Tuesday, February 10, 2026
Menu

ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ಗೊತ್ತುವಳಿ ನೋಟಿಸ್‌ ಸಲ್ಲಿಕೆ

ಕಾಂಗ್ರೆಸ್‌ ಪಕ್ಷವು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ಗೊತ್ತುವಳಿ ನೋಟಿಸ್​ ಅನ್ನು ಲೋಕಸಭಾ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಅವರಿಗೆ ಸಲ್ಲಿಸಿದೆ. ಟಿಎಂಸಿ ನಾಯಕರು ಈ ಅವಿಶ್ವಾಸ ಗೊತ್ತುವಳಿಗೆ ಸಹಿ ಹಾಕಿಲ್ಲ. ನಿಯಮ 94ಸಿ ಅಡಿಯಲ್ಲಿ ಕಾಂಗ್ರೆಸ್‌ ಅವಿಶ್ವಾಸ ಗೊತ್ತುವಳಿ ನೋಟಿಸ್ ಸಲ್ಲಿಸಿದೆ. ನೋಟಿಸ್ ಅನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ. ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್

ರಾಜ್ಯ ಕಂಡ ಪ್ರಾಮಾಣಿಕ, ಧೀಮಂತ ರಾಜಕಾರಣಿ ಮಾಜಿ ಸಿಎಂ  ಕೆಂಗಲ್ ಹನುಮಂತಯ್ಯ: ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯನವರು, ರಾಜ್ಯ ಕಂಡ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ಮರಿಸಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ ಜನ್ಮ ದಿನಾಚರಣೆ ಅಂಗವಾಗಿ  ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ

ನಾನು, ಸಿದ್ದರಾಮಯ್ಯ ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ: ಡಿಕೆ ಶಿವಕುಮಾರ್‌

ನನಗೆ ಯಾವ ಗೊಂದಲವೂ ಇಲ್ಲ. ಗೊಂದಲ ಬೇರೆಯವರಿಗೆ ಇರಬಹುದು. ನಾನು ಹಾಗೂ ಸಿದ್ದರಾಮಯ್ಯ ಅವರು ಏನು ಮಾತನಾಡಿದ್ದೇವೆ ಎಂಬುದು ನಮಗೆ ಗೊತ್ತು. ನಾವಿಬ್ಬರು ಕದ್ದು ಮುಚ್ಚಿ ಮಾತನಾಡಿಕೊಂಡಿಲ್ಲ. ನಮ್ಮ ಪಕ್ಷದ ವರಿಷ್ಠರು ಎಲ್ಲಾ ಸೇರಿ ಮಾತನಾಡಿಕೊಂಡಿದ್ದೇವೆ. ಬೇರೆಯವರೆಲ್ಲ ಇದಕ್ಕೆ ಟೆನ್ಷನ್ ತೆಗೆದುಕೊಳ್ಳುವುದು,

ಸತ್ಯ ಎದುರಿಸಲಾಗದ ಹೇಡಿತನ, ಸಂಸತ್‌ಗೆ ಅಗೌರವ ತೋರಿದ ಪ್ರಧಾನಿ ಮೋದಿ: ಸಿಎಂ ಸಿದ್ದರಾಮಯ್ಯ

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್‌ಗೆ ತೋರಿಸಿರುವ ಅಗೌರವ ಮಾತ್ರವಲ್ಲ ಸತ್ಯವನ್ನು ಎದುರಿಸಲಾಗದ ಹೇಡಿತನವೂ ಆಗಿದೆ‌. ಭಾರತದ ಸಂಸತ್ತಿನ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನ ಮಂತ್ರಿಯವರ ಉತ್ತರ ಇಲ್ಲದೆ

ಮೆಟ್ರೊಗೆ ರಾಜ್ಯಸರ್ಕಾರ 5,066 ಸಾವಿರ ಕೋಟಿ ರೂ. ಕೊಟ್ಟಿದೆ, ದರ ನಿಗದಿಯಲ್ಲಿ ಸಾಧ್ಯವಿರುವ ಪ್ರಯತ್ನ ಮಾಡಲಾಗುವುದು: ಡಿಸಿಎಂ

ಬೇರೆ ಮೆಟ್ರೋಗಳಿಗೆ ಹೋಲಿಸಿದರೆ ನಮ್ಮ ಮೆಟ್ರೋ ದರ ಪಟ್ಟಿ ಹೆಚ್ಚಿದೆ ಎಂದು ಹೇಳುತ್ತಾರೆ. ಉದಾಹರಣೆಗೆ ದೆಹಲಿಯಲ್ಲಿ ಭದ್ರತಾ ವಿಭಾಗದ ಜವಾಬ್ದಾರಿ ಕೇಂದ್ರ ಸರ್ಕಾರದ ಅಡಿಯಲ್ಲಿದೆ. ಸಿಎಸ್‌ಎಫ್‌ ಅಲ್ಲಿನ ಜವಾಬ್ದಾರಿ ತೆಗೆದುಕೊಂಡಿದೆ. ಇಲ್ಲಿ ನಾವೇ ಭದ್ರತೆಯ ಜವಾಬ್ದಾರಿ ಹೊತ್ತಿದ್ದೇವೆ. ಜೊತೆಗೆ ನಾವು ಇಲ್ಲಿ

ಕೇಂದ್ರವು ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದ ತೇಜಸ್ವಿ ಸೂರ್ಯ: ಡಿಕೆ ಸುರೇಶ್ ಕಿಡಿ

ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್  ಅನ್ನು  ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್  ಕಿಡಿ ಕಾರಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್  ಪ್ರತಿಕ್ರಿಯೆ ನೀಡಿದರು.

ಮೆಟ್ರೊ ಟಿಕೆಟ್‌ ದರ ಏರಿಕೆ ಕೇಂದ್ರವೇ ಮಾಡೋದಾದ್ರೆ ಒಪ್ಪಲ್ಲವೆಂದು ಸಿಎಂ ಪತ್ರ ಬರೆಯಲಿ: ಆರ್‌ ಅಶೋಕ

ಮೆಟ್ರೊ ಟಿಕೆಟ್‌ ದರ ಏರಿಕೆಯಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ. ಒಂದು ವೇಳೆ ಕೇಂದ್ರ ಸರ್ಕಾರದಿಂದ ದರ ಏರಿಕೆ ಆಗುವುದಿದ್ದರೆ, ಮುಂದಿನ 2 ವರ್ಷ ದರ ಏರಿಕೆಯನ್ನು ಒಪ್ಪಲ್ಲ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಿ ಎಂದು ಪ್ರತಿಪಕ್ಷ ನಾಯಕ

ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮನ್ನು ಪ್ರಚೋದನೆ ಮಾಡಬೇಡಿ: ಯತೀಂದ್ರಗೆ ಇಕ್ಬಾಲ್ ಹುಸೇನ್ ವಾರ್ನ್‌

ನಾಯಕತ್ವ ಬದಲಾವಣೆ ವಿಚಾರವಾಗಿ ತಂದೆಯ ಪರವಾಗಿ ಪದೇ ಪದೇ ಬ್ಯಾಟಿಂಗ್ ಬೇಡ. ನಮ್ಮನ್ನು ಪ್ರಚೋದನೆ ಮಾಡಬೇಡಿ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಿಸ್ತಿನ ಪಕ್ಷ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಪಂದ್ಯ: ಇನ್ನೂ ಕ್ಲಿಯರೆನ್ಸ್‌ ನೀಡಿಲ್ಲವೆಂದ ಪರಮೇಶ್ವರ್‌

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯ ನಡೆಯುವುದಕ್ಕೆ ನಮ್ಮ ಕಡೆಯಿಂದ ಇನ್ನೂ ಕ್ಲಿಯರೆನ್ಸ್ ನೀಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಜಸ್ಟೀಸ್ ಕುನ್ಹಾ ಅವರ ವರದಿಯ ಶಿಫಾರಸು ಪಾಲಿಸಬೇಕು ಅಂತ ಹೇಳಿದ್ದೇವೆ, ಸರ್ಕಾರದಿಂದ ಜಿಬಿಎ ಹಾಗೂ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ

ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ವಿರೋಧಿಸಿ ಫೆ.12ರಂದು ಪ್ರತಿಭಟನೆ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ಸೇರಿ ಹಲವು ಸಂಘಟನೆಗಳು ಫೆ.12ರಂದು ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿವೆ. ಭಾರತ ಸರ್ಕಾರವು ರೈತರ ಹಿತರಕ್ಷಣೆ ಮಾಡಲಿದ್ದೇವೆ ಎಂದು ಭರವಸೆ ಕೊಟ್ಟಿದ್ದು, ಈ ಒಪ್ಪಂದವು ಅಮೆರಿಕದ