ರಾಜಕೀಯ
ರಾಮಮಂದಿರ ದೇಣಿಗೆ ಹಗರಣ ತನಿಖೆಗೆ ಸುಪ್ರೀಂ ಮೇಲ್ವಿಚಾರಣೆ ಅಗತ್ಯ: ಉಗ್ರಪ್ಪ
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನದ ದೇಣಿಗೆ ಹಣ ದುರ್ಬಳಕೆ ಆರೋಪದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆಗ್ರಹಿಸಿದರು. ಬಳ್ಳಾರಿ ನಗರದ ಅನಂತಪುರ ರಸ್ತೆಯ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಕ್ತರು ಭಕ್ತಿಭಾವದಿಂದ ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿರುವ ಆರೋಪ ಅತ್ಯಂತ ಗಂಭೀರವಾಗಿದ್ದು, ಪ್ರಕರಣದಲ್ಲಿ ಈಗಾಗಲೇ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.
ಕೆಂಪೇಗೌಡರ ಸಮಾಧಿ ಬಳಿ 10 ಎಕರೆ ಜಮೀನು ಸ್ವಾಧೀನ ಪ್ರಕ್ರಿಯೆ ಆರಂಭ: ಮುಖ್ಯಮಂತ್ರಿ
ಮಾಗಡಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡರ ಕೋಟೆ ಸಮಗ್ರ ಅಭಿವೃದ್ಧಿ ಕಾರ್ಯ ಹಮ್ಮಿಕೊಂಡಿದ್ದೇವೆ. ಮಾಗಡಿಯಲ್ಲಿರುವ ಕೆಂಪೇಗೌಡರ ಸಮಾಧಿ ಬಳಿ 10 ಎಕರೆ ಜಮೀನು ಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ಐದೂವರೆ ಎಕರೆ ಖರೀದಿ ಮಾಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್
ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರ ಅಭಿವೃದ್ಧಿಗೆ 1.25 ಲಕ್ಷ ಕೋಟಿ ಯೋಜನೆ: ಸಿಎಂ ಡಿಕೆ ಶಿವಕುಮಾರ್
ಇಡೀ ವಿಶ್ವ ಬೆಂಗಳೂರನ್ನು ನೋಡುತ್ತಿದೆ. ಇದಕ್ಕೆ ಕಾರಣ ನಾಡಪ್ರಭು ಕೆಂಪೇಗೌಡರು. ಈ ನಗರದ ಅಭಿವೃದ್ದಿಗೆ 1.25 ಲಕ್ಷ ಕೋಟಿ ಕಾರ್ಯಕ್ರಮ ರೂಪಿಸಿದ್ದೇನೆ. ಕೆಂಪೇಗೌಡರು ಕೇವಲ ಒಕ್ಕಲಿಗರ ಆಸ್ತಿಯಲ್ಲ. ಎಲ್ಲಾ ಜಾತಿ ಧರ್ಮದವರನ್ನು ಸೇರಿಸಿ ಈ ಕಾರ್ಯಕ್ರಮ ರೂಪಿಸಬೇಕು. ಆಗ ಮಾತ್ರ ಕೆಂಪೇಗೌಡರಿಗೆ
ರಾಜ್ಯದ ಆರೋಗ್ಯ ಇಲಾಖೆಯೇ ಐಸಿಯುನಲ್ಲಿ: ಆರ್ ಅಶೋಕ
ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ ಇಲಾಖೆಯನ್ನೇ ಐಸಿಯು ಅಲ್ಲಿ ಇರಿಸುವ ಪರಿಸ್ಥಿತಿ ತಂದಿರುವುದೇ ಕಾಂಗ್ರೆಸ್ ಸರ್ಕಾರದ ನಿಜವಾದ ಸಾಧನೆ. ಜೀವ ಉಳಿಸಬೇಕಾದ ಇಲಾಖೆಯಲ್ಲೇ ಬರೋಬ್ಬರಿ 35,196 ಹುದ್ದೆಗಳು ಖಾಲಿ ಇವೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ
ತುಮಕೂರು ಕ್ರೀಡಾ ನಗರಿಯಾಗಿ ಅಭಿವೃದ್ಧಿ: ಡಿಸಿಎಂ ಡಾ. ಜಿ ಪರಮೇಶ್ವರ
ಶೈಕ್ಷಣಿಕ ನಗರಿಯಾಗಿರುವ ತುಮಕೂರು ಜಿಲ್ಲೆಯನ್ನು ರಾಜ್ಯದ ಪ್ರಮುಖ ಕ್ರೀಡಾ ನಗರಿಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಕ್ರೀಡಾ ಮೂಲಸೌಕರ್ಯಗಳನ್ನು ನಿರ್ಮಿಸುತ್ತಿದ್ದು, ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ ಪರಮೇಶ್ವರ ಹೇಳಿದರು.
ಹರ್ಮುಜ್ನಲ್ಲಿ ಮತ್ತೆ ಭುಗಿಲೆದ್ದ ಅಮೆರಿಕ-ಇರಾನ್ ಸಂಘರ್ಷ
ದೀರ್ಘಕಾಲದ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ಇತ್ತೀಚೆಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದು, ಕೆಲವೇ ದಿನ ಕಳೆಯುವಷ್ಟರಲ್ಲಿ ಉಭಯ ದೇಶಗಳ ಮಧ್ಯೆ ಸಂಘರ್ಷ ಭುಗಿಲೆದ್ದಿದೆ. ಮಧ್ಯಪ್ರಾಚ್ಯದ ಹರ್ಮುಜ್ ಜಲಸಂಧಿಯಲ್ಲಿ ಪರಸ್ಪರ ಸೇನಾ ದಾಳಿಗಳು ಆರಂಭಗೊಂಡಿದ್ದು, ಜಾಗತಿಕ ಆತಂಕ ಸೃಷ್ಟಿಯಾಗಿದೆ.
ಬಂಡೀಪುರ, ನಾಗರಹೊಳೆ ಸಫಾರಿ ಪೂರ್ಣ ಪ್ರಮಾಣದಲ್ಲಿ ಆರಂಭ
ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ ಶಿಫಾರಸ್ಸಿನ ಅನ್ವಯ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿ (ಉದ್ಯಾನ ಪ್ರವಾಸ) ಪುನರಾರಂಭಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಈ ಬಗ್ಗೆ ತಾಂತ್ರಿಕ ಸಮಿತಿಯ ವರದಿಯನ್ನು ಅಂಗೀಕರಿಸಲಾಗಿದ್ದು,
ಸೂಕ್ತ ದಾಖಲೆಯಿಲ್ಲದೆ ಸರಕು ವಾಹನ ಚೆಕ್ಪೋಸ್ಟ್ ದಾಟುವಂತಿಲ್ಲ: ಅಧಿಕಾರಿಗಳಿಗೆ ಸಿಎಂ ಖಡಕ್ ವಾರ್ನ್
ಯಾವುದೇ ಸರಕು ಸಾಗಣೆ ವಾಹನವು ಅಗತ್ಯ ದಾಖಲೆಗಳಿಲ್ಲದೆ ಚೆಕ್ಪೋಸ್ಟ್ ಅಥವಾ ರಾಜ್ಯದ ಗಡಿಯನ್ನು ದಾಟಬಾರದು. ತೆರಿಗೆ ಸೋರಿಕೆಗೆ ಯಾವುದೇ ಅವಕಾಶ ಇರಬಾರದು. ಇದರಲ್ಲಿ ಯಾವುದೇ ರೀತಿಯ ರಾಜಿ ಅಥವಾ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ. ನಾನು ಎಲ್ಲವನ್ನೂ ಗಮನಿಸುತ್ತಿದ್ದೇನೆ. ರಾಜ್ಯದ ಎಲ್ಲ ವಲಯಗಳಿಂದಲೂ ನನಗೆ
ಅಡ್ಡ ಮತದಾನದ ಹಿಂದೆ ನಾನಿಲ್ಲ, ಡಿಕೆ ಶಿವಕುಮಾರ್ ಜತೆ ವ್ಯಾವಹಾರಿಕ ಸಂಬಂಧ ಇಲ್ಲ: ವಿಜಯೇಂದ್ರ
ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದಿಂದ ರಾಜ್ಯದ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿರುವುದು ಸಹಜ. ಆದರೆ ಅದರ ಹಿಂದೆ ತಾನು ಇಲ್ಲ ಹಾಗೂ ಪಕ್ಷಕ್ಕೆ ದ್ರೋಹ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಡಿಕೆ ಶಿವಕುಮಾರ್ ಜತೆ ನನಗೆ ಯಾವುದೇ ವ್ಯಾವಹಾರಿಕ ಅಥವಾ
ತುಂಗಭದ್ರಾ ಸ್ಪಿಲ್ ವೇ ಗೇಟ್ ಅಳವಡಿಕೆ: ಡಿಕೆ ಶಿವಕುಮಾರ್ ಇಚ್ಛಾಶಕ್ತಿಯ ನಿದರ್ಶನ
ತುಂಗಭದ್ರಾ ಅಂತಾರಾಜ್ಯ ಯೋಜನೆಯಾಗಿದ್ದು, ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲ್ಲಾಪುರ ಗ್ರಾಮದ ಹತ್ತಿರ ತುಂಗಭದ್ರಾ ಆಣೆಕಟ್ಟನ್ನು ನಿರ್ಮಿಸಲಾಗಿದೆ. ಈ ಯೋಜನೆಯನ್ನು 1945 ರಲ್ಲಿ ಪ್ರಾರಂಭಿಸಿ 1953 ರಲ್ಲಿ ಕಾಲುವೆಗೆ ನೀರು ಹರಿಬಿಡಲಾಗಿದೆ. ಅಣೆಕಟ್ಟಿನ ಸ್ಪಿಲ್ ವೇ ಗೇಟುಗಳನ್ನು 1955 ರಲ್ಲಿ ಅಳವಡಿಸಲಾಗಿದ್ದು,




