ರಾಜಕೀಯ
ಜಾಗತಿಕ ತೈಲ ಬೆಲೆ ಗಣನೀಯ ಕುಸಿತ, ಪೆಟ್ರೋಲ್, ಡಿಸೇಲ್ ದರ ಇಳಿಕೆ?
ಯುದ್ಧ ವಿರಾಮ ಘೋಷಣೆಯೊಂದಿಗೆ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದ ಜಾರಿ ನೀರಿಕ್ಷೆಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಶಮನದ ಹಾದಿಯಲ್ಲಿದೆ, ಈ ಹಿನ್ನೆಲೆ ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಬ್ರೆಂಟ್ ಕ್ರೂಡ್ ಬೆಲೆ ಒಂದೇ ದಿನದಲ್ಲಿ ಶೇಕಡಾ 4 ಕುಸಿತ ಕಂಡು 80 ಡಾಲರ್ಗೆ ಇಳಿದಿದೆ. ಯುದ್ಧದ ಭೀತಿಯಿಂದಾಗಿ ಕಚ್ಚಾ ತೈಲ ಬೆಲೆ ತೀವ್ರವಾಗಿ ಏರಿಕೆ ಕಂಡಿದ್ದು, ಪೆಟ್ರೋಲ್, ಡೀಸೆಲ್, ಸಿಎನ್ಜಿ ಹಾಗೂ ಅಡುಗೆ
ಪ್ರತಿಪಕ್ಷಗಳ ವದಂತಿಗಳಿಗೆ ಕಿವಿಗೊಡಬೇಡಿ, ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ
ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ “ಗೃಹಲಕ್ಷ್ಮಿ” ಮತ್ತು “ಗೃಹಜ್ಯೋತಿ” ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲವರು ಸತ್ತವರ
ರೈತರ ಆಕ್ರೋಶಕ್ಕೆ ಕಾಂಗ್ರೆಸ್ ಸರ್ಕಾರ ಭಸ್ಮವಾಗಲಿದೆ: ಆರ್ ಅಶೋಕ
ರೈತರ ಜಮೀನಿನ ಮೇಲೆ ಬುಲ್ಡೋಜರ್ ಓಡಿಸಿ, ರಿಯಲ್ ಎಸ್ಟೇಟ್ ಸಾಮ್ರಾಜ್ಯ ಕಟ್ಟಲು ಹೊರಟಿರುವ Commission Minister @DKShivakumar ಅವರೇ, ಅನ್ನದಾತರ ಆಕ್ರೋಶದ ಜ್ವಾಲೆಯಲ್ಲಿ ಕಾಂಗ್ರೆಸ್ ಸರ್ಕಾರ ಭಸ್ಮವಾಗಬೇಕಾಗುತ್ತದೆ, ಎಚ್ಚರಿಕೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಜಮೀನಿನ
ರಾಜ್ಯದ ಭದ್ರತಾ ಮೂಲಸೌಕರ್ಯ, ಪೊಲೀಸ್ ಸಾಮರ್ಥ್ಯ ಸುಧಾರಣೆ ನೆರವಿಗೆ ಸಿಎಂ ಮನವಿ
ರಾಜ್ಯಕ್ಕೆ ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (IRBs) ಸೃಷ್ಟಿ, ಪೊಲೀಸ್ ಇಲಾಖೆ ಚಟುವಟಿಕೆಗಳಿಗೆ ಸಿಎಸ್ಆರ್ ನಿಧಿ ಬಳಕೆ, ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ಮೇಲ್ದರ್ಜೀಕರಣ, ಕಾರಾಗೃಹಗಳ (ಜೈಲುಗಳ) ಆಧುನೀಕರಣ ಸೇರಿದಂತೆ ಕರ್ನಾಟಕ ರಾಜ್ಯದ ಭದ್ರತಾ ಮೂಲಸೌಕರ್ಯ ಮತ್ತು ಪೊಲೀಸ್ ಸಾಮರ್ಥ್ಯ ಸುಧಾರಣೆಗೆ
ಬಿಡದಿ ಟೌನ್ಶಿಪ್ ಭೂಸ್ವಾಧೀನಕ್ಕೆ ನಗರಾಭಿವೃದ್ಧಿ ಇಲಾಖೆ ಅಂತಿಮ ಅಧಿಸೂಚನೆ
ಬಿಡದಿ ಟೌನ್ಶಿಪ್ಗೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಪ್ರಕಟಿಸಿದೆ. ರಾಜಕೀಯ ವಿವಾದ, ಪ್ರತಿಭಟನೆಗಳ ನಡುವೆಯೂ ನಗರಾಭಿವೃದ್ಧಿ ಇಲಾಖೆ ಅಂತಿಮ ಅಧಿಸೂಚನೆ ಹೊರಡಿಸಿ ಯೋಜನಾ ವ್ಯಾಪ್ತಿಯ 9 ಕಂದಾಯ ಗ್ರಾಮಗಳಲ್ಲಿ ಮೊದಲಿಗೆ ಮೂರು ಗ್ರಾಮಗಳ 519 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟ
ರಾಜ್ಯಸಭೆ ನಾಮಪತ್ರ ತಿರಸ್ಕೃತ: ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ತಾವು ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಅತುಲ್ ಎಸ್. ಚಂದೂರ್ಕರ್ ಅವರಿದ್ದ ಪೀಠವು ಚುನಾವಣಾ ಪ್ರಕ್ರಿಯೆಯಲ್ಲಿ
ಹೊರ ರಾಜ್ಯದಲ್ಲಿ ವ್ಯಾಸಂಗ ಮಾಡುವ ರಾಜ್ಯದ ವಿದ್ಯಾರ್ಥಿಗೂ ಉಚಿತ ಬಸ್ ಪಾಸ್
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯಡಿ ಹೊರ ರಾಜ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ವಿದ್ಯಾರ್ಥಿಗಳಿಗೂ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯಗಳಲ್ಲಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ
ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಿ: ಸಿಎಂ
ಕರ್ನಾಟಕ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ. ರಾಜ್ಯದ ನಿರಾವರಿ ಯೋಜನೆಗಳಿಗೆ ಹೆಚ್ಚಿನ ಕಾಳಜಿ ವಹಿಸಿರುವ
ಪಿಎಂ ಮೋದಿಗೆ 18 ಬೇಡಿಕೆಗಳ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್
ನೀರಾವರಿ ಯೋಜನೆಗಳಿಗೆ ಸಹಕಾರ, ಕೇಂದ್ರದ ಬಾಕಿ ಅನುದಾನ, ಬೆಂಗಳೂರಿಗೆ ವಿಶೇಷ ಅನುದಾನ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸೇರಿದಂತೆ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಹಕರಿಸಲು ಸಿಎಂ ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಮುಂದೆ 18 ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ವಿವರ ಹೀಗಿದೆ, 1.
ಬೆಂಗಳೂರಿಗೆ ಹೆಚ್ಚುವರಿ ಅನುದಾನ, ರಾಜ್ಯದ ನಗರಗಳಲ್ಲಿ ಆರ್ಥಿಕ ಬೆಳವಣಿಗೆ ಕೇಂದ್ರಗಳ ಬಲಪಡಿಸಲು ನೀತಿ ಆಯೋಗಕ್ಕೆ ಸಿಎಂ ಮನವಿ
ಶಿಕ್ಷಣ, ಆರೋಗ್ಯ, ಉದ್ಯೋಗ ಸೃಷ್ಟಿ, ತಂತ್ರಜ್ಞಾನ, ಸಂಶೋಧನೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಪ್ರಗತಿಗೆ ಕರ್ನಾಟಕ ಸೇರಿದಂತೆ ರಾಜ್ಯಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ನೀತಿ ಆಯೋಗದ ಸಭೆಯಲ್ಲಿ ಸಲಹೆ ನೀಡಿದರು. ದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ




