ರಾಜಕೀಯ
ಹಗರಣ ರಹಿತ ಹುದ್ದೆ ಭರ್ತಿಗೆ ಸರಕಾರ ಕ್ರಮ: ಡಿಕೆ ಶಿವಕುಮಾರ್
“ಕಾಂಗ್ರೆಸ್ ಸರ್ಕಾರ ಹಗರಣ ರಹಿತವಾಗಿ ಖಾಲಿ ಹುದ್ದೆಗಳನ್ನು ತುಂಬಬೇಕು ಎಂದು ಕೆಲಸ ಮಾಡುತ್ತಿದೆ. ಯುವಕರು ಧೈರ್ಯವಾಗಿರಿ. ನಾವು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ನಿಮಗೆ ಸಂದೇಶವನ್ನು ನೀಡುತ್ತೇವೆ. ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ, ಮಾಡುತ್ತೇವೆ, ಇದಕ್ಕೆ ಬದ್ಧವಾಗಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಭಯ ನೀಡಿದರು. ಬೆಂಗಳೂರು ನೆಹರೂ ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಧಾರವಾಡದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ
ಗಾಂಧಿ, ನೆಹರುಗೆ ಅವಹೇಳನ: ಶಾಸಕ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
ಗಾಂಧಿ, ನೆಹರು ಬಗ್ಗೆ ಅವಹೇಳನಕಾರಿಯಾಗಿ ದ್ವೇಷ ಭಾಷಣ ಮಾಡಿದ ಆರೋಪ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ.21ರಂದು ಯಾದಗಿರಿಯ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಯತ್ನಾಳ್,
ಅಪರೂಪದ ಕಾಯಿಲೆಗಳಿಂದ ಬಳಲುವವರು ಆತ್ಮವಿಶ್ವಾಸ ಕಳೆದುಕೊಳ್ಳದಿರಿ, ಹಣದ ಚಿಂತೆ ಬಿಡಿ: ಡಿಸಿಎಂ
“ಹಿಮೋಫಿಲಿಯಾ ಹಾಗೂ ಇತರ ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಜೊತೆ ಕಾಂಗ್ರೆಸ್ ಸರ್ಕಾರ ನಿಲ್ಲುತ್ತದೆ. ಹಣದ ಬಗ್ಗೆ ಚಿಂತೆ ಮಾಡಬೇಡಿ. ಆದರೆ ಯಾರೂ ಸಹ ತಮ್ಮ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಧೈರ್ಯ ತುಂಬಿದ್ದಾರೆ. ಆರೋಗ್ಯ ಮತ್ತು ಕುಟುಂಬ
ಕಾಂಗ್ರೆಸ್ ದುರಾಡಳಿತ ವಿರುದ್ಧ ಬೀದಿಗಿಳಿದ ಜನ: ಆರ್ ಅಶೋಕ ಕಿಡಿ
ಕಾಂಗ್ರೆಸ್ ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ. @INCKarnataka ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಅರಾಜಕ ಮುಖ್ಯಮಂತ್ರಿ @siddaramaiah ನವರೇ, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ? ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ
ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಹೈ ಕಮಾಂಡ್ಗೆ ಎಂಎಲ್ಸಿಗಳ ಮನವಿ
ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವಂತೆ ಆಗ್ರಹಿಸಿ 24 ಮಂದಿ ವಿಧಾನ ಪರಿಷತ್ ಸದಸ್ಯರು ಕಾಂಗ್ರೆಸ್ ಹೈಕಮಾಂಡ್ಗೆ ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಸಚಿವ ಸಂಪುಟ ಪುನಾರಚನೆ ಮತ್ತು ಮೊದಲ ಬಾರಿ ಶಾಸಕರಾಗಿರುವ ಕನಿಷ್ಠ ಐವರಿಗಾದರೂ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ 31 ಶಾಸಕರು
ಸಚಿವರು, ಶಾಸಕರನ್ನು ನಿಯಂತ್ರಿಸಬೇಕಿರುವುದು ಸಿಎಂ: ಡಿಕೆ ಶಿವಕುಮಾರ್
ಸಚಿವರುಗಳನ್ನು ನಿಯಂತ್ರಣ ಮಾಡಬೇಕಿರುವುದು ಮುಖ್ಯಮಂತ್ರಿಗಳು. ಶಾಸಕರನ್ನು ಅವರೇ ನಿಯಂತ್ರಿಸಬೇಕು. ಪಕ್ಷದ ವಿಚಾರವಾಗಿ ದೆಹಲಿಗೆ ಮಾಹಿತಿ ನೀಡುವ ವಿಚಾರ ನಾನು ಮಾಡುತ್ತಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕುಮಾರಪಾರ್ಕ್ ಸರಕಾರಿ ನಿವಾಸ ಹಾಗೂ ಸುತ್ತೂರು ಸದನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ
“ಗ್ಯಾರೆಂಟಿ ಹಠಾವೋ” ಆಂದೋಲನ ಶುರು?
Guarantee Hathao R Ashoka ಸಿಎಂ @siddaramaiah ನವರೇ, ಕಳೆದ ಮೂರು ವರ್ಷಗಳಲ್ಲಿ ವಿಪಕ್ಷಗಳು, ಮಾಧ್ಯಮದವರು ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಪ್ರಶ್ನೆ ಮಾಡಿದಾಗಲೆಲ್ಲಾ ತಿಪ್ಪೆ ಸರಿಸುವ ಮಾತಾಡಿ, ಸುಳ್ಳು ಹೇಳುತ್ತಲೇ ಬಂದಿದ್ದೀರಿ. ಈಗ ಮಾರ್ಚ್ 6ರಂದು ತಾವು ಮಂಡಿಸುವ ಬಜೆಟ್
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ತೀವ್ರ
ಉದ್ಯೋಗ ನೇಮಕಾತಿ ಪ್ರಕ್ರಿಯೆ ವೇಗಗೊಳಿಸಬೇಕು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧಾರವಾಡ ನಗರದಲ್ಲಿ ಆರಂಭಗೊಂಡಿರುವ ಉದ್ಯೋಗಾಕಾಂಕ್ಷಿಗಳ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಇಲ್ಲಿನ ಶ್ರೀನಗರ ಪ್ರದೇಶದಿಂದ ಆರಂಭವಾದ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಯುವಕರು ಜಮಾವಣೆಗೊಂಡು ಸರ್ಕಾರದ ವಿರುದ್ಧ
ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಸಂತೋಷ್ ಲಾಡ್ ಸೂಚನೆ
ಸರ್ಕಾರದಿಂದ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಲ್ಯಾಪ್ಸ್ ಆಗದಂತೆ ಬಳಸಬೇಕು. ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕು. ಸಾರ್ವಜನಿಕರಿಗೆ ಬೇಸಿಗೆ ದಿನಗಳಲ್ಲಿ ಯಾವುದೇ ರೀತಿ ಅನನುಕೂಲವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಧಾರವಾಡ
ಕಾಂಗ್ರೆಸ್ ಶಾಸಕನ ಕಾರಿನಲ್ಲಿ ಪ್ರೀತಂಗೌಡ: ರಾಜಕೀಯ ಸಂಚಲನ ಸೃಷ್ಟಿಸಿದ ವೀಡಿಯೊ
ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್ಗೌಡ ಮತ್ತು ಹಾಸನ ಮಾಜಿ ಶಾಸಕ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಒಂದೇ ಕಾರಲ್ಲಿ ಓಡಾಡುತ್ತಿರುವ ದೃಶ್ಯದ ವೀಡಿಯೊ ವೈರಲ್ ಆಗಿದ್ದು, ರಾಜಕೀಯ ಸಂಚಲನ ಸೃಷ್ಟಿಸಿದೆ. ಪ್ರೀತಂಗೌಡ ಕಾಂಗ್ರೆಸ್ ಸಖ್ಯ ಬೆಳೆಸಿದ್ದಾರೆಯೇ ಎಂಬ




