Thursday, November 27, 2025
Menu

ಸಿಎಂ ಬದಲಾವಣೆ ಚರ್ಚೆ ತೀವ್ರ: ನಿರ್ಮಲಾನಂದನಾಥ ಸ್ವಾಮಿ ದೆಹಲಿಗೆ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ತೀವ್ರ ಕಾವೇರಿದ್ದು, ಬಿರುಸಿನ ಮಾತು, ಚಟುವಟಿಕೆಗಳು ಗರಿಗೆದರಿವೆ, ಈ ಮಧ್ಯೆ ಚುಂಚನಗಿರಿ ಒಕ್ಕಲಿಗ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮಿ ದೆಹಲಿಗೆ ಪ್ರಯಾಣಿಸಿರುವುದು ಕುತೂಹಲ ಕೆರಳಿಸಿದೆ. ಬೆಂಗಳೂರಿನಿಂದ ಇಂಡಿಗೊ ವಿಮಾನದ ಮೂಲಕ ನಿರ್ಮಲಾನಂದನಾಥ ಸ್ವಾಮಿ ದೆಹಲಿಗೆ ಪ್ರಯಾಣಿಸುತ್ತಿದ್ದು, ಖಾಸಗಿ ಕಾರ್ಯಕ್ರಮಕ್ಕೆ ತೆರಳುತ್ತಿರುವುದಾಗಿ ಮಠದ ಮೂಲಗಳು ತಿಳಿಸಿವೆ. ನಿನ್ನೆಯಷ್ಟೆ ಡಿಕೆ ಶಿವಕುಮಾರ್‌ ಅವರಿಗೆ ಅಧಿಕಾರ ಬಿಟ್ಟುಕೊಡುವ ವಿಚಾರವಾಗಿ ಮಾತನಾಡಿದ್ದ ಸ್ವಾಮೀಜಿ ಇಂದು ದೆಹಲಿಗೆ ಪ್ರಯಾಣಿಸಿರುವುದು ಹಲವು ಪ್ರಶ್ನೆಗಳನ್ನು

ನಾವು ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಡಿಕೆ ಶಿವಕುಮಾರ್‌ ಮಾರ್ಮಿಕ ನುಡಿ

“ವರ್ಡ್ ಪವರ್ ಈಸ್ ವರ್ಲ್ಡ್ ಪವರ್ (ಮಾತಿನ ಶಕ್ತಿಯೇ ವಿಶ್ವದ ಶಕ್ತಿ). ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ. ನ್ಯಾಯಾಧೀಶರಾಗಲಿ, ರಾಷ್ಟ್ರಪತಿಗಳಾಗಲಿ, ನಾನಾಗಲೀ, ಯಾರೇ ಆಗಲಿ, ಕೊಟ್ಟ ಮಾತಿಗೆ ತಕ್ಕಂತೆ ನಡೆದು ಸಾಗಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ 

ಸತೀಶ್ ಜಾರಕಿಹೊಳಿ ಜತೆ 2028 ರಲ್ಲಿ  ಪಕ್ಷವನ್ನು ಅಧಿಕಾರಕ್ಕೆ ತರುವ ಕಾರ್ಯತಂತ್ರ ಚರ್ಚೆ: ಡಿಕೆ ಶಿವಕುಮಾರ್

“ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷವನ್ನು 2028 ಹಾಗೂ 2029 ರ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಅವರ ಜತೆ ಚರ್ಚೆ ನಡೆಸಲಾಯಿತು. ಮುಖ್ಯಮಂತ್ರಿ ಹುದ್ದೆ ಅಥವಾ ಉನ್ನತ ಅಧಿಕಾರ ಮುಖ್ಯವಲ್ಲ. ಪಕ್ಷದ ಎಲ್ಲರೊಡನೆ

ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸೇರಿದಂತೆ ಯಾವುದೇ ಬದಲಾವಣೆ ಕುರಿತು ಚರ್ಚೆ ನಡೆದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಜೊತೆಗಿನ ರಹಸ್ಯ ಸಭೆ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಕುರಿತು ಹಾಗೂ ಮುಂಬರುವ

ಅಧಿಕಾರ ಹಂಚಿಕೆ ಗೊಂದಲ ಬಗ್ಗೆ ಇನ್ನೆರಡು ದಿನದಲ್ಲಿ ಹೈಕಮಾಂಡ್ ಸಭೆ: ಪ್ರಿಯಾಂಕ್ ಖರ್ಗೆ

ಇನ್ನೆರಡು ದಿನದಲ್ಲಿ ಹೈಕಮಾಂಡ್ ಸಭೆ ನಡೆಯಲಿದ್ದು, ಆಗ ರಾಜ್ಯ ಸರ್ಕಾರದಲ್ಲಿನ ಅಧಿಕಾರ ಹಂಚಿಕೆ ಗೊಂದಲದ ಬಗ್ಗೆ ಅಂತಿಮ ನಿರ್ಧಾರ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ದೆಹಲಿಗೆ ಭೇಟಿ ನೀಡಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ತೆರಳುವ ಮುನ್ನ

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ

ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಇಂದು   ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಎಚ್ಚರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ –

ಸಿಎಂ ಕುರ್ಚಿ ಜಗಳದಲ್ಲಿ ರೈತರನ್ನು ಮರೆತ ಸರ್ಕಾರ: ಆರ್.ಅಶೋಕ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನದಾತ ರೈತರನ್ನು ಸಂಪೂರ್ಣವಾಗಿ ಮರೆತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೃದಯಹೀನ ಸರ್ಕಾರಕ್ಕೆ ಅನ್ನದಾತನ ಬದುಕಿಗಿಂತ ಅಧಿಕಾರವೇ ಮುಖ್ಯವಾಗಿದೆ. ಕರ್ನಾಟಕದ ಇತಿಹಾಸದಲ್ಲಿ

ವಿಧಾನಸಭೆ ಚುನಾವಣೆಯಲ್ಲಿ ಮದ್ದೂರಿನಿಂದ ನಾನು ಇಲ್ಲವೇ ಅಭಿಷೇಕ್‌ ಸ್ಪರ್ಧೆ ಖಚಿತ : ಸುಮಲತಾ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಅಥವಾ ನನ್ನ ಮಗ ಅಭಿಷೇಕ್‌ ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಂಸದೆ ಸುಮಲತಾ ಹೇಳಿದ್ದಾರೆ. ನನ್ನ ಸ್ಪರ್ಧೆ ಖಚಿತ, ಯಾವ ಕ್ಷೇತ್ರ ಎಮಬುದು ಬಿಜೆಪಿ ವರಿಷ್ಠರು ತೀರ್ಮಾನ, ಆದರೆ ಮದ್ದೂರು ಕ್ಷೇತ್ರ ನನ್ನ

ರಾಜ್ಯದಲ್ಲಿ ಇನ್ನೂ ಒಂದು ಲಕ್ಷ ಪಂಪ್‌ ಸೆಟ್‌ ಶೀಘ್ರವೇ ಸಕ್ರಮ: ಸಚಿವ ಕೆಜೆ ಜಾರ್ಜ್‌

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮ ಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ವಿಜಯನಗರದ ಜಿಲ್ಲಾಧಿಕಾರಿಗಳ ಕಚೇರಿ

ಗೊಂದಲಗಳಿಗೆ ಶೀಘ್ರ ತೆರೆ ಎಳೆಯಲು ಹೈಕಮಾಂಡ್ ಗೆ ಸಿಎಂ ಸಲಹೆ

ಬೆಂಗಳೂರು: ಅಧಿಕಾರ ಹಸ್ತಾಂತರ ಸೇರಿದಂತೆ ರಾಜ್ಯದಲ್ಲಿ ಉಂಟಾಗಿರುವ ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು, ರಾಹುಲ್