ರಾಜಕೀಯ
ವಿಶೇಷ ಅಧಿವೇಶನ ಕರೆದು ಕೇಂದ್ರದ ಯೋಜನೆಗೆ ಅಡ್ಡಗಾಲು: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರಿ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನ ಮಾಡಿದೆ. ಆದರೆ ಯೋಜನೆಯ ವಿರುದ್ಧದ ನಿರ್ಣಯದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರಿ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನ ಮಾಡಿದೆ. ವಿಬಿ ಜಿ ರಾಮ್ ಜಿ ಯೋಜನೆಯ ವಿರುದ್ಧ ನಿರ್ಣಯ ಕೈಗೊಂಡು ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುತ್ತದೆ.
ರಿಯಲ್ ಎಸ್ಟೇಟ್ ಕಚೇರಿಗಳಂತಾದ ಪೊಲೀಸ್ ಇಲಾಖೆ: ಅಶ್ವತ್ಥ ನಾರಾಯಣ್ ಟೀಕೆ
ಬೆಂಗಳೂರು: ರಾಜ್ಯದಲ್ಲಿ ಗೃಹ ಇಲಾಖೆ ಒಂದು ರೀತಿ ಸತ್ತಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಟೀಕಿಸಿದ್ದಾರೆ. ಇವತ್ತು ಪೊಲೀಸ್ ಇಲಾಖೆಯು ರಿಯಲ್ ಎಸ್ಟೇಟ್ನ ಕಚೇರಿಯಂತಾಗಿದೆ ಎಂದು ದೂರಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ
ಅಣ್ಣನ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ, ಎಲ್ಲದಕ್ಕೂ ಅಂತ್ಯ ಇದ್ದೇ ಇದೆ: ಡಿಕೆ ಸುರೇಶ್
ಅಧಿಕಾರ ಯಾರಿಗೂ ಸುಲಭವಾಗಿ ಬರುವುದಿಲ್ಲ. ನಮ್ಮ ಅಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ. ಯಾವುದೂ ಶಾಶ್ವತವಲ್ಲ. ಈ ಮೊದಲು ಹೇಳಿದ್ದೆ, ಈಗಲೂ ಅದನ್ನೇ ಹೇಳುತ್ತೇನೆ. ಎಂದು ಬಮೂಲ್ ಅಧ್ಯಕ್ಷರಾದ ಡಿಕೆ ಸುರೇಶ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು
ಜನವರಿ 22ರಿಂದ 31ರವರೆಗೆ ಜಂಟಿ ಅಧಿವೇಶನದಲ್ಲಿ MGNREGA ವಿಶೇಷ ಚರ್ಚೆ
ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. \ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ
ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕರಿಸಿದ್ದಾರೆ. ಕೇಂದ್ರ ಸಚಿವರಾಗಿರುವ ಜೆ.ಪಿ ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಅವಧಿ ಪೂರ್ಣಗೊಳಿಸಿದ ಬಳಿಕ ನಡೆದ ಚುನಾವಣೆಯಲ್ಲಿ ನಿತಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ
ತಮಿಳ್ನಾಡು ಅಸೆಂಬ್ಲಿಯಲ್ಲಿ ಭಾಷಣ ಮಾಡದೆ ಹೊರ ನಡೆದ ರಾಜ್ಯಪಾಲರು
ತಮಿಳುನಾಡು ಅಸೆಂಬ್ಲಿಯಲ್ಲಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡದೆ ರಾಜ್ಯಪಾಲರು ಹೊರ ನಡೆದಿದ್ದಾರೆ. ಈ ಭಾಷಣದಲ್ಲಿ ಆಧಾರರಹಿತ ಮತ್ತು ತಪ್ಪುದಾರಿಗೆಳೆಯುವ ಹೇಳಿಕೆಗಳಿವೆ. ಜನರಿಗೆ ತೊಂದರೆ ನೀಡುವ ನಿರ್ಣಾಯಕ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗಿದೆ. ತಮಿಳುನಾಡು 12 ಲಕ್ಷ ಕೋಟಿ ರೂ. ಗೂ ಹೆಚ್ಚು ಹೂಡಿಕೆ ಆಕರ್ಷಿಸಿದೆ ಎಂದು
ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆರ್ ಅಶೋಕ ಆಗ್ರಹ
ಬಾರ್, ಪಬ್, ಕ್ಲಬ್ಗಳಿಂದ ‘ಮಂಥ್ಲಿ ಮನಿ’ ವಸೂಲಿ ಮಾಡುವ ಭ್ರಷ್ಟ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಿ.ಮದ್ಯದ ಅಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ನಡೆಯುತ್ತಿರುವ ಬಲವಂತದ ವಸೂಲಿ ದಂಧೆಯಲ್ಲಿ ಬರೋಬ್ಬರಿ 2,500 ಕೋಟಿ ರೂಪಾಯಿಗಳ ಬೃಹತ್ ಹಗರಣ
ಅಬಕಾರಿ ಅಕ್ರಮದಲ್ಲಿ ಹೆಸರು ದುರ್ಬಳಕೆ: ಕಾನೂನು ಕ್ರಮದ ಎಚ್ಚರಿಕೆಯಿತ್ತ ಸಚಿವ ತಿಮ್ಮಾಪೂರ
ಯಾವನೋ ಒಬ್ಬ ಆಡಿಯೋ ದುರುಪಯೋಗ ಮಾಡಿಕೊಂಡು ನನ್ನ ಹಾಗೂ ನನ್ನ ಮಗನ ಹೆಸರನ್ನು ಹೇಳುತ್ತಿದ್ದಾನೆ. ಕೆಲ ಅಧಿಕಾರಿಗಳ ಹೆಸರನ್ನು ತೆಗೆದುಕೊಂಡಿದ್ದಾನೆ. ಅವನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ
ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ತನಿಖಾ ಸಂಸ್ಥೆಗಳಿಂದ ವಿರೋಧ ಪಕ್ಷಗಳ ನಾಯಕರ ಬೇಟೆ
ಕಾಂಗ್ರೆಸ್ ಮತ್ತು ಮಿತ್ರಕೂಟ ಮತ್ತು ಪ್ರಾದೇಶಿಕ ಪಕ್ಷಗಳನ್ನು ಸಂಪೂರ್ಣವಾಗಿ ನೆಲಸಮಗೊಳಿಸುವ ಅಜೆಂಡಾ ಬಿಜೆಪಿ ಹೊಂದಿರುವುದು ಹೊಸದೇನಲ್ಲ. ನರೇಂದ್ರ ಮೋದಿ ಕಳೆದ ಹತ್ತು ವರ್ಷಗಳಿಂದಲೂ ದೇಶದಿಂದ ಕಾಂಗ್ರೆಸ್ ಅನ್ನು ಸಂಪೂರ್ಣ ವಾಗಿ ಹೊರದೂಡುತ್ತೇವೆ ಮತ್ತು ಈ ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆಂದು ಬಹಿರಂಗವಾಗಿ
15ನೇ ಹಣಕಾಸು ಆಯೋಗದ ಸಾವಿರಾರು ಕೋಟಿ ಹಗರಣ: ಪಿ.ರಾಜೀವ್ ಆರೋಪ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲೇ ಬಹಳ ದೊಡ್ಡ ಭ್ರಷ್ಟಾಚಾರ ನಡೆದಿದೆ. 15ನೇ ಹಣಕಾಸು ಆಯೋಗದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಮಾತೆತ್ತಿದರೆ ಸಂವಿಧಾನದ ಬಗ್ಗೆ ಮಾತನಾಡುವ ಪ್ರಿಯಾಂಕ್ ಖರ್ಗೆಯವರಿಗೆ, ತಮ್ಮ ಇಲಾಖೆಯಲ್ಲಿ ಸಂವಿಧಾನದ ಉಲ್ಲಂಘನೆ ಎಷ್ಟಾಗುತ್ತಿದೆ ಎಂದು ತಿಳಿದುಕೊಳ್ಳುವ ಪುರುಸೊತ್ತಿಲ್ಲ ಎಂದು ರಾಜ್ಯ ಬಿಜೆಪಿ




