ಪುತ್ತೂರು ನಗರಸಭಾ ಬಿಜೆಪಿ ಸದಸ್ಯ ರಮೇಶ್ ರೈ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬಳಿಯ ನೇತ್ರಾವತಿ ನದಿಯಲ್ಲಿ ಗುರುವಾರ ಸಂಜೆ ರಮೇಶ್ ರೈ ಅವರ ಶವಪತ್ತೆಯಾಗಿದೆ.
ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ ರಮೇಶ್ ರೈ ಅವರಿಗಾಗಿ ಹುಡುಕಾಟ ನಡೆದಿದ್ದು, ಮಧ್ಯಾಹ್ನದ ವೇಳೆ ನೇತ್ರಾವತಿ ನದಿಯ ಪಿಲ್ಲರ್ ಬಳಿ ಮೊಬೈಲ್ ಹಾಗೂ ಪರ್ಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ನದಿಯಲ್ಲಿ ಹುಡುಕಾಟ ನಡೆಸಿದ್ದರು.
ಇತ್ತೀಚೆಗಷ್ಟೇ ಬಿಜೆಪಿಯಿಂದ ಸ್ಪರ್ಧಿಸಿ ನಗರಸಭೆ ಸದಸ್ಯರಾಗಿ ರಮೇಶ್ ರೈ ಆಯ್ಕೆಯಾಗಿದ್ದರು. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.