ಯವಾಗಿ ವರ್ತಿಸಿದ್ದಾರೆ. ಮತ್ತೊಂದು ಪೂಜೆ ಮಾಡಿಸುವುದಾಗಿ ಕರೆಸಿಕೊಂಡು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ ಎಂದು ಬೆಳ್ಳಂದೂರು ಠಾಣೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತೆ ವಿವರಿಸಿದ್ದಾರೆ.
ತಮಿಳು ಮತ್ತು ಕನ್ನಡ ಬರುತ್ತಿದ್ದ ಸಂತ್ರಸ್ತೆಗೆ ಅರ್ಚಕ ಅರುಣ್ ಪರಿಚಯವಾಗಿದ್ದಾನೆ. ಆತ ತಮಿಳಿನಲ್ಲಿ ಮಾತನಾಡಿ ಅದನ್ನು ಅರ್ಚಕರಿಗೆ ತಿಳಿಸಿದ್ದ. 24 ಸಾವಿ ರೂ. ಕೊಟ್ಟರೆ ಪೂಜೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದಾನೆ. ಮೊಬೈಲ್ ಸಂಖ್ಯೆ ಪಡೆದುಕೊಂಡಿದ್ದ ಆತ ಸಂತ್ರಸ್ತೆ ಬೆಂಗಳೂರಿಗೆ ಬಂದ ನಂತರ ಹಲವು ಬಾರಿ ಕರೆ ಮಾಡಿ ನಿಮ್ಮ ಮೇಲೆ ಮಾಟ-ಮಂತ್ರ ಆಗಿದೆ. ಅದನ್ನು ಹೋಗಲಾಡಿಸಲು ಪೂಜೆ ಮಾಡುತ್ತೇನೆ ಎಂದು ಹೇಳಿದ್ದ. ನಗ್ನನಾಗಿ ವಾಟ್ಸ್​​ಆ್ಯಪ್ ವೀಡಿಯೋ ಕಾಲ್​​ ಮಾಡಿ, ಮಹಿಳೆಗೂ ಬಲವಂತದಿಂದ ಬೆದರಿಸಿ ನಗ್ನವಾಗುವಂತೆ ಮಾಡಿದ್ದಾನೆ. ಮತ್ತೆ ವಿಶೇಷ ಪೊಜೆಗೆಂದು ದೇವಸ್ಥಾನಕ್ಕೆ ಬರುವಂತೆ ತಿಳಿಸಿದ್ದ.

ಬ್ಲ್ಯಾಕ್​ಮೇಲ್​​ಗೆ ಹೆದರಿ ಮಹಿಳೆ ದೇಗುಲಕ್ಕೆ ತೆರಳಿದ್ದರು. ಪೂಜೆ ಮಾಡಿದ ಅರುಣ್ ಹಾಗೂ ಮುಖ್ಯ ಅರ್ಚಕ, ಧಾರ್ಮಿಕ ಕ್ರಿಯೆ ಇದೆ ಎಂದು ಬಲವಂತವಾಗಿ ಕಾರಿನಲ್ಲಿ ಕಾಡಿಗೆ ಕರೆದುಕೊಂಡು ಹೋಗಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಪ್ರಯತ್ನಿಸಿದ್ದರು ಎಂದು ಸಂತ್ರಸ್ತೆ ತಿಳಿಸಿದ್ದಾರೆ. ಮಹಿಳೆ ಬೆಂಗಳೂರಿಗೆ ವಾಪಸಾಗಿ ಬೆಳ್ಳಂದೂರು ಠಾಣೆಗೆ ದೂರು ನೀಡಿದ್ದಾರೆ. ಬಂಧಿತನ ವಿರುದ್ಧ ಬಿಎನ್​ಎಸ್ ಕಾಯ್ದೆಯ ವಿವಿಧ ಸೆಕ್ಷನ್​ಗಳ ಅಡಿ ಪ್ರಕರಣ ದಾಖಲಿಸಲಾಗಿದೆ.

Related Posts

Leave a Reply

Your email address will not be published. Required fields are marked *