ರಾಜಕೀಯ
ಮೊದಲು ಲೆಬನಾನ್ನಲ್ಲಿ ಕದನ ವಿರಾಮ ಘೋಷಿಸಿ, ಮತ್ತೆ ಶಾಂತಿ ಮಾತುಕತೆ: ಅಮೆರಿಕಕ್ಕೆ ಸೆಡ್ಡು ಹೊಡೆದ ಇರಾನ್
ಇರಾನ್- ಅಮೆರಿಕ ಕದನ ವಿರಾಮದ ಮಧ್ಯೆಯೇ ಇಸ್ರೇಲ್ ಲೆಬನಾನ್ ಮೇಲೆ ತೀವ್ರ ದಾಳಿಗಳನ್ನು ನಡೆಸಿ 300 ಕ್ಕೂ ಹೆಚ್ಚು ಜನ ಮೃತಪಟ್ಟಿರುವುರಿಂದ ಕೆರಳಿರುವ ಇರಾನ್, ಲೆಬನಾನ್ನಲ್ಲಿ ಕದನ ವಿರಾಮ ಆಗುವವರೆಗೆ ಇಸ್ಲಾಮಾಬಾದ್ನಲ್ಲಿ ಅಮೆರಿಕದೊಂದಿಗೆ ಶಾಂತಿ ಮಾತುಕತೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅಧಿಕೃತವಾಗಿ ಪಾಕಿಸ್ತಾನಕ್ಕೆ ತಿಳಿಸಿದೆ. ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಅ ಲೆಬನಾನ್ನಲ್ಲಿ ಬಾಂಬ್ ದಾಳಿ ಮುಂದುವರಿದರೆ ಶಾಂತಿ ಒಪ್ಪಂದ ನಡೆಸಲು ಯಾವುದೇ ಯೋಜನೆ ಹೊಂದಿಲ್ಲ ಎಂದು ಇರಾನ್ ಹೇಳಿದೆ. ಇರಾನ್, ಅಮೆರಿಕ ಮತ್ತು
ಬಂಗಾಳದಲ್ಲಿ ಮಹಿಳೆಯರಿಗೆ, ನಿರುದ್ಯೋಗಿ ಯುವಕರಿಗೆ ತಿಂಗಳಿಗೆ 3 ಸಾವಿರ ರೂ.: ಬಿಜೆಪಿ ಘೋಷಣೆ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರತಿ ತಿಂಗಳು ಮಹಿಳೆಯರಿಗೆ 3 ಸಾವಿರ ರೂ., ನಿರುದ್ಯೋಗಿ ಯುವಕರಿಗೆ ತಿಂಗಳಿಗೆ 3 ಸಾವಿರ ರೂ. ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆ
ಆಳುವ ಸರ್ಕಾರಕ್ಕೆ ಅವಕಾಶ ವಂಚಿತರ ಪರ ಕಾಳಜಿಯಿರಬೇಕು: ಪ್ರಿಯಾಂಕ್ ಖರ್ಗೆ
ಆಳುವ ಸರ್ಕಾರಕ್ಕೆ ಸಾಮಾಜಿಕ ಬದ್ದತೆ ಇರಬೇಕು. ಅವಕಾಶವಂಚಿತರಿಗ ಬಗ್ಗೆ ಕಾಳಜಿ ತೋರಿಸಿ. ಅವರನ್ನು ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು ಅದಕ್ಕೆ ಆಳುವವರಿಗೆ ಶ್ರೀಮಂತ ಹೃದಯವಿರಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.
ಅನುಮತಿಯಿಲ್ಲದೆ ಹರ್ಮುಜ್ ಜಲಸಂಧಿಗೆ ಬರುವ ಹಡಗು ಹೊಡೆದುರುಳಿಸುತ್ತೇವೆ: ಇರಾನ್
ಅಮೆರಿಕ-ಇಸ್ರೇಲ್ ಮತ್ತು ಇರಾನ್ ಯುದ್ಧಕ್ಕೆ ಕದನ ವಿರಾಮ ಘೋಷಣೆಯಾದ ಬಳಿಕ ಲೆಬೆನಾನ್ ಮೇಲೆ ಇಸ್ರೇಲ್ ಸೇನೆ 100ಕ್ಕೂ ಕ್ಷಿಪಣಿ ದಾಳಿ ನಡೆಸಿದ್ದು, ಕನಿಷ್ಟ 250 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ಮಧ್ಯೆ ಇರಾನ್ ನೌಕಾಪಡೆಯು ಹರ್ಮುಜ್ ಜಲಸಂಧಿಯ ಬಳಿಯ
ಕದನ ವಿರಾಮ ಮುರಿಯುವವರೆಗೆ ಮಾತ್ರ ಇರಾನ್ ಸುರಕ್ಷಿತ: ಟ್ರಂಪ್ ವಾರ್ನ್
ಕದನ ವಿರಾಮ ಮುರಿಯುವ ತನಕ ಮಾತ್ರ ಇರಾನ್ನ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಸುರಕ್ಷಿತವಾಗಿ ಇರಲಿವೆ. ಒಪ್ಪಂದ ಮುರಿದ ಕ್ಷಣದಿಂದಲೇ ದೊಡ್ಡ ದಾಳಿ ನಡೆಯಲಿದೆ. ಆ ದಾಳಿ ಹಿಂದೆಂದಿಗಿಂತಲೂ ಭೀಕರವಾಗಿ ಇರುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಚಾರಣಿಗರಿಗೆ ಟ್ರ್ಯಾಕಿಂಗ್ ಆ್ಯಪ್, ವಿಮೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಚಾರಣಿಗರ ಸುರಕ್ಷತೆ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿ, ಚಾರಣಿಗರ ಮೊಬೈಲ್ನಲ್ಲಿ ಕಡ್ಡಾಯವಾಗಿ ಟ್ರ್ಯಾಕಿಂಗ್ ಆ್ಯಪ್ ಅಳವಡಿಕೆ
ಬಾಗಲಕೋಟೆಯಲ್ಲಿ ಕಾಂಗ್ರೆಸ್ನಿಂದ ರಾತ್ರಿ ಕೋಟ್ಯಾಂತರ ರೂ. ಹಂಚಿಕೆ: ಚರಂತಿಮಠ ಆರೋಪ
ಬಾಗಲಕೋಟೆ ಉಪಚುನಾವಣೆಗೆ ಮತದಾನ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ನವರು ನಿನ್ನೆ ರಾತ್ರಿ ಲಕ್ಷಾಂತರ, ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಗೋಕಾಕ್, ಅರಬಾವಿ ಮತ್ತು ಬೆಳಗಾವಿ ಜಿಲ್ಲೆಗಳಿಂದ
ಯೋಗೇಶ್ ಗೌಡ ಕೊಲೆ ಕೇಸ್: ಏಪ್ರಿಲ್ 15ಕ್ಕೆ ತೀರ್ಪು ಪ್ರಕಟ
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸುವುದನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 15ಕ್ಕೆ ಮುಂದೂಡಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಗುರುವಾರ ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ
ಕದನ ವಿರಾಮ ಮಧ್ಯೆ ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಮತ್ತೆ ಹರ್ಮುಜ್ ಮುಚ್ಚಿದ ಇರಾನ್
ಅಮೆರಿಕ- ಇರಾನ್ ಕದನ ವಿರಾಮದ ಮಧ್ಯೆಯೇ ಇಸ್ರೇಲ್ ಲೆಬನಾನ್ ಮೇಲೆ ದಾಳಿಗಳನ್ನು ನಡೆಸಿದ್ದು 100 ಜನರು ಮೃತಪಟ್ಟಿದ್ದು, 700ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯನ್ನು ಖಂಡಿಸಿರುವ ಇರಾನ್ ಹರ್ಮುಜ್ ಜಲಸಂಧಿಯನ್ನು ಮುಚ್ಚಿದೆ. ಲೆಬನಾನ್ ಮೇಲಿನ ದಾಳಿ ಮೂಲಕ ಇಸ್ರೇಲ್ ಕದನವಿರಾಮ
ಕೇಂದ್ರಕ್ಕೆ ಆದಾಯ ತೆರಿಗೆ ಕಟ್ಟುವ ಬದಲು ರೈತರಿಗೆ ಪ್ರೋತ್ಸಾಹಧನ ಹಂಚಿಕೆ: ಡಿಕೆ ಸುರೇಶ್
“ಕೇಂದ್ರ ಸರ್ಕಾರಕ್ಕೆ ಆದಾಯ ತೆರಿಗೆ ಕಟ್ಟುವ ಬದಲು ಅದನ್ನು ರೈತರಿಗೆ ಹಂಚಲಾಗುತ್ತಿದೆ. ಅಧಿಕಾರಿಗಳು ಆದಾಯ ತೆರಿಗೆ ಕಟ್ಟಬೇಕು ಎಂದರು. ನಾನು ಲಾಭ ತೋರಿಸಿದರೆ ಮಾತ್ರ ಅಲ್ಲವೇ ತೆರಿಗೆ ಕಟ್ಟಬೇಕು. ನಮ್ಮ ರೈತರ ಹಣ ರೈತರಿಗೆ ಮರಳಿ ಹೋಗಬೇಕು ಎಂದು 60 ಕೋಟಿ




