Menu

ಶಾಶ್ವತ ನಿವಾಸ ಪ್ರಮಾಣ ಪತ್ರ ಅಂದರೆ ಅದು ಪೌರತ್ವ ವಿಚಾರ: ಚರ್ಚೆಗೆ ಗ್ರಾಸವಾದ ಎಂಎಲ್ಸಿ ಛಲವಾದಿ ಹೇಳಿಕೆ

ಶಾಶ್ವತ ನಿವಾಸ ಪ್ರಮಾಣ ಪತ್ರ ಕೊಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದು, ಶಾಶ್ವತ ನಿವಾಸ ಪ್ರಮಾಣ ಪತ್ರ ಅಂದರೆ ಅದು ಪೌರತ್ವ ವಿಚಾರ. ಶಾಶ್ವತ ನಿವಾಸ ಪ್ರಮಾಣ ಪತ್ರ ಕೊಡಲು ರಾಜ್ಯ ಸರ್ಕಾರ ಯಾರು, ಪ್ರಮಾಣ ಪತ್ರ ಕೊಟ್ಟು ನಾವೇ ಕೇಂದ್ರ ಸರ್ಕಾರ ಅಂತ ಭಾವಿಸಸಬೇಕಿಲ್ಲ ಎಂದು ಹೇಳಿದ್ದಾರೆ. ಪೌರತ್ವ ರಾಷ್ಟ್ರಕ್ಕೆ ಸಂಬಂಧಿಸಿದ್ದು. ಭಾರತದ ಪೌರತ್ವವನ್ನು ಹೊಂದಿದ್ದರೆ ಭಾರತದ ಪಾಸ್‌ಪೋರ್ಟ್

ರೈತರ ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಸಿಎಂ ಶಿವಕುಮಾರ್: ಆರ್‌ ಅಶೋಕ

ರೈತರ ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಸಿಎಂ ಡಿಕೆ  ಶಿವಕುಮಾರ್ ಅವರೇ, ತಮಿಳುನಾಡಿಗೆ ಕಾವೇರಿ ನೀರು ಧಾರೆ ಎರೆಯುತ್ತಿರುವ ನಿಮ್ಮ ನಾಡದ್ರೋಹಿ @INCKarnataka ಸರ್ಕಾರಕ್ಕೆ ರೈತರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಕಿಡಿ ಕಾರಿದ್ದಾರೆ. ಕಾವೇರಿ ಜಲಾನಯನ

ಕುಡಿಯುವ ನೀರು: ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ.

ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ  ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್  ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಬೆಳಗಾವಿ ವಿಭಾಗದ ಪ್ರಗತಿ ಪರಿಶೀಲನಾ

ಅನ್ನ ಭಾಗ್ಯ ಅಕ್ಕಿಯನ್ನು ಅಯೋಧ್ಯೆಯ ಮಂತ್ರಾಕ್ಷತೆಯೆಂದು ಹಂಚಿದ ಬಿಜೆಪಿ: ಸಿಎಂ ಡಿಕೆ ಶಿವಕುಮಾರ್‌

ರಾಮ ನಮ್ಮ ಬಳಿ ಇಲ್ಲವೇ? ಎಲ್ಲಾ ಧರ್ಮದವರು ನಮ್ಮಲ್ಲಿದ್ದಾರೆ. ನಾವು ಎಲ್ಲಾ ಧರ್ಮದವರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದೇವೆ. ಬಿಜೆಪಿಯವರು ಮನೆ ಮನೆಗೆ ಮಂತ್ರಾಕ್ಷತೆ ಹಂಚಿದರು. ಈ ಅಕ್ಷತೆ ಅಯೋಧ್ಯೆಯ ರಾಮಮಂದಿರದಿಂದ ಬಂದಿದ್ದು ಎಂದು ಹೇಳಿದರು. ಅದರ ಬಗ್ಗೆ ಕೂಲಂಕುಶವಾಗಿ ವಿಚಾರಿಸಿದಾಗ. ನಾವು ಕೊಟ್ಟಂತಹ

ಜನರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸುವುದನ್ನು ಸಹಿಸಲ್ಲ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಸುಖಾ ಸುಮ್ಮನೆ ಜನರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸುವುದನ್ನು ನಾನು ಸಹಿಸುವುದಿಲ್ಲ. ನಿಮ್ಮ ಹಂತದಲ್ಲೇ ಕೆಲಸ ಸರಾಗವಾಗಿ ಆದರೆ ಸಣ್ಣ ಪುಟ್ಟ ಕೆಲಸಗಳಿಗೂ ಜನತೆ ಕಚೇರಿಗೆ ಅಲೆದಾಡುವುದು ತಪ್ಪುತ್ತದೆ.  ಜಿಲ್ಲಾ ಮಟ್ಟದ ಅಧಿಕಾರಿಗಳ ಬಳಿ  ಅಧೀನ ಅಧಿಕಾರಿಗಳ ಮಾಹಿತಿ ಅಂಗೈ ತುದಿಯಲ್ಲಿ ಇರಬೇಕು. ಯಾವ

ಅಮೆರಿಕದಿಂದ ಮತ್ತೊಮ್ಮೆ ದಾಳಿ: ಮಧ್ಯಪ್ರಾಚ್ಯ ಉದ್ವಿಗ್ನ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ತೀವ್ರಗೊಂಡಿದೆ. ಇರಾನ್‌ನ ಮೂರು ಪ್ರಮುಖ ಪ್ರದೇಶಗಳ ಮೇಲೆ ದಾಳಿ ನಡೆಸಿದ್ದ ಅಮೆರಿಕ, ಮತ್ತೊಮ್ಮೆ ವಾಯುದಾಳಿ ನಡೆಸಿರುವುದರಿಂದ ಪರಿಸ್ಥಿತಿ ಬಿಗಡಾಯಿಸಿದೆ. ಬುಶೆಹರ್‌ನಲ್ಲಿರುವ ಪರಮಾಣು ವಿದ್ಯುತ್ ಸ್ಥಾವರ ಪ್ರದೇಶ ಹಾಗೂ ಇರಾನ್‌ನ ಚಬಹಾರ್ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ದಾಳಿ ನಡೆಸಿದ

ಬರಗಾಲ, ಪ್ರವಾಹದಿಂದ ಸಂತ್ರಸ್ತರಾದ ರೈತರಿಗೆ ಸರ್ಕಾರ 50,000 ರೂ. ವರೆಗೆ ಸಾಲ ಮನ್ನಾ ಮಾಡಲಿ

ಬರಗಾಲ ಮತ್ತು ಪ್ರವಾಹದಿಂದ ಸಂತ್ರಸ್ತರಾಗಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಬೇಕೆಂದು ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್‌ ಅಶೋಕ, ತುರ್ತು ಪರಿಹಾರದ ಜೊತೆಗೆ ತಲಾ 50,000 ರೂ.ವರೆಗೆ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ

ಡಿಕೆ ಶಿವಕುಮಾರ್ ಕರ್ನಾಟಕದ ಇತಿಹಾಸದಲ್ಲೇ ಪುಕ್ಕಲು ಮತ್ತು ಅಸಮರ್ಥ ಸಿಎಂ: ಆರ್‌ ಅಶೋಕ

ಅಧಿಕಾರಕ್ಕೆ ಬಂದು ಒಂದು ತಿಂಗಳಾದರೂ ಪೂರ್ಣ ಪ್ರಮಾಣದ ಸರ್ಕಾರ ನಡೆಸಲಾಗದ ನೀವು ರಾಜ್ಯದ ಜನತೆಗೆ ದ್ರೋಹ ಬಗೆಯುತ್ತಿದ್ದೀರಿ. ಡಿಕೆ ಶಿವಕುಮಾರ್ ಅವರೇ, ನಿಮ್ಮ ರಾಜಕೀಯ ಗೊಂದಲ ಹಾಗೂ ಪುಕ್ಕಲುತನಕ್ಕೆ ರಾಜ್ಯದ ಅನ್ನದಾತರನ್ನ ಬಲಿಕೊಡುವುದನ್ನು ನಿಲ್ಲಿಸಿ. ನಿಮ್ಮಂತಹ ಪುಕ್ಕಲು ಮುಖ್ಯಮಂತ್ರಿ ಇದ್ದರೆಷ್ಟು, ಬಿಟ್ಟರೆಷ್ಟು

ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರಿನಾಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ಸೌಕರ್ಯಗಳನ್ನು ರಾಜ್ಯದ ಎರಡು ಹಾಗೂ ಮೂರನೇ ಹಂತದ ನಗರಗಳಿಗೂ ಒದಗಿಸಲು ಬದ್ಧರಾಗಿದ್ದೇವೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.  ಮಾನ್ಯತಾ ಟೆಕ್ ಪಾರ್ಕ್ ನಲ್ಲಿ  ನಡೆದ ಟಾರ್ಗೆಟ್ ಇಂಡಿಯಾ

ಬಹ್ರೇನ್- ಕುವೈತ್‌ಗಳಲ್ಲಿರುವ ಯುಎಸ್‌ ಸೇನಾ ನೆಲೆಗಳಿಗೆ ಇರಾನ್‌ ದಾಳಿ

ಅಮೆರಿಕವು ತನ್ನ ಮೇಲೆ ನಡೆಸಿದ ದಾಳಿಗೆ ಪ್ರತಿಯಾಗಿ ಇರಾನ್‌ ಬಹ್ರೇನ್ ಮತ್ತು ಕುವೈತ್‌ನಲ್ಲಿರುವ ಅಮೆರಿಕದ ಪ್ರಮುಖ ಮಿಲಿಟರಿ ನೆಲೆಗಳ ಮೇಲೆ 85 ಕ್ಕೂ ಹೆಚ್ಚು ಕ್ಷಿಪಣಿ ಮತ್ತು ಡ್ರೋನ್‌ಗಳ ಮೂಲಕ ದಾಳಿ ನಡೆಸಿದ್ದಾಗಿ ಇರಾನ್‌ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಹೇಳಿಕೊಂಡಿದೆ.