Menu

ಬೆಂಗಳೂರಿನ ಕಸ ಮಾಫಿಯಾವನ್ನು ಅಷ್ಟು ಸುಲಭದಲ್ಲಿ ಭೇದಿಸಲಾಗದು, ಕಸ ವಿಲೇವಾರಿಗೆ 33 ಪ್ಯಾಕೇಜ್ ಗಳಾಗಿ ಟೆಂಡರ್

ಬೆಂಗಳೂರಿನ ಕಸದ ಮಾಫಿಯಾವನ್ನು ಅಷ್ಟು ಸುಲಭದಲ್ಲಿ ಭೇದಿಸಲು ಆಗುವುದಿಲ್ಲ.  ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ 98 ವಾರ್ಡ್ ಗಳಿಗೆ ಟೆಂಡರ್ ಕರೆದಾಗ ಅದನ್ನೂ ಮಾಡಲು ಬಿಡಲಿಲ್ಲ. ಕಸ ವಿಲೇವಾರಿ ವಿಚಾರಕ್ಕೆ ನಾನೂ ಸಹ ದೊಡ್ಡ ಹೋರಾಟ ಮಾಡಿದೆ. ಈ ಹಿಂದಿನ ಟೆಂಡರ್ ವ್ಯವಸ್ಥೆ ರದ್ದುಗೊಳಿಸಿ ಹೊಸ ಟೆಂಡರ್ ಕರೆಯಬೇಕು ಎಂದು ನ್ಯಾಯಲಯ ನಮ್ಮಿಂದ ಅಫಿಡವಿಟ್ ಬರೆಸಿಕೊಂಡಿದೆ. ಟೆಂಡರ್ ನಲ್ಲಿ ಅಕ್ರಮ ನಡೆದಿದೆ ಎಂದು ವರದಿ ಬಂದ ಮೇಲೆ ತನಿಖೆ ನಡೆಸಿ ರದ್ದುಗೊಳಿಸಲಾಗಿದೆ.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಂಧ್ರ ಮತ್ತು ಮಹಾರಾಷ್ಟ್ರ ಅಡ್ಡಿ: ಡಿಸಿಎಂ

“ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಧಿಸೂಚನೆಗೆ ಒಮ್ಮೆ ಆಂಧ್ರ ಪ್ರದೇಶ ಮತ್ತೊಮ್ಮೆ ಮಹಾರಾಷ್ಟ್ರದವರು ಕೇಂದ್ರದ ಮೇಲೆ ಒತ್ತಡ ತಂದು ನಿಲ್ಲಿಸಿದರು” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.  ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಪಿ.ಎಚ್.ಪೂಜಾರ್ ಅವರು ಕೃಷ್ಣಾ ಮೇಲ್ದಂಡೆ ಯೋಜನೆಯ ಪ್ರಗತಿಯ ವಿಚಾರವಾಗಿ

“ಮೀಸಲಾತಿ” ರಾಜಕೀಯ ಪಕ್ಷಗಳ ಪೊಲಿಟಿಕಲ್ ಅಜೆಂಡಾ ಆಗದಿರಲಿ

ಶೋಷಿತರು ಮತ್ತು ಸಾಮಾಜಿಕ ತುಳಿತಕ್ಕೊಳಗಾದವರಿಗೆ ಸಾಂವಿಧಾನಿಕ ಸವಲತ್ತು ನೀಡುವ ವಿಚಾರದಲ್ಲಿ ಶಾಸನಸಭೆಗಳಲ್ಲಿ ಪಕ್ಷಾತೀತ ಆರೋಗ್ಯದಾಯಕ ಮತ್ತು ಸಂಯಮಪೂರ್ಣ ಚರ್ಚೆಗಳ ಅವಶ್ಯತೆ ಇದೆ. ಮೀಸಲಾತಿ ವಿಷಯ ಯಾವುದೇ ರಾಜಕೀಯ ಪಕ್ಷದ ಪೊಲಿಟಿಕಲ್ ಅಜೆಂಡಾ ಆಗಬಾರದು. ಮೀಸಲು ಹಾಗೂ ಒಳಮೀಸಲು. ದೇಶದ ಅತಿ ದೊಡ್ಡ

ಪಾಲಿಕೆ ಚುನಾವಣೆಗೆ ಸಿದ್ಧತೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ: ಡಿಕೆ ಶಿವಕುಮಾರ್

“ಪಾಲಿಕೆ ಚುನಾವಣೆಗೆ ಸಿದ್ಧತೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ. ನವೆಂಬರ್ 1ರ ವೇಳೆಗೆ ವಾರ್ಡ್ ಮರುವಿಂಗಡಣೆ ಪ್ರಕ್ರಿಯೆ ನಡೆಯಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಟಿ.ಎನ್ ಜವರಾಯಿ ಗೌಡ ಅವರು ಗ್ರೇಟರ್

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: BEL ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ. “ರೈತ ಕರೆ ಕೇಂದ್ರ” ಉನ್ನತೀಕರಣದ  ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸಹಿ ಹಾಕಿದರು.

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025’ ಅನ್ನು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿಕೆಶಿವಕುಮಾರ್ ಮೇಲ್ಮನೆಯಲ್ಲಿ ಮಂಡಿಸಿದರು. ಅಲ್ಪಚರ್ಚೆ

ಕಾಂಗ್ರೆಸ್ ಯೋಜನೆಗಳ ಮೂಲಕ ಬಡವರ ಜೇಬಿಗೆ 1 ಲಕ್ಷ ಕೋಟಿ ಹಾಕುತ್ತಿದ್ದೇವೆ: ಡಿಕೆ ಶಿವಕುಮಾರ್

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.  ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ

ಡಿಸಿಎಂ ಮಾತಿನಂತೆ ಮನೆ ಬಾಗಲಿಗೆ ಹೋಗಿ ಉಚಿತ ಇ-ಖಾತೆ ಕೊಡುವ ವ್ಯವಸ್ಥೆ ಮಾಡಿ: ಆರ್‌.ಅಶೋಕ್‌ ಆಗ್ರಹ

ಇ-ಖಾತೆ ಅಂದರೆ ಈಗಿರುವ ಕಾಗದದ ಖಾತೆಗಳ ಡಿಜಿಟಲೀಕರಣ ಅಷ್ಟೇ. ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಈಗಾಗಲೇ ಶುಲ್ಕ ಕಟ್ಟಿ, ಲಂಚ ಕೊಟ್ಟು ಮಾಡಿಸಿಕೊಂಡಿರುವ ಖಾತೆಗಳಿಗೆ ಈಗ ಮತ್ತೊಮ್ಮೆ ಸರ್ಕಾರಕ್ಕೆ ಯಾಕೆ ದುಡ್ಡು ಕೊಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಪ್ರಶ್ನಿಸಿದ್ದಾರೆ. ವಿಧಾನಸಭೆಯಲ್ಲಿ 

ತುಂಗಭದ್ರಾ ಅಣೆಕಟ್ಟೆ ನೂತನ ಕ್ರೆಸ್ಟ್ ಗೇಟ್ ಗಳ ತಯಾರಿಕೆ ಪ್ರಗತಿಯಲ್ಲಿ: ಡಿಕೆ ಶಿವಕುಮಾರ್

“ತುಂಗಭದ್ರಾ ಅಣೆಕಟ್ಟೆಯ ಎಲ್ಲಾ 33 ಕ್ರೆಸ್ಟ್ ಗೇಟ್ ಗಳನ್ನು ಬದಲಾವಣೆ ಮಾಡಲು ತುಂಗಭದ್ರಾ ಮಂಡಳಿಯವರು ಟೆಂಡರ್ ಕರೆದಿದ್ದಾರೆ. ಈಗಾಗಲೇ ಅಹಮದಾಬಾದ್ ಸಂಸ್ಥೆಯವರಿಗೆ ಗುತ್ತಿಗೆ ನೀಡಲಾಗಿದೆ. ಆರು ಗೇಟ್ ಗಳ ತಯಾರಿ ಕೆಲಸ ನಡೆಯುತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ವಿಧಾನಸಭೆಯಲ್ಲಿ  ತಿಳಿಸಿದ್ದಾರೆ.

ದಲಿತರ ನಾಮನಿರ್ದೇಶನದಿಂದ ಸಂಘ ಹಾಳಾಗಲ್ಲ: ಸಚಿವ ಶಿವರಾಜ್ ತಂಗಡಗಿ

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರನ್ನು ನಾಮನಿರ್ದೇಶನ ಮಾಡಿದರೆ ಸಹಕಾರ ಸಂಘ ಮುಚ್ಚುತ್ತವೆ ಎಂಬುದು ಸರಿಯಲ್ಲ ಎಂಬ ಶಾಸಕ ಜಿ ಟಿ ದೇವೇಗೌಡ ಅವರ ಹೇಳಿಕೆಗೆ ಸಚಿವ ಶಿವರಾಜ್ ತಂಗಡಗಿ ಆಕ್ರೋಶ ವ್ಯಕ್ತಪಡಿಸಿದರು. ವಿಧೇಯಕದ ಮೇಲಿನ ಚರ್ಚೆ ವೇಳೆ ಜೆಡಿಎಸ್ ಶಾಸಕ