Menu

ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳ ನಿವಾಸಿಗಳಿಗೆ ಎ ಖಾತೆ

ರಾಜ್ಯದಲ್ಲಿ ಕಳೆದ ೩೦-೪೦ ವರ್ಷಗಳಿಂದ ಅನಧಿಕೃತ ಬಡಾವಣೆಗಳಲ್ಲಿ ಮನೆ, ನಿವೇಶನ ಹೊಂದಿರುವವರಿಗೆ ಎ ಖಾತೆ ನೀಡಲು ಸರ್ಕಾರ ಮುಂದಾಗಿದೆ. ಬಿ ಖಾತೆ ಕಾರಣ ಸಂಕಷ್ಟದಲ್ಲಿದ್ದ ಲಕ್ಷಾಂತರ ಕುಟುಂಬಗಳಿಗೆ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರ ಹೊಸ ಕಾಯ್ದೆ ಅಂಗೀಕರಿಸಿದೆ. ಅನಧಿಕೃತ ಬಡಾವಣೆಗಳಲ್ಲಿನ ಆಸ್ತಿಗಳಿಗೆ ಸಂಪೂರ್ಣ ಮಾಲೀಕತ್ವದ ಹಕ್ಕು ಕಲ್ಪಿಸಿ, ಎ ಖಾತೆ ನೀಡುವ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕ-2026 ಅನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ವಿಧೇಯಕದ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ವಿವರಣೆ

ಹಗರಣದ ಎಲ್ಲ ದಾಖಲೆಗಳಿದ್ದರೂ ಸಚಿವ ನಾಗೇಂದ್ರ ರಾಜೀನಾಮೆ ನೀಡುತ್ತಿಲ್ಲ: ಆರ್‌ ಅಶೋಕ

ಸಚಿವ ಬಿ.ನಾಗೇಂದ್ರ 187 ಕೋಟಿ ರೂ. ಹಗರಣ ನಡೆಸಿರುವುದಕ್ಕೆ ಸೂಕ್ತ ದಾಖಲೆಗಳಿದ್ದರೂ ಅವರನ್ನು ವಜಾ ಮಾಡುತ್ತಿಲ್ಲ. ಅಂದರೆ ಈ ಹಗರಣದಲ್ಲಿ ಕೋಟ್ಯಂತರ ರೂಪಾಯಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಸಂದಾಯವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಶಾಸಕರ ಭವನದ ಆವರಣದ ಶ್ರೀ

ಸರ್ಕಾರದ ತಪ್ಪು, ಸೋರಿಕೆ ಸರಿಪಡಿಸಿಕೊಳ್ಳಲು ಸಲಹೆ ನೀಡಿ: ಸಿಎಗಳಿಗೆ ಸಿಎಂ ಕರೆ

ಹಣಕಾಸಿನ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ಹಾಗೂ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನವಿರಲಿ ಎಂದು ಲೆಕ್ಕ ಪರಿಶೋಧಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಆಯೋಜಿಸಿದ್ದ “ಸಂವಾದ ಸಮ್ಮೇಳನ”ದಲ್ಲಿ ಸಿಎಂ 

ರಾಜ್ಯದ ಮತದಾರರ ಪಟ್ಟಿಯಲ್ಲಿ 11 ವಿದೇಶಿ ಪ್ರಜೆಗಳು

ರಾಜ್ಯದ ಮತದಾರರ ಪಟ್ಟಿಯಲ್ಲಿ ಹನ್ನೊಂದು ವಿದೇಶಿ ಪ್ರಜೆಗಳ ಹೆಸರು ಸೇರ್ಪಡೆಗೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ, ಕರ್ನಾಟಕದ ಮತದಾರರ ಗುರುತಿನ ಚೀಟಿ ಹೊಂದಿರುವ 11 ವಿದೇಶಿ ಪ್ರಜೆಗಳ ವಿವರಗಳನ್ನು ವಿದೇಶಿಗರ ನೋಂದಣಿ ಕಚೇರಿಯು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಕೇಳಿದೆ. ಈ 11

ಬೆಂಗಳೂರಿನಲ್ಲಿ 446 ಅಕ್ರಮ ವಿದೇಶಿಗಳು ವಾಸ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು ನಗರದಲ್ಲಿ ವೀಸಾ, ಪಾಸ್‌ಪೋರ್ಟ್ ಅವಧಿ ಮೀರಿದ್ದರೂ ಅಕ್ರಮವಾಗಿ 446 ವಿದೇಶಿಗರು ವಾಸವಿದ್ದಾರೆ. ಮೂರು ವರ್ಷಗಳಲ್ಲಿ ದೇಶದೊಳಗೆ ಅಕ್ರಮವಾಗಿ ನುಸುಳಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿಗರ ಮಾಹಿತಿ ಇಲ್ಲ. ಮೂರು ವರ್ಷಗಳಲ್ಲಿ 911 ಅಕ್ರಮ ವಲಸಿಗರನ್ನು ಇಲಾಖೆ ಗುರುತಿಸಿದೆ ಎಂದು ಸರ್ಕಾರ ಮಾಹಿತಿ

ರಾಜೀವ್‌ ಗಾಂಧಿ, ದೇವರಾಜ ಅರಸು ಆದರ್ಶಗಳನ್ನು ಯುವಜನತೆಗೆ ಪರಿಚಯಿಸುವ ಕೆಲಸ ಹೆಚ್ಚಾಗಲಿ: ಮಾಜಿ ಸಿಎಂ ಸಿದ್ದರಾಮಯ್ಯ

ಮುತ್ಸದ್ದಿ ನಾಯಕರಾದ ರಾಜೀವ್‌ ಗಾಂಧಿ ಮತ್ತು ದೇವರಾಜ ಅರಸು ಅವರು ಸಾಮಾಜಿಕ ನ್ಯಾಯ ಮತ್ತು ಸಮಸಮಾಜ ನಿರ್ಮಾಣಕ್ಕೆ ನೀಡಿದ ಮಹತ್ವದ ಕೊಡುಗೆಗಳು ಸ್ಮರಣೀಯ. ಇಬ್ಬರು ಮಹಾನ್‌ ನಾಯಕರ ಜನ್ಮದಿನ ಒಂದೇ ಎಂಬುದು ವಿಶೇಷ. ಅವರ ಆದರ್ಶಗಳನ್ನು ಯುವಜನತೆಗೆ ಹೆಚ್ಚೆಚ್ಚು ಪರಿಚಯಿಸಬೇಕು ಎಂದು

ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಲಾಗಿದ್ದ  5,300 ಕೋಟಿ ರೂ. ಬಿಡುಗಡೆಗೆ ಸಿಎಂ ಆಗ್ರಹ

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವ ₹5,300 ಕೋಟಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದರು. ಮಹಾಬಲಿಪುರಂನಲ್ಲಿ  ನಡೆದ  31ನೇ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ

ನೀರು ನಮ್ಮನ್ನು ಒಗ್ಗೂಡಿಸಬೇಕು, ವಿಭಜಿಸಬಾರದು, ಸಮಾನತೆ, ಪಾರದರ್ಶಕತೆ, ಸಹಕಾರ ಅಗತ್ಯ: ಮುಖ್ಯಮಂತ್ರಿ

ಸ್ನೇಹಿತರೇ, ನೀರು ನಮ್ಮನ್ನು ಒಗ್ಗೂಡಿಸಬೇಕು, ವಿಭಜಿಸಬಾರದು. ನೀರಿನ ಹಂಚಿಕೆಯಿಂದ ನೀರಿನ ಸಹಕಾರದತ್ತ ಸಾಗುವ ಸಮಯ ಈಗ ಬಂದಿದೆ. ನಮ್ಮ ಧ್ವನಿಯಲ್ಲಿ ನ್ಯಾಯ ಒಂದು ಭಾಗವಾದರೆ, ನಮ್ಮ ಸಂಪನ್ಮೂಲಗಳಲ್ಲಿ ನ್ಯಾಯಯುತ ಪಾಲು ಇನ್ನೊಂದು ಭಾಗವಾಗಿದೆ.  ಪ್ರತಿಯೊಂದು ರಾಜ್ಯಕ್ಕೂ ನೀರಿಗಿಂತ ಮಹತ್ವದ ಸಂಪನ್ಮೂಲ ಮತ್ತೊಂದಿಲ್ಲ.

ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡಿ: ಸಿಎಂ ಡಿಕೆ ಶಿವಕುಮಾರ್ 

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ ನ್ಯಾಯಯುತವಾಗಿ ಅನುದಾನ ನೀಡಿ. ದಕ್ಷಿಣ ಭಾರತಕ್ಕೆ ಸಲ್ಲಬೇಕಾದ

ತೆಲಂಗಾಣದಲ್ಲಿ ಹಣಕ್ಕಾಗಿ ಪ್ರಿನ್ಸಿಪಾಲರ ಕೊಲೆಗೈದ ವಿದ್ಯಾರ್ಥಿಗಳು

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿಯಲ್ಲಿ ಪ್ರಿನಿಪಾಲ್‌ ರೂಪಾ ರೆಡ್ಡಿಯವರನ್ನು ಕೊಲೆ ಮಾಡಿರುವುದು ಆಕೆಯ ವಿದ್ಯಾರ್ಥಿಗಳು ಎಂಬದನ್ನು ಪೊಲೀಸರರು ತನಿಖೆಯಲ್ಲಿ ದೃಢಪಡಿಸಿದ್ದಾರೆ. ನಾಗಾರ್ಜುನ ಗ್ರಾಮರ್ ಕಾನ್ಸೆಪ್ಟ್ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿಗಳು ಜಲ್ಸಾ ಚಟಕ್ಕೆ ಒಳಗಾಗಿ ಹಣಕ್ಕಾಗಿ ಪ್ರಾಂಶುಪಾಲರಾದ ರೂಪಾ ರೆಡ್ಡಿ