ರಾಜಕೀಯ
ಮೇಕೆದಾಟು ಡಿಪಿಆರ್ ತಿರಸ್ಕರಿಸಿ: ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಆಗ್ರಹ
ಕರ್ನಾಟಕ ಸರ್ಕಾರದ ಮೇಕೆದಾಟು ಯೋಜನೆಯ ಭೂಮಿ ಪೂಜೆಗೆ ತಮಿಳುನಾಡು ಸರ್ಕಾರ ಆಕ್ಷೇಪ ವ್ಯಕ್ತಪಡಿಸಿ, ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಅಲ್ಲಿನ ಸಿಎಂ ವಿಜಯ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದ ಈ ಯೋಜನೆಯಿಂದ ಜೀವನೋಪಾಯಕ್ಕಾಗಿ ಕಾವೇರಿ ನದಿಯನ್ನೇ ನಂಬಿಕೊಂಡಿರುವ ತಮಿಳುನಾಡಿನ ಲಕ್ಷಾಂತರ ರೈತರಲ್ಲಿ ಆತಂಕ ಮೂಡಿಸಿದೆ ಎಂದು ವಿಜಯ್ ಪತ್ರದಲ್ಲಿ ವಿವರಿಸಿದ್ದಾರೆ. ತಮಿಳುನಾಡು ಒಪ್ಪಿಗೆಯನ್ನು ಪಡೆಯದೆ ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳದಂತೆ ಕರ್ನಾಟಕ
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ತಡೆ
ಕರ್ನಾಟಕದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಕೇಂದ್ರ ಗೃಹ ಸಚಿವಾಲಯವು ತಡೆ ನೀಡಿದೆ. ಈಗಿರುವ ಕಾನೂನು ವ್ಯವಸ್ಥೆ ಸಮರ್ಪಕವಾಗಿದೆ. ಹೊಸ ಕಾನೂನು ಅಗತ್ಯವಿಲ್ಲದಿರಬಹುದು ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಿದೆ. ಕಳೆದ ಫೆಬ್ರವರಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಮೇಕೆದಾಟು ವಿಚಾರದಲ್ಲಿ ಸುಪ್ರೀಂಕೋರ್ಟ್ಗೆ ಧನ್ಯವಾದ ಎಂದ ಡಿಕೆ ಶಿವಕುಮಾರ್
ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ವಜಾಗೊಳಿಸಿದೆ. ಇದು ಕರ್ನಾಟಕ ಪಾಲಿಗೆ ಶುಭಸುದ್ದಿ. ಕರ್ನಾಟಕ ರಾಜ್ಯದ ಜನರ ಪರವಾಗಿ ನಾವು ಸುಪ್ರೀಂ ಕೋರ್ಟಿಗೆ ಧನ್ಯವಾದ ಅರ್ಪಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯಸಭೆ ಚುನಾವಣೆ ಚರ್ಚೆಗೆ ಸಿಎಂ ದೆಹಲಿಗೆ: ಈಶ್ವರ ಖಂಡ್ರೆ
ಮುಂಬರುವ ರಾಜ್ಯಸಭಾ ಚುನಾವಣೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿಗಳು ಮತ್ತು ನಾಯಕರು ದೆಹಲಿಗೆ ಹೋಗಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಮಾಡಿದ ಬಳಿಕ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ
ಪ್ಯಾಲೆಸ್ಟೀನ್ ಪರ ನಿಲುವು ಪುನರುಚ್ಛರಿಸಿದ ಪಾಕ್ : ಟ್ರಂಪ್ಗೆ ಹಿನ್ನಡೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನವು ಅಬ್ರಹಾಂ ಒಪ್ಪಂದಕ್ಕೆ ಸೇರ್ಪಡೆಯಾಗಬೇಕು ಎಂದು ಕರೆ ನೀಡಿದ್ದು, ಪಾಕಿಸ್ತಾನ ಸ್ಪಷ್ಟವಾಗಿ ನಿರಾಕರಿಸುವ ಮೂಲಕ ಪ್ಯಾಲೆಸ್ಟೀನ್ ಪರ ನಿಲುವನ್ನು ಮತ್ತೊಮ್ಮೆ ವ್ಯಕ್ತಪಡಿಸಿದೆ. ಇಸ್ರೇಲ್ ಜೊತೆ ಯಾವುದೇ ಸಂಬಂಧ ಸಾಮಾನ್ಯೀಕರಣಕ್ಕೆ ಸಮ್ಮತಿಸುವುದಿಲ್ಲ ಎಂದು ಸಂದೇಶ ನೀಡಿದೆ. ಮಧ್ಯಪ್ರಾಚ್ಯದಲ್ಲಿ ಇಸ್ರೇಲ್
ಇರಾನ್ ಕ್ಷಿಪಣಿ ಉಡಾವಣಾ ನೆಲೆಗಳಿಗೆ ಅಮೆರಿಕ ದಾಳಿ: ಮಧ್ಯಪ್ರಾಚ್ಯ ಇನ್ನಷ್ಟು ಉದ್ವಿಗ್ನ
ಸ್ವಯಂ ರಕ್ಷಣೆ ಹೆಸರಿನಲ್ಲಿ ಅಮೆರಿಕ ಸೇನೆಯು ಇರಾನ್ನ ಕ್ಷಿಪಣಿ ಉಡಾವಣಾ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಇನ್ನಷ್ಟು ಉದ್ವಿಗ್ನಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಇರಾನ್ ಪಡೆಗಳಿಂದ ನಮ್ಮ ಸೈನಿಕರಿಗೆ ಎದುರಾಗಬಹುದಾದ ಅಪಾಯಗಳನ್ನು ತಡೆಯುವ ಸಲುವಾಗಿ ಕ್ಷಿಪಣಿ ಉಡಾವಣೆ ತಾಣಗಳು ಹಾಗೂ
ಮೇಕೆದಾಟು: ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂ
ಕರ್ನಾಟಕದ ಮೇಕೆದಾಟು ಯೋಜನೆ ಸಂಬಂಧ 2025ರ ನವೆಂಬರ್ನಲ್ಲಿ ನೀಡಿದ್ದ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು ಹಾಕುತ್ತಿದ್ದು, ತೀರ್ಪು ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಿತ್ತು. ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು
ಕ್ವಿನ್ ಸಿಟಿಯಲ್ಲಿ ಟೊಯೋಟಾ ಬಿಝ್ಇಂಟೆಲ್ ಹಬ್, 1,200 ಕೋಟಿ ರೂ. ಹೂಡಿಕೆಗೆ ಒಡಂಬಡಿಕೆ
ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ ಮಟ್ಟದ ತನ್ನ ‘ಬಿಝ್ಇಂಟೆಲ್ ಹಬ್ ಸ್ಥಾಪಿಸಲಿದೆ. ಕಾವೇರಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೃಹತ್
ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿಕೆ ಶಿವಕುಮಾರ್
“ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವಂತಾಗಬಾರದು. ಜನರಿಗೆ ಸರಿಯಾದ ದಾಖಲೆ ಒದಗಿಸಿಕೊಟ್ಟು ಅವರ ಮತ ಕಾಪಾಡಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ಹೊರವಲಯ ದೇವನಹಳ್ಳಿ ಬಳಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಕಾಂಗ್ರೆಸ್ ನಡೆ, ಮತ ರಕ್ಷಣೆ ಕಡೆ ಸಭೆ ಬಳಿಕ
2028ಕ್ಕೆ ರಾಜ್ಯದಲ್ಲಿ ಇದೇ ಡಿಕೆ ಶಿವಕುಮಾರ್ ಅಧಿಕಾರಕ್ಕೆ ಎಂದ ಡಿಸಿಎಂ
“ಅಮಿತ್ ಶಾ ಬಿಜೆಪಿಗೆ 122 ಸೀಟು ಬರುತ್ತದೆ, ಎಲ್ಲರೂ ಸೂಟುಬೂಟು ಸಿದ್ಧಮಾಡಿಕೊಳ್ಳಿ ಎಂದಿದ್ದರು. ನಾನು ನಮಗೆ 136 ಸೀಟು ಬರಲಿದೆ ಎಂದು ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ ಬರೆದುಕೊಳ್ಳಿ, 2028ಕ್ಕೆ ಇದೇ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ”




