Menu

ಜಿರಳೆ ಪಾರ್ಟಿ ಜೊತೆ ರಾಹುಲ್‌ ಗಾಂಧಿ ಮ್ಯಾಚ್‌ ಫಿಕ್ಸಿಂಗ್‌: ಆರ್‌ ಅಶೋಕ

ನೀಟ್‌ ಅಕ್ರಮದ ಕುರಿತು ಲೋಕಸಭೆಯಲ್ಲಿ ಮಾತಾಡಬೇಕಾದ ರಾಹುಲ್‌ ಗಾಂಧಿ ಪಲಾಯನ ಮಾಡಿ ಕಾಕ್ರೋಚ್‌ ಜನತಾ ಪಾರ್ಟಿಯ ಜೊತೆ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡಿದ್ದಾರೆ. ಆ ಪಾರ್ಟಿಯವರು ಸಂಧಾನಕ್ಕೆ ಬರುತ್ತಿಲ್ಲ, ರಾಹುಲ್‌ ಗಾಂಧಿ ಅಧಿವೇಶನಕ್ಕೆ ಬರುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾಯಿತ ಪ್ರತಿನಿಧಿಗಳು ಸಂಸತ್ತಿನಲ್ಲಿ ಮಾತಾಡಿ ಜನರಿಗೆ ನಿಜವಾದ ವಿಚಾರವನ್ನು ತಿಳಿಸಿಕೊಡಬೇಕು. ಆದರೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಲೋಕಸಭೆಯಲ್ಲಿ ಮಾತಾಡುವುದು ಬಿಟ್ಟು ಪಲಾಯನ

ಸಂಸತ್ತಿನಲ್ಲಿ ಮುಂದುವರಿದ ನೀಟ್‌: ಉಭಯ ಸದನ ಕಲಾಪ ಮುಂದೂಡಿಕೆ

ನೀಟ್‌ ಅಕ್ರಮಗಳ ತನಿಖೆ ಮತ್ತು ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್‌ ಜನತಾ ಪಾರ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಡೆಸಿದ ಸಂಸದ್‌ ಚಲೊ ವೇಳೆ ಪೊಲೀಸರು ನಡೆಸಿದ ಕೌರ್ಯದ ಬಗ್ಗೆ ಸಂಸತ್ತಿನಲ್ಲಿ ಪ್ರತಿಪಕ್ಷಗಳು ಗುರುವಾರ ಚರ್ಚೆಗೆ ಪಟ್ಟು ಹಿಡಿದಿವೆ. ಚರ್ಚೆ ಕೈಗೆತ್ತಿಕೊಳ್ಳುವ

ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು: ಸಿಎಂ ಡಿಕೆ ಶಿವಕುಮಾರ್ 

ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು ಎಂದು ಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದರು. ಬೆಂಗಳೂರಿನ ಕೆ ಜಿ

ವ್ಯವಸ್ಥೆ ಮೇಲೆ ನಂಬಿಕೆ ಕಳೆದುಕೊಂಡ ವಿದ್ಯಾರ್ಥಿಗಳು ಫಾಸ್ಟ್ ಟ್ರ್ಯಾಕ್ ಕೋರ್ಟ್ ಒಪ್ಪಿಕೊಳ್ಳುತ್ತಾರ: ಪ್ರಿಯಾಂಕ ಗಾಂಧಿ

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಮತ್ತು ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿರುವ ಮಧ್ಯೆಯೇ  ಪ್ರಧಾನಿ ಮೋದಿ  ಈ ಅಕ್ರಮಗಳ ವಿಚಾರಣೆಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸುವುದಾಗಿ ಹೇಳಿದ್ದಾರೆ.  ವಿದ್ಯಾರ್ಥಿಗಳು ಮತ್ತು ಯುವಜನತೆ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಸಂಪೂರ್ಣವಾಗಿ

ವಿದ್ಯಾರ್ಥಿಗಳ ಪ್ರತಿರೋಧ ವಿಪಕ್ಷಗಳ ಅಜೆಂಡಾವೆಂದು ತಳ್ಳಿಹಾಕುವುದು ಸರಿಯಲ್ಲ, ಸಚಿವರು ರಾಜೀನಾಮೆ ನೀಡಲಿ: ಅಣ್ಣಾ ಹಜಾರೆ  

ಜನರ ಧ್ವನಿಯನ್ನು ಕೇವಲ ವಿರೋಧ ಪಕ್ಷಗಳ ರಾಜಕೀಯ ಅಜೆಂಡಾ ಎಂದು ತಳ್ಳಿಹಾಕುವುದು ಸರಿಯಲ್ಲ.  ನೀಟ್ ಪರೀಕ್ಷಾ ಹಗರಣಗಳು ಮತ್ತು ಸತತ ಪೇಪರ್ ಲೀಕ್ ಪ್ರಕರಣಗಳಲ್ಲಿ ಕೇವಲ ಕೆಳಹಂತದ ನೌಕರರನ್ನು ಬಲಿಪಶು ಮಾಡುವುದನ್ನು ಹಿರಿಯ ಸಮಾಜ ಸೇವಕ ಅಣ್ಣಾ ಹಜಾರೆ  ಖಂಡಿಸಿದ್ದಾರೆ. ಸರ್ಕಾರದ

ಐದು ವರ್ಷಗಳಲ್ಲಿ ಮೂರು ಬಾರಿ ನೀಟ್‌ ಪ್ರಶ್ನೆಪತ್ರಿಕೆ ಲೀಕ್‌: ಕೇಂದ್ರದ ವಿರುದ್ಧ ಕೆ. ಅಣ್ಣಾಮಲೈ ವಾಗ್ದಾಳಿ

ಕಳೆದ ಐದು ವರ್ಷಗಳಲ್ಲಿ ಮೂರು ಬಾರಿ ಯುಜಿ-ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಆದರೆ ಈವರೆಗೂ ಯಾರೂ ಯಾವುದೇ ಹೊಣೆಗಾರಿಕೆ ವಹಿಸಿಕೊಂಡಿಲ್ಲ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಹೊತೆ ಸರ್ಕಾರ ಏಕೆ ಮಾತುಕತೆ ನಡೆಸುತ್ತಿಲ್ಲ ಎಂದು ಮಾಜಿ ಐಪಿಎಸ್‌, ತಮಿಳುನಾಡು ಬಿಜೆಪಿಯ ಮಾಜಿ ಮುಖಂಡ

ಅಮೆರಿಕದ ಬೆದರಿಕೆ: ಪ್ರಬಲ ಪ್ರತೀಕಾರದ ಎಚ್ಚರಿಕೆಯಿತ್ತ ಇರಾನ್‌

ಇರಾನ್‌ ಅನ್ನು ಸರ್ವ ನಾಶ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬೆದರಿಕೆಗೆ ಇರಾನ್‌ ಖಡಕ್‌ ಆಗಿ ಪ್ರತಿಕ್ರಿಯಿಸಿದ್ದು, ತನ್ನ ಮೂಲಸೌಕರ್ಯಗಳ ಮೇಲೆ ಅಮೆರಿಕ ದಾಳಿ ನಡೆಸಿದರೆ ಅದೇ ರೀತಿಯ ಪ್ರಬಲ ಪ್ರತಿದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಹರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ

ನೀಟ್‌ ಅಕ್ರಮ ವಿಚಾರಣೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್: ಪ್ರಧಾನಿ ಮೋದಿ ಎಕ್ಸ್‌ ಪೋಸ್ಟ್‌

ನೀಟ್‌ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಅಪರಾಧಿಗಳ ತ್ವರಿತ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಲು ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶಾದ್ಯಂತ ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ವಿರೋಧಿಸಿ ಮತ್ತು ಸಚಿವ ಧರ್ಮೇಂದ್ರ ಪ್ರಧಾನ್‌

ವಿದ್ಯಾರ್ಥಿ ಪ್ರತಿಭಟನೆ ಹತ್ತಿಕ್ಕಲು ಬಿಜೆಪಿ ಗೂಂಡಾಗಳಿಂದ ಕಲ್ಲು ತೂರಾಟ: ಸಿಜೆಪಿ ಲೀಡರ್‌ ದೀಪ್ಕೆ

ನೀಟ್‌ ಅಕ್ರಮವನ್ನು ವಿರೋಧಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿಗಳು ನಡೆಸುತ್ತಿರುವ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಬಿಜೆಪಿ ಗೂಂಡಾಗಳನ್ನು ಬಿಟ್ಟು ಕಲ್ಲು ತೂರಾಟ ನಡೆಸುತ್ತಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಆರೋಪಿಸಿದ್ದಾರೆ. ಜಂತರ್‌ ಮಂತರ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಲ್ಲು

ಸಿಜೆಪಿ ದೇಶದ್ರೋಹಿ ಸಂಘಟನೆ, ದೀಪ್ಕೆಗೆ ಪಾಕ್‌, ಬಾಂಗ್ಲಾ ಸಂಬಂಧವಿದೆ: ಆರ್‌ ಅಶೋಕ

ಕಾಕ್ರೋಚ್‌ ಜನತಾ ಪಾರ್ಟಿ ದೇಶದ್ರೋಹಿ ಸಂಘಟನೆ, ಅದರ ಮುಖ್ಯಸ್ಥ ಅಭಿಜಿತ್‌ ದೀಪ್ಕೆ ಪಾಕಿಸ್ತಾನ, ಬಾಂಗ್ಲಾದೇಶದ ಜೊತೆಗೆ ಸಂಪರ್ಕ ಇಟ್ಟುಕೊಂಡಿದ್ದಾನೆ. ಅದರ ಜೊತೆಗೆ ಈಗ ರಾಹುಲ್‌ ಗಾಂಧಿ ಹೋಗಿದ್ದಾರೆ ಎಂದು ಪ್ರತಿಪಕ್ಷ ನಾಯಕ  ಆರ್‌ ಅಶೋಕ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಟಿಯಲ್ಲಿ