Menu

ಇಂದು ಕೇಂದ್ರ ಬಜೆಟ್‌ ಮಂಡನೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಬಜೆಟ್‌ ಮಂಡನೆಯಲ್ಲಿ 75 ವರ್ಷದ ಸಂಪ್ರದಾಯ ಮುರಿದು ಬಜೆಟ್ ಭಾಷಣದ ಎರಡನೇ ಭಾಗಕ್ಕೆ ಒತ್ತು ಕೊಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಬಜೆಟ್ ಪ್ರಸ್ತುತಪಡಿಸುವ ರೀತಿ ಕೂಡ ಬೇರೆಯಾಗಿರಲಿದೆ ಎಂದು ಮೂಲಗಳು ತಿಳಿಸಿವೆ. ಇದು ನಿರ್ಮಲಾ ಸೀತಾರಾಮನ್ ಅವರ ಸತತ ಒಂಬತ್ತನೇ ಬಜೆಟ್ ಆಗಿದ್ದು, ಇದು ದಾಖಲೆಯಾಗಿದೆ. ಬಜೆಟ್‌ ಭಾಷಣದ ಎರಡನೇ ಭಾಗದಲ್ಲಿ ತತ್​ಕ್ಷಣದ ಆರ್ಥಿಕ ಆದ್ಯತೆಗಳಿಗೆ ಪ್ರಾಮುಖ್ಯತೆ

ಟೀಕೆಗೂ ಮಿತಿಯಿದೆ, ವಿಪಕ್ಷಗಳಿಂದ ಕಾನೂನು ದುರುಪಯೋಗ: ಡಿಸಿಎಂ

“ವಿಪಕ್ಷಗಳು ನಮ್ಮನ್ನು, ನಾವು ವಿಪಕ್ಷಗಳನ್ನು ಟೀಕೆ ಮಾಡುವುದು ಸ್ವೀಕಾರರ್ಹ. ಆದರೆ ಎಲ್ಲದಕ್ಕೂ ಒಂದು ಮಿತಿ ಎಂಬುದು ಇರುತ್ತದೆ. ವಿಪಕ್ಷಗಳು ಈ ದೇಶದ ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್‌  ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಆಧಾರರಹಿತ ಪೋಸ್ಟ್‌

ಕರ್ನಾಟಕದಲ್ಲಿ 40% ಕಮಿಷನ್ ಸಂಸ್ಕೃತಿ ತಂದವರು ಬಿಜೆಪಿಯವರು: ಲಕ್ಷ್ಮಿ ಹೆಬ್ಬಾಳ್ಕರ್

“ದೇಶದ ಆಸ್ತಿಯನ್ನು ಅದಾನಿ–ಅಂಬಾನಿಗೆ ಬರೆದುಕೊಟ್ಟವರು, 23 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದವರು ಬಿಜೆಪಿಯವರು. ಕರ್ನಾಟಕದಲ್ಲಿ 40% ಕಮಿಷನ್ ಸಂಸ್ಕೃತಿ ತಂದವರು ಅವರೇ. ಹಲವಾರು ಪ್ರಕರಣಗಳಲ್ಲಿ ಬಿಜೆಪಿ ಮುಖ್ಯಮಂತ್ರಿ ಗಳು ಜೈಲಿಗೆ ಹೋಗಿ ಬಂದಿದ್ದಾರೆ. ಈ ಸ್ಥಿತಿಯಲ್ಲಿ ಕಾಂಗ್ರೆಸ್ ಬಗ್ಗೆ

ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಬಿಜಿಪಿ ಸಂಸದರು: ಡಿಕೆ ಶಿವಕುಮಾರ್‌ 

 ಕೇಂದ್ರ ಸರ್ಕಾರದಿಂದ ಬಜೆಟ್‌ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ವ್ಯಂಗ್ಯವಾಡಿದರು. ಶಿವಮೊಗ್ಗ

ಗುತ್ತಿಗೆದಾರರಿಗೆ ಬಿಲ್‌ ಬಾಕಿ ಹಿಂದಿನ ಬಿಜೆಪಿ ಸರ್ಕಾರದ್ದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಗುತ್ತಿಗೆದಾರರಿಗೆ ಬಾಕಿ ಬಿಲ್ಲುಗಳು  ಬಿಜೆಪಿ ಸರ್ಕಾರದ್ದು, ಹಿಂದಿನ ಬಿಜೆಪಿ ಸರ್ಕಾರದವರು ಬಾಕಿ ಬಿಲ್ಲುಗಳನ್ನು ಪಾವತಿಸದೇ ಬಿಟ್ಟುಹೋಗಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಗುತ್ತಿಗೆದಾರರ ಸಂಘವು ಬಿಲ್‌ ಬಾಕಿ ವಿಚಾರದಲ್ಲಿ ಹೇಳಿರುವ

ಸಾಗರ ಮಾರಿಕಾಂಬ ಜಾತ್ರೆ: ತಾಳಗುಪ್ಪದವರೆಗೆ ರೈಲು ವಿಸ್ತರಣೆಗೆ ಸಚಿವರ ಸಮ್ಮತಿ

ಸಾಗರದಲ್ಲಿ ಮಾರಿಕಾಂಬ ದೇವಿ ಜಾತ್ರೆ ಹಿನ್ನೆಲೆ ಭಕ್ತರ ಅನುಕೂಲಕ್ಕಾಗಿ ಯಶವಂತಪುರ – ಶಿವಮೊಗ್ಗ ನಡುವೆ ಸಂಚರಿಸುವ ರಾತ್ರಿ ರೈಲನ್ನು ತಾಳಗುಪ್ಪದವರೆಗೆ ವಿಸ್ತರಿಸಲು ರೈಲ್ವೆ ಇಲಾಖೆ ಒಪ್ಪಿಗೆ ಸೂಚಿಸಿದೆ. ಮಾರಿಕಾಂಬ ಜಾತ್ರೆಯು ಫೆಬ್ರವರಿ 3ರಿಂದ 11ರ ವರೆಗೆ ನಡೆಯಲಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆ

ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು: ಡಿಕೆ ಶಿವಕುಮಾರ್‌

ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಯಾವುದೇ ಧರ್ಮ ಬೇರೆಯವರಿಗೆ ತೊಂದರೆ ಮಾಡು ಎಂದು ಹೇಳುವುದಿಲ್ಲ. ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನ ಸಂಪದ, ಜ್ಞಾನ ಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತ. ಎಲ್ಲರಿಗೂ ಮಂಗಳವಾಗಲಿ, ಶುಭವಾಗಲಿ, ಆರೋಗ್ಯವಾಗಿರಲಿ ಎಂದು

ವಿಬಿ ಗ್ರಾಮ್ ಜಿ ಕಾಯ್ದೆ ಮೂಲಕ ಮಹಾತ್ಮ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ: ಡಿಸಿಎಂ ಡಿ.ಕೆ. ಶಿವಕುಮಾರ್

ಶಿವಮೊಗ್ಗ: ಕೇಂದ್ರ ಬಿಜೆಪಿ ಸರ್ಕಾರ ವಿಬಿ ಗ್ರಾಮ್ ಜಿ ನೂತನ ಕಾಯ್ದೆ ಮೂಲಕ ಮಹಾತ್ಮ ಗಾಂಧಿ ಹಾಗೂ ಕಾರ್ಮಿಕರ ಬದುಕನ್ನು ಸಾಯಿಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಶಿವಮೊಗ್ಗ ಸರ್ಕಿಟ್ ಹೌಸ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ

38 ಸಾವಿರ ಕೋಟಿ ರೂ. ಬಾಕಿ, ಮಾ.5ಕ್ಕೆ ಪ್ರತಿಭಟನೆ, ಸಭೆ ಕರೆಯದಿದ್ದರೆ ದಾಖಲೆ ಬಿಡುಗಡೆ: ಗುತ್ತಿಗೆದಾರರ ಸಂಘ ಸಿಎಂಗೆ ಎಚ್ಚರಿಕೆ

ಗುತ್ತಿಗೆದಾರರಿಗೆ ರಾಜ್ಯ ಸರ್ಕಾರವು 38 ಸಾವಿರ ಕೋಟಿ ರೂ. ಬಾಕಿ ಇದೆ. ಸರ್ಕಾರ ಸಮಸ್ಯೆ ಬಗೆಹರಿಸಿಲ್ಲವಾದ್ದರಿಂದ ಮಾ.5 ರಂದು ಬೃಹತ್ ಪ್ರತಿಭಟನೆ ಮಾಡುತ್ತಿರುವುದಾಗಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ತಿಳಿಸಿದ್ದಾರೆ. ಚಾಮರಾಜಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುತ್ತಿಗೆದಾರರಿಗೆ 38

ವಿಬಿಜಿ ರಾಮ್‌ಜಿ ಜಾಹೀರಾತಿನಲ್ಲಿ ಗಾಂಧೀಜಿಗೆ ಅಪಮಾನ, ಜನರ ತೆರಿಗೆ ಹಣ ದುರ್ಬಳಕೆ: ಸರ್ಕಾರದ ವಿರುದ್ಧ ಆರ್‌ ಅಶೋಕ ಕಿಡಿ

ವಿಬಿ ಜಿ ರಾಮ್‌ ಜಿ ಯೋಜನೆಗೆ ಸಂಬಂಧಿಸಿದಂತೆ ಮಹಾತ್ಮ ಗಾಂಧೀಜಿ ಹೇಳದೇ ಇರುವುದನ್ನು ಜಾಹೀರಾತಿನಲ್ಲಿ ಸೇರಿಸಿರುವ ಕಾಂಗ್ರೆಸ್‌ ಸರ್ಕಾರ, ಅವರ ಹೆಸರಿನಲ್ಲೇ ಪತ್ರಿಕೆಗಳಲ್ಲಿ ಪ್ರಕಟ ಮಾಡಿಸಿದೆ. ಇದಕ್ಕಾಗಿ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ