ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುರುವಾರ ಮಳೆಯಾಗಿದ್ದು, ಇಂದಿನಿಂದ ಒಂದು ವಾರ ಶಿವಮೊಗ್ಗ, ಬೆಂಗಳೂರು ಸೇರಿ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಬೆಳಗಾವಿಯಲ್ಲೂ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್ 25ರಿಂದ ಮಳೆಯಾಗಲಿದೆ.
ಶಿವಮೊಗ್ಗದ ಕೆಲವು ತಾಲೂಕುಗಳು, ಶೃಂಗೇರಿ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ. ಶನಿವಾರ ಕೊಡಗಿನಲ್ಲಿ ಸಾಧಾರಣ ಮಳೆಯಾಗಲಿದೆ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.