ರಾಜಕೀಯ
ಬ್ಯಾನ್ ಪ್ರಶ್ನಿಸಿ ಟೆಲಿಗ್ರಾಂ ಹೈಕೋರ್ಟ್ಗೆ, ರಿಲಯನ್ಸ್, ವಾಟ್ಸಾಪ್ ಲಾಬಿ ಎಂದ ಸಿಇಒ
ಜೂನ್ 21ರಂದು ನಡೆಯಲಿರುವ NEET-UG 2026ರ ಮರುಪರೀಕ್ಷೆಯಲ್ಲಿ ಅಭ್ಯರ್ಥಿಗಳನ್ನು ದಾರಿ ತಪ್ಪಿಸಲು ಸಂಘಟಿತ ವಂಚನೆ ಜಾಲಗಳು ಟೆಲಿಗ್ರಾಂ ಬಳಸುತ್ತಿವೆ ಎಂಬ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ಆರೋಪ ಹಿನ್ನೆಲೆ ಕೇಂದ್ರ ಸರ್ಕಾರವು ಟೆಲಿಗ್ರಾಂ ಅನ್ನು ಬ್ಯಾನ್ ಮಾಡಿದೆ. ಭಾರತ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಂಸ್ಥೆಯು ದೆಹಲಿ ಹೈಕೋರ್ಟ್ಗೆ ತುರ್ತು ವಿಚಾರಣೆ ಕೋರಿ ಅರ್ಜಿ ಸಲ್ಲಿಸಿದೆ. ಜೂನ್ 22ರವರೆಗೆ ಭಾರತದಲ್ಲಿ ಕಾರ್ಯಾಚರಣೆ ನಿರ್ಬಂಧಿಸಿರುವುದನ್ನು ಕಂಪನಿ ವಿರೋಧಿಸಿದೆ. ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರಿದ್ದ ರಜಾಕಾಲದ
ಅಮೆರಿಕ-ಇರಾನ್ ಒಪ್ಪಂದ ಒಪ್ಪಲ್ಲ, ಲೆಬನಾನ್ನಿಂದ ಸೇನೆ ವಾಪಸ್ ಪಡೆಯಲ್ಲ: ಇಸ್ರೇಲ್ ಎಚ್ಚರಿಕೆ
ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದಕ್ಕೆ ಇಸ್ರೇಲ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದಲ್ಲಿ ನಡೆದಿರುವ ಈ ಒಪ್ಪಂದಕ್ಕೆ ಇಸ್ರೇಲ್ ಬದ್ಧವಾಗಿಲ್ಲ, ಯಾವುದೇ ಕಾರಣಕ್ಕೂ ಲೆಬನಾನ್ನಿಂದ ತನ್ನ ಸೇನೆ ವಾಪಸ್ ಹಿಂಪಡೆಯುವುದಿಲ್ಲ ಎಂದು ಇಸ್ರೇಲ್ನ ರಾಷ್ಟ್ರೀಯ
ರಾಜ್ಯದ 224 ಕ್ಷೇತ್ರ, ಬೆಂಗಳೂರಿನ 369 ವಾರ್ಡ್ಗಳಲ್ಲಿ ಕೆಂಪೇಗೌಡ ಜಯಂತಿ ಆಚರಣೆಗೆ ತಲಾ ಒಂದು ಲಕ್ಷ ರೂ.
224 ಕ್ಷೇತ್ರಗಳಲ್ಲಿ ಜಯಂತಿ ಆಚರಣೆಗೆ ತಲಾ ಒಂದು ಲಕ್ಷ ರೂ., ಬೆಂಗಳೂರಿನ 369 ವಾರ್ಡ್ಗಳಲ್ಲಿ ಕಾರ್ಯಕ್ರಮ ನಡೆಸಲು ತಲಾ ಒಂದು ಲಕ್ಷ ರೂ. ಅನುದಾನ ನೀಡಲಾಗುವುದು. ಬೆಂಗಳೂರು ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ ಆಚರಿಸಲಾಗುವುದು, ಬಿಡಿಎ ವತಿಯಿಂದ 15
ಬೆಂಗಳೂರಿನ ರಸ್ತೆ ಮಾಡೋದು ರಾಕೆಟ್ ಸೈನ್ಸಾ: ಎಂಜಿನಿಯರ್ಗಳಿಗೆ ಸಚಿವ ಕೃಷ್ಣ ಭೈರೇಗೌಡ ತರಾಟೆ
ಸಚಿವ ಕೃಷ್ಣ ಬೈರೇಗೌಡ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡಿದ್ದು, ಜಿಬಿಎ ಅಧಿಕಾರಿಗಳ ಸಭೆ ನಡೆಸಿ ಅಧಿಕಾರಿಗಳ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲ ಸಭೆಯಲ್ಲಿ ಮುಖ್ಯವಾಗಿ ಬೆಂಗಳೂರಿನ ರಸ್ತೆ ಗುಂಡಿ ಹಾಗೂ ಕಸದ ವಿಚಾರವನ್ನು ಪ್ರಸ್ತಾಪಿಸಿ ಅಧಿಕಾರಿಗಲ ಕ್ರಿಯಾಶೀಲತೆ ಬಗ್ಗೆ
ಬಿಡದಿ ಟೌನ್ಶಿಪ್ ಕೂಸು ಹುಟ್ಟಿದ್ದು ಕುಮಾರಸ್ವಾಮಿ ಅವಧಿಯಲ್ಲಿ, ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ: ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್
ಬಿಡದಿ ಟೌನ್ಶಿಪ್ ಯೋಜನೆ ಕೂಸು ಹುಟ್ಟಿದ್ದು ಕುಮಾರ ಸ್ವಾಮಿ ಆಡಳಿತದ ಅವಧಿಯಲ್ಲಿ, ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ. ಈ ಅವಧಿಯಲ್ಲಿ ಬೆಂಗಳೂರು ಹಾಗೂ ಟೌನ್ ಶಿಪ್ ಯೋಜನೆಗೆ ಉಸ್ತುವಾರಿ ಸಚಿವರಾಗಿದ್ದವರು ಆರ್ ಅಶೋಕ, 2006ರಿಂದ ಅವರು ಇದರ ಜವಾಬ್ದಾರಿಯ ಭಾಗವಾಗಿದ್ದರು, ಕಂದಾಯ ಸಚಿವರೂ
ವೈದ್ಯರು ಜನರ ನಂಬಿಕೆ ಉಳಿಸಿಕೊಳ್ಳಿ: ಸಿಎಂ ಡಿಕೆ ಶಿವಕುಮಾರ್
ವೈದ್ಯರು ಕಣ್ಣಿಗೆ ಕಾಣುವ ದೇವರು. ಜನ ಎಷ್ಟೇ ಕಷ್ಟ ಇದ್ದರೂ ಬಹಳ ನಂಬಿಕೆ ಹಾಗೂ ವಿಶ್ವಾಸದಿಂದ ವೈದ್ಯರ ಬಳಿ ಹೋಗುತ್ತಾರೆ. ನೀವು ಅವರ ನಂಬಿಕೆ ಉಳಿಸಿಕೊಂಡು ಸೇವೆ ಮಾಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ವೈದ್ಯ ಪದವೀಧರರಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ
ಬರಗಾಲ ಎದುರಿಸೋಕೆ, ರೈತರ ಕಷ್ಟ ಕೇಳೋಕೆ ರಾಜ್ಯದಲ್ಲಿ ಕೃಷಿ ಸಚಿವರೇ ಇಲ್ಲ: ಆರ್ ಅಶೋಕ
ಕಮಿಷನ್ ಮಾಸ್ಟರ್ (CM) @DKShivakumar ಅವರೇ, “ರಾಜ್ಯದಲ್ಲಿ ಬರಗಾಲ ಎದುರಿಸಲು ಸಜ್ಜಾಗಿ” ಎಂದು ಮಾಧ್ಯಮಗಳಿಗೆ ಪೋಸ್ ಕೊಟ್ಟರೆ ಏನೂ ಪ್ರಯೋಜನವಿಲ್ಲ. ಬರಗಾಲ ಎದುರಿಸೋಕೆ, ರೈತರ ಕಷ್ಟ ಕೇಳೋಕೆ ರಾಜ್ಯದಲ್ಲಿ ಕೃಷಿ ಸಚಿವರು ಎಲ್ಲಿದ್ದಾರೆ ಸ್ವಾಮಿ?, ನೀವೇ ಒಪ್ಪಿಕೊಂಡಿರುವಂತೆ ರಾಜ್ಯದಲ್ಲಿ ಇನ್ನು ಶೇ. 30
ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಖಾತರಿಗೆ ಸಿಎಂ ಸೂಚನೆ
ಬರ ಪರಿಸ್ಥಿತಿ ಎದುರಿಸಲು ತುರ್ತು ಕ್ರಮಗಳ ಪೂರ್ವಸಿದ್ಧತೆ , ರೈತರಿಗೆ ಅಗತ್ಯ ಮಾಹಿತಿ ಪೂರೈಕೆ, ಅತಿವೃಷ್ಟಿ, ಅನಾವೃಷ್ಟಿ ಎದುರಿಸಲು ಸರ್ವ ಸಿದ್ಧತೆ ಸೇರಿದಂತೆ ಎಲ್ಲ ಅಗತ್ಯ ನೆರವು ಒದಗಿಸಿ, ಕೃಷಿಗೆ ಅನುಕೂಲ ಕಲ್ಪಿಸುವಂತೆ ಸಿಎಂ ಡಿಕೆ ಶಿವಕುಮಾರ್ ಅಧಿಖಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ತ್ಯಾಗ, ಪ್ರಾಮಾಣಿಕತೆ, ಕರ್ತವ್ಯ ಪ್ರಜ್ಞೆಯೊಂದಿಗೆ ಪಕ್ಷದ ಕೆಲಸ ಮಾಡಿದ ಸೂರಜ್ ಹೆಗ್ಡೆ: ಸಿಎಂ ಡಿಕೆ ಶಿವಕುಮಾರ್ ಸ್ಮರಣೆ
ಪಕ್ಷ ನಿಷ್ಠೆ ಹಾಗೂ ತ್ಯಾಗ ಸೂರಜ್ ಅವರ ಸಾಧನೆ. ತಮ್ಮ ಸ್ನೇಹದ ಮೂಲಕ ಅವರು ನಮ್ಮೆಲ್ಲರ ಹೃದಯ ಗೆದ್ದವರು ಎಂದು ಸಿಎಂ ಡಿಕೆ ಶಿವಕುಮಾರ್ ಅವರು ದಿವಂಗತ ಸೂರಜ್ ಹೆಗ್ಡೆ ಅವರನ್ನು ಕೊಂಡಾಡಿದರು. ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ
ಬಿಡದಿ ಯೋಜನೆ ಅಧಿಸೂಚನೆ ಹೊರಡಿಸಿದ್ದು ಕುಮಾರಸ್ವಾಮಿ, ಬಿಜೆಪಿ ಸರ್ಕಾರವಿದ್ದಾಗ ಸಾವಿರ ಎಕರೆ ಸ್ವಾಧೀನ
“ನಾನು ಯಾರ್ಯಾರೋ ಮಾತಿಗೆ ಉತ್ತರ ನೀಡಲು ಆಗುವುದಿಲ್ಲ. ಮಹಾರಾಷ್ಟ್ರದಲ್ಲಿ 90 ಸಾವಿರ ಎಕರೆ, ತೆಲಂಗಾಣದಲ್ಲಿ 40 ಸಾವಿರ ಎಕರೆಯಲ್ಲಿ ಟೌನ್ ಶಿಪ್ ಮಾಡುತ್ತಿದ್ದಾರೆ. ಬಿಡದಿಯದು ನನ್ನ ಯೋಜನೆಯಲ್ಲ. ಕುಮಾರಸ್ವಾಮಿ ಅವರು ಈ ಯೋಜನೆಗೆ ಅಧಿಸೂಚನೆ ಹೊರಡಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರ ಈ




