ರಾಜಕೀಯ
ಬೆಂಗಳೂರಿನಲ್ಲಿ ಹೂಡಿಕೆ ಮಾಡಿದವರು ಲಾಭ ಮಾಡಿದ್ದಾರೆ, ನಷ್ಟ ಅನುಭವಿಸಿಲ್ಲ: ಡಿಕೆ ಶಿವಕುಮಾರ್
“ಬೆಂಗಳೂರು ಎಲ್ಲಾ ಕ್ಷೇತ್ರದಲ್ಲಿ ದೇಶದ ಇತರೆ ನಗರಗಳಿಗಿಂತ ಮುಂಚೂಣಿಯಲ್ಲಿದೆ. ನಮ್ಮಲ್ಲಿ ಬಂದು ಹೂಡಿಕೆ ಮಾಡಿದ ಪ್ರತಿಯೊಬ್ಬರೂ ಲಾಭ ಪಡೆದಿದ್ದಾರೆ ಹೊರತು ನಷ್ಟ ಅನುಭವಿಸಿಲ್ಲ. ಈ ಕಾರಣಕ್ಕೆ ಬೆಂಗಳೂರಿಗೆ ಬಂದವರು ಮತ್ತೆ ವಾಪಸ್ ಹೋಗಲು ಬಯಸುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಬ್ರಿಡ್ಜ್ ಟು ಬೆಂಗಳೂರು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ನಾನು ಕಳೆದ 35 ವರ್ಷಗಳಿಂದ ಕರ್ನಾಟಕ ಸರ್ಕಾರದ ಭಾಗವಾಗಿದ್ದೇನೆ. 20 ವರ್ಷಗಳ ಹಿಂದೆ ಮಾಜಿ ಪ್ರಧಾನಿ ವಾಜಪೇಯಿ
ತಂತ್ರಜ್ಞಾನ ಜೊತೆ ವ್ಯಾಪಾರ, ನಾವೀನ್ಯತೆ, ಜನರ ಸಹಯೋಗ ಹಾಗೂ ವಿಶ್ವ ಪಾಲುದಾರಿಕೆಯತ್ತ ಕರ್ನಾಟಕ ಒಲವು: ಸಿಎಂ ಸಿದ್ದರಾಮಯ್ಯ
ತಂತ್ರಜ್ಞಾನದ ಜೊತೆಗೆ ವ್ಯಾಪಾರ, ನಾವೀನ್ಯತೆ, ಜನರ ಸಹಯೋಗ ಹಾಗೂ ವಿಶ್ವದೊಂದಿಗಿನ ಪಾಲುದಾರಿಕೆಯತ್ತ ಕರ್ನಾಟಕ ಆಸಕ್ತಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಬ್ರಿಡ್ಜ್ ಟು ಬೆಂಗಳೂರು ಕಾರ್ಯಕ್ರಮದಲ್ಲಿ ವಿವಿಧ ದೇಶಗಳ ರಾಯಭಾರಿಗಳು ಹಾಗೂ ರಾಜತಾಂತ್ರಿಕರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು
ವಿನಯ್ ಕುಲಕರ್ಣಿ ಕೇಸ್: ರಾಜಕೀಯದಿಂದಾಗುವ ಕೊಲೆ ಪ್ರಕರಣಗಳಿಗೆ ತಿಲಾಂಜಲಿ ನೀಡಿದ ತೀರ್ಪು ಎಂದ ಆರ್ ಅಶೋಕ
ಮಾಜಿ ಸಚಿವ ವಿನಯ್ ಕುಲಕರ್ಣಿ ಮಾಡಿಸಿದ ಕೊಲೆ ಪ್ರಕರಣದಲ್ಲಿ, ಇಬ್ಬರು ಸಾಕ್ಷಿ ಹೇಳಿದ್ದಾರೆ. ರಾಜಕಾರಣಿಗಳ ಮಾತು ಕೇಳಿಕೊಂಡು ಕೊಲೆ ಮಾಡಿದರೆ ಏನಾಗುತ್ತದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ. ಸಿಬಿಐ ತನಿಖೆ ನಡೆಯದೇ ಇದ್ದಿದ್ದರೆ ಪೊಲೀಸ್ ಇಲಾಖೆ ಕೇಸನ್ನು ಮುಚ್ಚಿಹಾಕುತ್ತಿತ್ತು. ಈಗ ಎಲ್ಲವೂ
ನನ್ನ ಮತ್ತು ಸಿದ್ದರಾಮಯ್ಯ ಗುಂಪು ಮಾಧ್ಯಮ ಸೃಷ್ಟಿ ಅಷ್ಟೇ, ಎಲ್ಲರೂ ನಮ್ಮ ಶಾಸಕರೇ: ಡಿಕೆ ಶಿವಕುಮಾರ್
“ಸಿದ್ದರಾಮಯ್ಯ ಮತ್ತು ನಾನು ಒಟ್ಟಿಗೇ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ಎಲ್ಲಿದೆ ನಮ್ಮಲ್ಲಿ ಗುಂಪು ಎಂಬುದು? ಎಲ್ಲರೂ ನಮ್ಮ ಶಾಸಕರೇ. ಮಾಧ್ಯಮಗಳೇ ನಮ್ಮನ್ನು ಇಬ್ಭಾಗ ಮಾಡುತ್ತಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸಿದ್ದರಾಮಯ್ಯ ಅವರೊಟ್ಟಿಗೆ ಒಂದೇ ವಿಮಾನದಲ್ಲಿ ಬಹಳ
ನೇಚರ್ ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ
ಕರ್ನಾಟಕ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ನೇಚರ್ ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಚಾರಣಿಗರ ಸುರಕ್ಷತೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ
ಅಂತಾರಾಷ್ಟ್ರೀಯ ಪ್ರಮಾಣಪತ್ರ ಪಡೆದ ದೇಶದ ಪ್ರಥಮ ಜಲಮಂಡಳಿ 𝗕𝗪𝗦𝗦𝗕
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೂರದೃಷ್ಟಿಯ ನಾಯಕತ್ವದಲ್ಲಿ, ಬೆಂಗಳೂರು ಜಲಮಂಡಳಿ (𝗕𝗮𝗻𝗴𝗮𝗹𝗼𝗿𝗲 𝗪𝗮𝘁𝗲𝗿 𝗦𝘂𝗽𝗽𝗹𝘆 & 𝗦𝗲𝘄𝗲𝗿𝗮𝗴𝗲 𝗕𝗼𝗮𝗿𝗱 – 𝗕𝗪𝗦𝗦𝗕) ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸುವ ಮೂಲಕ ತನ್ನ ಮುಕುಟಕ್ಕೆ ಹೊಸ ಗರಿಯೊಂದನ್ನು ಸೇರಿಸಿಕೊಂಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ 𝗜𝗦𝗢 𝟱𝟬𝟬𝟬𝟭:𝟮𝟬𝟭𝟴 ಪ್ರಮಾಣಪತ್ರವನ್ನು ಪಡೆದ
ಇಸ್ರೇಲ್- ಲೆಬನಾನ್ ಕದನ ವಿರಾಮ, ಯುರೇನಿಯಂ ಹಸ್ತಾಂತರಕ್ಕೆ ಇರಾನ್ ಸಮ್ಮತಿ: ಟ್ರಂಪ್
ಇರಾನ್ ತನ್ನಲ್ಲಿರುವ ಯುರೇನಿಯಂ ಹಸ್ತಾಂತರಿಸಲು ಒಪ್ಪಿಕೊಂಡಿದೆ, ಯುದ್ಧ ಕೊನೆಗೊಳ್ಳುವ ಸಮಯ ಹತ್ತಿರದಲ್ಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ವೈಟ್ಹೌಸ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಟ್ರಂಪ್, ಇರಾನ್ ನಮಗೆ ಯುರೇನಿಯಂ ಹಿಂತಿರುಗಿಸಲು ಒಪ್ಪಿಕೊಂಡಿದೆ ಎಂದಿದ್ದಾರೆ. ನಾವು ಒಪ್ಪಂದ ಮಾಡಿಕೊಳ್ಳಲು ಉತ್ತಮ ಅವಕಾಶವಿದೆ.
ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲು ಡಿಸಿಗಳಿಗೆ ಸಿಎಂ ಸೂಚನೆ
ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ
ಮಹಿಳಾ ಮೀಸಲು ಸೇರಿ ಲೋಕಸಭೆಯಲ್ಲಿ ಮೂರು ಮಹತ್ವದ ವಿಧೇಯಕ ಮಂಡನೆ
ಮಹಿಳಾ ಮೀಸಲಾತಿ, ಗಡಿ ನಿರ್ಣಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ವಿಧೇಯಕ 2026 ಲೋಕಸಭೆಯಲ್ಲಿ ಮಂಡನೆಯಾಗಿವೆ. ಜನಸಂಖ್ಯೆಗೆ ಅನುಗುಣವಾಗಿ ಲೋಕಸಭೆಯ ಬಲವನ್ನು ಪ್ರಸ್ತುತ ಇರುವ 543 ರಿಂದ 850 ಸ್ಥಾನಗಳಿಗೆ ಹೆಚ್ಚಿಸುವ ಪ್ರಸ್ತಾವನೆಯನ್ನು ವಿಧೇಯಕವು ಒಳಗೊಂಡಿದೆ. ರಾಜ್ಯ ವಿಧಾನಸಭೆಗಳ ಸ್ಥಾನಗಳನ್ನೂ
ಯಡಿಯೂರಪ್ಪ ಮಗನನ್ನು ಗೆಲ್ಲಿಸಿ ಎಂದು ಶಾಮನೂರು ವೇದಿಕೆಯಲ್ಲೇ ಹೇಳಿದಾಗ ಏನು ಕ್ರಮ ತಗೊಂಡ್ರಿ?
ಯಜಮಾನರು (ಶಾಮನೂರು ಶಿವಶಂಕರಪ್ಪ ) ಅವರು ವೇದಿಕೆಯಲ್ಲೇ ಯಡಿಯೂರಪ್ಪ ಅವರ ಮಗನನ್ನು ಗೆಲ್ಲಿಸಿ ಎಂದು ಮಾತನಾಡಿದಾಗ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನಗೆ ಇಲ್ಲಿಯವರೆಗೆ ಅಮಾನತು ಪತ್ರ ಬಂದಿಲ್ಲ. ನನಗೆ




