ರಾಜಕೀಯ
ತಮಿಳುನಾಡಿಗೆ ಕಾವೇರಿ ನೀರು ಆದೇಶ: ಮೇಲ್ಮನವಿಗೆ ಸಿದ್ಧತೆಯೆಂದ ಸಿಎಂ ಡಿಕೆ ಶಿವಕುಮಾರ್
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಅಡ್ವೊಕೇಟ್ ಜನರಲ್, ಕಾನೂನು ತಜ್ಞರು ಹಾಗೂ ಅಧಿಕಾರಿಗಳ ಜೊತೆ ಸಭೆ ಮಾಡಲಾಗಿದ್ದು, ಮೇಲ್ಮನವಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ತಮಿಳುನಾಡಿಗೆ ನೀರು ಹರಿಸುವ ಬಗ್ಗೆ
ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ ಅಂಗೀಕಾರ
ಪ್ರತಿಪಕ್ಷಗಳ ಗದ್ದಲದ ಮಧ್ಯೆಯೇ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ಕೇಂದ್ರ ಸರ್ಕಾರವು ಹಿಂದಿನ ಅನುಭವದ ಆಧಾರದ ಮೇಲೆ ಪರೀಕ್ಷಾ ದುಷ್ಕೃತ್ಯದ ವಿರುದ್ಧ ಸುರಕ್ಷತೆಗಳನ್ನು ಬಲಪಡಿಸುವ ಇಚ್ಛೆಯನ್ನು ಈ ಶಾಸನವು ಪ್ರತಿಬಿಂಬಿಸುತ್ತದೆ ಎಂದು
ಅತ್ಯಾಚಾರಿಗಳ ಸಮರ್ಥಿಸಿದ್ದ ಪ್ರಹ್ಲಾದ ಜೋಷಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆ ತಗ್ಗಿಸುವ ವಿಚಾರ: ಮಾಜಿ ಸಿಎಂ ಸಿದ್ದರಾಮಯ್ಯ
ಕರ್ನಾಟಕದ ಸಂಸದರೊಬ್ಬರು ದೇಶದ ಶಿಕ್ಷಣ ಸಚಿವರಾದರೆಂದು ನಾವೆಲ್ಲರೂ ಹೆಮ್ಮೆ ಪಡಬೇಕಾಗಿತ್ತು, ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯ ಅತ್ಯಾಚಾರಿಗಳನ್ನು ಸಮರ್ಥಿಸಿದ್ದ ಸಂಸದ ಪ್ರಹ್ಲಾದ ಜೋಷಿ ಅವರನ್ನು ಶಿಕ್ಷಣ ಸಚಿವನನ್ನಾಗಿ ಮಾಡಿ ಕನ್ನಡಿಗರೆಲ್ಲರೂ ತಲೆತಗ್ಗಿಸುವ ಹಾಗೆ ಮಾಡಿದ್ದಾರೆ ಎಂದು ಮಾಜಿ ಸಿಎಂ
ಚಿತ್ರದುರ್ಗ ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ: ಆರ್ ಅಶೋಕ
ಚಿತ್ರದುರ್ಗ ಜಿಲ್ಲೆಯಲ್ಲಿ ರೈತರ ಹೊಲಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ, ಚಿತ್ರದುರ್ಗ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ ರೈತರಿಗೆ ಪರಿಹಾರ ವಿತರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಹಿರಿಯೂರು ತಾಲೂಕಿನ ಸೂರಗೊಂಡನಹಳ್ಳಿಯಲ್ಲಿ ಸೂರ್ಯಕಾಂತಿ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಪೋಸ್ಟ್: ಎಫ್ಐಆರ್
ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರು ನಡೆಸಿದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಪ್ರಮುಖ ನಾಯಕರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಲಾಗಿದ್ದ ದುರುದ್ದೇಶಪೂರಿತ ಹಾಗೂ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಆರೋಪದಡಿ
ಕಪ್ಪು ಸಮುದ್ರ ಬಂದರು ಬಳಿ ಡ್ರೋನ್, ಕ್ಷಿಪಣಿ ದಾಳಿ: ಸಾವಿನ ಭಯದಲ್ಲಿ 13 ಭಾರತೀಯ ಪ್ರಜೆಗಳು
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮುಂದುವರಿದಿದ್ದು, ಕಪ್ಪು ಸಮುದ್ರ ಬಂದರು ಸಮೀಪ ಡ್ರೋನ್ ಮತ್ತು ಕ್ಷಿಪಣಿ ದಾಳಿಯಾಗಿದೆ. ಚೋರ್ನೊಮೊರ್ಸ್ಕ್ ಬಂದರಿನಲ್ಲಿ ಸಿಲುಕಿರುವ ಹಡಗಿನಲ್ಲಿ 13 ಭಾರತೀಯ ನಾವಿಕರಿದ್ದಾರೆ. ಯಾವಾಗ ಬೇಕಾದರೂ ಹಡಗಿಗೆ ಕ್ಷಿಪಣಿ ಅಪ್ಪಳಿಸುವ ಆತಂಕ ಇದೆ ಎಂದು ಭಾರತೀಯ
ರಾಹುಲ್ ಗಾಂಧಿ ವಂಶ ಧ್ವಂಸ ಬೆದರಿಕೆ: ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹಾಗೂ ಕಾಂಗ್ರೆಸ್ ವಿರುದ್ಧ
ಇರಾನ್ ಬೆಂಬಲಿತ ಇರಾಕ್ ನೆಲೆಗಳ ಮೇಲೆ ಯುಎಸ್, ಸೌದಿ ವಾಯುದಾಳಿ
ಇರಾನ್ ಬೆಂಬಲಿತ ನಾಗರಿಕ ಅರೆಸೇನಾಪಡೆಗಳು ಬಳಸುತ್ತಿದ್ದ ಹಲವು ಇರಾಕ್ನ ಹಲವು ನೆಲೆಗಳ ಮೇಲೆ ಅಮೆರಿಕ ಮತ್ತು ಸೌದಿ ಅರೇಬಿಯಾ ಸೇನೆಗಳು ಭೀಕರ ವಾಯುದಾಳಿ ನಡೆಸಿರುವುದಾಗಿ ಅಮೆರಿಕದ ಸೆಂಟ್ರಲ್ ಕಮಾಂಡ್ ತಿಳಿಸಿದೆ. ಕೆಲವು ದಿನಗಳಿಂದ ಅಮೆರಿಕದ ಪಡೆಗಳು ಹಾಗೂ ಸೌದಿ ಅರೇಬಿಯಾದ ತೈಲ
ಕಾವೇರಿ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ: ಆರ್ ಅಶೋಕ
ಕೆಆರ್ಎಸ್ನಲ್ಲಿ ನೀರಿನ ಕೊರತೆ ಇದೆ ಎಂದು ತಿಳಿಸಿಕೊಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಆದ್ದರಿಂದಲೇ ಮರಣ ಶಾಸನದಂತಹ ಆದೇಶ ರಾಜ್ಯಕ್ಕೆ ಸಿಕ್ಕಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ
ಕರ್ನಾಟಕ ವಿಧಾನಮಂಡಲ ಅಧಿವೇಶನ ಆಗಸ್ಟ್ 13-27ರವರೆಗೆ
ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ ೧೩ರಿಂದ ೨೭ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಅಧಿಸೂಚನೆ ಪ್ರಕಟಿಸಿದೆ. ಆಗಸ್ಟ್ 13ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ಗಳ ಅಧಿವೇಶನ ಆರಂಭವಾಗಲಿದ್ದು,




