Menu

ರಾಜೀನಾಮೆಗೂ ಮೊದಲು ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಮಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದಕ್ಕೆ ಮೊದಲೇ ಅವರ ಆಪ್ತ ಅಧಿಕಾರಿಗಳ ವರ್ಗಾವಣೆ ನಡೆದಿದೆ. ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ , ಸಿಎಂ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಸಿಎಂ ಜಂಟಿ ಕಾರ್ಯದರ್ಶಿ ಟಿ.ಎನ್.ಕೃಷ್ಣಮೂರ್ತಿ ಹಾಗೂ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿಯಾಗಿದ್ದ ಕೆಎಎಸ್ ಅಧಿಕಾರಿ ಡಾ.ವೆಂಕಟೇಶಯ್ಯ ಅವರನ್ನು ವರ್ಗಾವಣೆ ಕೃಷಿ ಮಾರಾಟ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ರಾಜೀನಾಮೆ ನೀಡಿದ್ದೇನೆ, ರಾಜ್ಯಕ್ಕೆ ಶೀಘ್ರ ಹೊಸ ಸಿಎಂ ಬರಲಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿದಾಯದ ಮಾತುಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು,  ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವೆ, ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ ಎಂದು ಹೇಳಿದ ಬಳಿಕ  ಪತ್ರಿಕಾಗೋಷ್ಠಿಯಲ್ಲಿ  ವಿದಾಯದ ಮಾತುಗಳನ್ನು ಆಡಿದ್ದಾರೆ.  ಎಲ್ಲರಿಗೂ ನಮಸ್ಕಾರ, ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು

18ನೇ ವರ್ಷದಲ್ಲಿ ಎನ್‌ಎಸ್‌ಯುಐಗೆ ಸೇರ್ಪಡೆಯೊಂದಿಗೆ ಕಾಂಗ್ರೆಸ್ ಕಟ್ಟಾಳು ಡಿಕೆ ಶಿವಕುಮಾರ್‌ ರಾಜ್ಯ ರಾಜಕಾರಣದ ಪಯಣ

18ನೇ ವರ್ಷದಲ್ಲಿ ಎನ್‌ಎಸ್‌ಯುಐಗೆ ಸೇರ್ಪಡೆಯೊಂದಿಗೆ ಕಾಂಗ್ರೆಸ್ ಕಟ್ಟಾಳು ಡಿಕೆ ಶಿವಕುಮಾರ್‌ ರಾಜ್ಯ ರಾಜಕಾರಣದ ಪಯಣ ಸಾಗಿ ಬಂದ ಪ್ರಮುಖ ಹಂತಗಳ ಮೇಲೆ ಬೆಳಕು ಚೆಲ್ಲುವ  ಮಾಹಿತಿಗಳು ಇಲ್ಲಿವೆ,  ಕನಕಪುರ ತಾಲೂಕಿನ ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ ಹಾಗೂ ಶ್ರೀಮತಿ ಗೌರಮ್ಮದಂಪತಿಯ ಪ್ರಥಮ

ರಾಜ್ಯಪಾಲರ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪತ್ರ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರ ಹಸ್ತಾಂತರ ಚರ್ಚೆಗೆ ಅಂತ್ಯ ಹಾಡಿದ್ದಾರೆ. ರಾಜ್ಯಪಾಲರು ರಾಜಭವನದಲ್ಲಿ ಇಲ್ಲದ ಕಾರಣ ಸಿಎಂ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ರಾಜೀನಾಮೆ ಸಲ್ಲಿಕೆಗೂ ಮೊದಲು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ

ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿ ಡಿಕೆ ಶಿವಕುಮಾರ್‌ಗೆ ಅಭಿನಂದಿಸಿದ ಸಿದ್ದರಾಮಯ್ಯ

ಇಂದು ನಡೆದ ಸಚಿವರ ‘ಬ್ರೇಕ್​ಫಾಸ್ಟ್​ ಮೀಟಿಂಗ್’ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಸಿಎಂ ಮಧ್ಯಾಹ್ನ ಮೂರು ಗಂಟೆಗೆ ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ರಾಜ್ಯಪಾಲರು ಲಭ್ಯವಿಲ್ಲದಿದ್ದರೆ ಅವರ ಕಾರ್ಯದರ್ಶಿಗೆ ಪತ್ರ ಹಸ್ತಾಂತರಿಸಲು ನಿರ್ಧರಿಸಿದ್ದಾರೆ. ಹೈಕಮಾಂಡ್

ಹರ್ಮುಜ್‌ನಲ್ಲಿ ಇರಾನ್‌ ಡ್ರೋನ್‌ ಹೊಡೆದುರುಳಿಸಿದ ಅಮೆರಿಕ: ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ

ಹರ್ಮುಜ್ ಜಲಸಂಧಿ ಪ್ರದೇಶದಲ್ಲಿ ನಾಲ್ಕು ಇರಾನ್ ಡ್ರೋನ್‌ಗಳನ್ನು ಅಮೆರಿಕ ಸೇನೆ ಹೊಡೆದುರುಳಿಸಿದ್ದು, ಪ್ರಮುಖ ಬಂದರು ನಗರವಾದ ಬಂದರ್ ಅಬ್ಬಾಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡ್ರೋನ್ ನಿಯಂತ್ರಣ ಕೇಂದ್ರದ ಮೇಲೂ ದಾಳಿ ನಡೆಸಿದೆ. ಈ ಮೂಲಕ ಅಮೆರಿಕ-ಇರಾನ್ ನಡುವಿನ ತಾತ್ಕಾಲಿಕ ಕದನ ವಿರಾಮ ವಿಚಾರ ಮತ್ತೆ

ಸಿಎಂ ರಾಜೀನಾಮೆ ಸ್ವೀಕರಿಸಬೇಕಿದ್ದ ರಾಜ್ಯಪಾಲ ಗೆಹ್ಲೋಟ್‌ ಮುಂಬೈಗೆ ಪ್ರಯಾಣ?

ಸಿಎಂ ಸಿದ್ದರಾಮಯ್ಯ ಇಂದು ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳ ಬಗ್ಗೆ ಸಾಕಷ್ಟು ಅನುಮಾನಗಳನ್ನು ಹುಟ್ಟಿಸುವಂತೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಬುಧವಾರ ರಾತ್ರಿ ಮುಂಬೈಗೆ ಪ್ರಯಾಣಿಸಿದ್ದು, ಮೂರು ದಿನ ಲಭ್ಯ ಇರುವುದಿಲ್ಲ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅಂದರೆ

SIR ಜಾರಿ ಸಮರ್ಥಿಸಿದ ಸುಪ್ರೀಂಕೋರ್ಟ್‌

ಕೇಂದ್ರ ಚುನಾವಣಾ ಆಯೋಗ ಜಾರಿಗೊಳಿಸಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಬೆಂಬಲಿಸಿದೆ. ದೇಶದಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆಗಳನ್ನು ನಡೆಸುವ ಉದ್ದೇಶದ ಈ ಪ್ರಕ್ರಿಯೆ ಸಂಪೂರ್ಣವಾಗಿ ಸಂವಿಧಾನಬದ್ಧವಾಗಿದ್ದು, ಚುನಾವಣಾ ಆಯೋಗ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿದೆ

ಆಧುನಿಕ ಭಾರತ ನಿರ್ಮಾಣದಲ್ಲಿ ನೆಹರೂ ಪಾತ್ರ ದೊಡ್ದದು: ಸಿಎಂ ಸಿದ್ದರಾಮಯ್ಯ

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ  ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಮಾತನಾಡಿದರು.

ನಾಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್‌ಗೆ ಅಧಿಕಾರ?

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ನಡೆಯುತ್ತಿದ್ದ ನಾಯಕತ್ವ ಬದಲಾವಣೆಯ ಜಟಾಪಟಿ ಕೊನೆಯ ಹಂತಕ್ಕೆ ಬಂದಿದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಗುರುವಾರ) ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ, ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿ ಪತ್ರ ರವಾನಿಸಿದ್ದಾರೆ.