ರಾಜಕೀಯ
ಹೈಕಮಾಂಡ್ ಹೇಳುವವರೆಗೂ ಸಿದ್ದರಾಮಯ್ಯ ಸಿಎಂ: ಸಚಿವ ಜಿ. ಪರಮೇಶ್ವರ್
ಮೈಸೂರು: ಐದು ವರ್ಷ ಪೂರ್ಣಾವಧಿ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆಂಬ ಯತೀಂದ್ರ ಹೇಳಿ ಅವರ ವೈಯುಕ್ತಿಕ ಹೇಳಿಕೆಯಾಗಿದೆ. ನಮ್ಮಲ್ಲಿ ಹೈಕಮಾಂಡ ಹೇಳುವವರೆಗೂ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮೈಸೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರು ಅವರಿಗಿರೂವ ಮಾಹಿತಿ ಮೇರೆಗೆ ಮಾತನಾಡಿರಬಹುದು. ಆದರೆ, ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ. ಹೈಕಮಾಂಡ್ ಒಂದು ವೇಳೆ ನಾಳೆಯೇ ಬದಲಾವಣೆ ಮಾಡಿದರೆ ಬದಲಾಗಬಹುದು, ಮುಂದುವರೆಸಿದರೆ ಮುಂದುವರೆಯಲು ಬಹುದಾಗಿದೆ.
ಬಿಸಿಸಿಐ ಗುತ್ತಿಗೆಯಲ್ಲಿ ಬಿ ಗುಂಪಿಗೆ ಕೊಹ್ಲಿ, ರೋಹಿತ್ ಗೆ ಹಿಂಬಡ್ತಿ: ಶಮಿ ಔಟ್
ಟಿ-೨೦ ಮತ್ತು ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಅವರನ್ನು ಬಿಸಿಸಿಐ ಶನಿವಾರ ಪ್ರಕಟಿಸಿದ ಗುತ್ತಿಗೆ ಪಟ್ಟಿಯಲ್ಲಿ ಹಿಂಬಡ್ತಿ ನೀಡಿದೆ. ಮೊಹಮದ್ ಶಮಿ ಅವರನ್ನು ಬಿಸಿಸಿಐ ಗುತ್ತಿಗೆಯಿಂದಲೇ ಹೊರಗೆ ಹಾಕಲಾಗಿದೆ. ಭಾರತ ತಂಡದ ಸ್ಟಾರ್
ಗರ್ಭಿಣಿಗೆ ಮಗು ಬೇಡವೆನಿಸಿದರೆ ಏಳೂವರೆ ತಿಂಗಳಲ್ಲೂ ಗರ್ಭಪಾತ ಹಕ್ಕಿದೆ: ಸುಪ್ರೀಂಕೋರ್ಟ್
ಗರ್ಭಿಣಿಗೆ ಮಗು ಬೇಡವೆನಿಸಿದರೆ ಏಳೂವರೆ ತಿಂಗಳು (30 ವಾರ) ತುಂಬಿದ ಬಳಿಕವೂ ಗರ್ಭಪಾತ ಮಾಡಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಮಹತ್ತರ ತೀರ್ಪು ನೀಡಿದೆ. ಈವರೆಗೆ ಭಾರತದಲ್ಲಿ 5 ತಿಂಗಳವರೆಗೆ ಮಾತ್ರ ಗರ್ಭಪಾತಕ್ಕೆ ಅನುಮತಿಯಿದೆ. ವಿಶೇಷ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ
ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರು ಹೇಳೋದನ್ನು ಗೌರವದಿಂದ ಸ್ವೀಕರಿಸುತ್ತೇನೆ: ಡಿಕೆ ಶಿವಕುಮಾರ್
ಯತೀಂದ್ರ ಅವರೇ ನಮ್ಮ ಹೈ ಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೈಕಮಾಂಡ್ ಎಂಬಂತೆ ಹೇಳಿಕೆ ನೀಡಿರುವಾಗ ಅವರನ್ನೇ ಹೈಕಮಾಂಡ್ ಎಂದು ಸ್ವೀಕಾರ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕುಟುಕಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದ
ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲಿ ನಂ.1: ಸಿಎಂ
ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ, ದೇಶದಲ್ಲಿ ನಂ.1 ರಾಜ್ಯವಾಗಿದ್ದು, ಈವರೆಗೆ 6000 ಕೋಟಿ ರೂ.ಗಳ ವಿಮೆಪರಿಹಾರವನ್ನು ರೈತರಿಗೆ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂತರರಾಷ್ಟ್ರೀಯ ವಾಣಿಜ್ಯ ಮೇಳ -2026 ಉತ್ಪದಾನೋತ್ತರ ಕೃಷಿ – ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ
ತಂದೆಯೇ ಐದು ವರ್ಷ ಸಿಎಂ ಆಗಿರ್ತಾರೆ: ಯತೀಂದ್ರ ಸಿದ್ದರಾಮಯ್ಯ
ನಮ್ಮ ತಂದೆಯವರೇ ಪೂರ್ಣ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಈಗಾಗಲೇ ಇದು ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನವಾಗಿರುವ ವಿಚಾರ. ಹೈಕಮಾಂಡ್ ಈ ಬಗ್ಗೆ ಗ್ರೀನ್ ಸಿಗ್ನಲ್ ನೀಡಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ದೀರ್ಘಕಾಲದಿಂದ ಚರ್ಚೆಯಾಗುತ್ತಿದ್ದ
ಮೆಟ್ರೋ ದರ ಏರಿಕೆ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ: ಡಿಕೆ ಶಿವಕುಮಾರ್
ಮೆಟ್ರೋ ದರ ಏರಿಕೆ ವಿಚಾರ ರಾಜ್ಯ ಸರ್ಕಾರದವರೆಗೆ ಬರುವುದಿಲ್ಲ. ಕೇಂದ್ರದ ಸಚಿವಾಲಯದ ಕಾರ್ಯದರ್ಶಿ ಈ ಸಮಿತಿಯ ಮುಖ್ಯಸ್ಥರು. ರಾಜ್ಯದಿಂದ ನಾಲ್ಕು ಜನ ಪ್ರತಿನಿಧಿ ಇದ್ದರೂ ತೀರ್ಮಾನ ಮಾಡುವುದು ಅವರೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
“ಒಂದೂವರೆ ವರ್ಷದಲ್ಲಿ ಮೊದಲ ಹಂತದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಪೂರ್ಣ”
“ಮುಂದಿನ ಒಂದೂವರೆ ವರ್ಷದಲ್ಲಿ ಮೊದಲ ಹಂತದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆ ಪೂರ್ಣಗೊಳಿಸಲಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಡಿಎ ಅಧಿಕಾರಿಗಳ ಜತೆ ಬೆಂಗಳೂರು ಬಿಸಿನೆಸ್ ಕಾರಿಡಾರ್ (ಉತ್ತರ ಹಾಗೂ ದಕ್ಷಿಣ) ಬಗ್ಗೆ ಪರಿಶೀಲನೆ ಸಭೆ ನಡೆಸಿದೆ. ಭೂಮಿ ಮಾಲೀಕರಿಗೆ
ಗ್ರಾ.ಪಂ.ಗಳಿಗೆ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರ ಆದೇಶ
ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್ನಲ್ಲಿ ಮುಗಿಯಲಿರುವ ಬೆನ್ನಲ್ಲೇ ಚುನಾವಣೆ ನಡೆಯುವವರೆಗೂ ಆಡಳಿತಾಧಿಕಾರಿಗಳ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ. ಮತ್ತೊಂದೆಡೆ 2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ
ಕೆವೈ ನಂಜೇಗೌಡರೇ ಮಾಲೂರು ಶಾಸಕ: ಸುಪ್ರೀಂಕೋರ್ಟ್
ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರುಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರಿಗೆ ಹೆಚ್ಚು ಮತಗಳು ಬಂದಿವೆ. ನಂಜೇಗೌಡಗೆ 50,957 ಮತಗಳು ಬಂದಿದ್ದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಜುನಾಥಗೌಡಗೆ 50,707 ಮತಗಳು ಬಂದಿವೆ. ಹೀಗಾಗಿ ನಂಜೇಗೌಡ ಅವರೇ ಮಾಲೂರು ಕ್ಷೇತ್ರದ ಶಾಸಕರಾಗಿ ಮುಂದುವರಿಯುತ್ತಾರೆ




