Menu

ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ವಿಧಾನಗಳ ತಡೆ) ತಿದ್ದುಪಡಿ ಮಸೂದೆ 2026 ಲೋಕಸಭೆಯಲ್ಲಿ ಮಂಡನೆ

ನೀಟ್‌ ಪರೀಕ್ಷಾ ಅಕ್ರಮಗಳ ಹಿನ್ನೆಲೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ವಿಧಾನಗಳ ತಡೆ) ತಿದ್ದುಪಡಿ ಮಸೂದೆ 2026 ಸೋಮವಾರ ಮಂಡಿಸಿದ್ದಾರೆ. ಕಠಿಣ ಶಿಕ್ಷೆ ಮತ್ತು ದಂಡದ ಪ್ರಮಾಣ ಹೆಚ್ಚಳ, ಹಳೆಯ ಕಾಯ್ದೆಗೆ ಹೋಲಿಸಿದರೆ ಅಪರಾಧಿಗಳಿಗೆ ವಿಧಿಸುವ ಶಿಕ್ಷೆ ಮತ್ತು ದಂಡದ ಪ್ರಮಾಣವನ್ನು ಗಣನೀಯವಾಗಿ ಈ ಮಸೂದೆಯಲ್ಲಿ ಹೆಚ್ಚಿಸಲಾಗಿದೆ. ಇದರ ಮುಖ್ಯ ಉದ್ದೇಶಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಿ, ಹಾಲಿ ಇರುವ 2024ರ ಕಾಯ್ದೆಯನ್ನು

ಈ ವಾರ ಸಂಪುಟ ವಿಸ್ತರಣೆ ಪೂರ್ಣ, ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ: ಮುಖ್ಯಮಂತ್ರಿ

ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಿಎಂ ಡಿ ಕೆ ಶಿವಕುಮಾರ್  ಹೇಳಿದ್ದಾರೆ.  ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ  ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, ಸಚಿವ ಸಂಪುಟ

ಹಿರಿಯೂರಿನ 14 ಕೆರೆಗಳಿಗೆ ನೀರು ತುಂಬಿಸಲು 244 ಕೋಟಿ ರೂ. ಯೋಜನೆ: ಸಿಎಂ ಡಿಕೆ ಶಿವಕುಮಾರ್‌

ಹಿರಿಯೂರಿನ  14 ಕೆರೆಗಳಿಗೆ ನೀರು ತುಂಬಿಸಬೇಕು ಎನ್ನುವುದು  ಮಾಜಿ ಸಚಿವ ದಿವಂಗತ ಡಿ. ಸುಧಾಕರ ಅವರ  ಕನಸಾಗಿತ್ತು. ಈ ಯೋಜನೆ ಮಾಡಲು ನನ್ನ ಬಳಿ ಅವರು ಕೊನೆಯದಾಗಿ ಮಾತು ತೆಗೆದುಕೊಂಡಿದ್ದರು. ಆ ಮಾತನ್ನು ಉಳಿಸಿಕೊಳ್ಳಲು  ಸಚಿವ ಸಂಪುಟದಲ್ಲಿ 244 ಕೋಟಿ ರೂ.

ರಾಜ್ಯದಲ್ಲಿ ಬರ, ರಾಷ್ಟ್ರೀಯ ವಿಪತ್ತು ಘೋಷಿಸುವಂತೆ ಕೇಂದ್ರಕ್ಕೆ ಮನವಿ: ಡಿಸಿಎಂ ಪರಮೇಶ್ವರ್‌

ಬರದಿಂದ ರಾಜ್ಯದಲ್ಲಿ ಗಂಭೀರ ಪರಿಸ್ಥಿತಿ ಇದೆ. ರಾಷ್ತ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಹೇಳಿದರು. ಚಿತ್ರದುರ್ಗ  ನಗರದ ಹೊರ ವಲಯದ ಮುರುಘಾ ಮಠದ ಸಭಾಂಗಣದಲ್ಲಿ ವಿಭಾಗ ಮಟ್ಟದ ಸಭೆಯಲ್ಲಿ ಮಾತನಾಡಿದರು.

ಬರದಿಂದ ರೈತರ ಬದುಕಿಗೆ ತೊಂದರೆ ಆಗದಂತೆ ಕ್ರಮ ನಮ್ಮ ಹೊಣೆ: ಸಚಿವರು, ಅಧಿಕಾರಿಗಳಿಗೆ ಸಿಎಂ ಸೂಚನೆ

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಆಗ ಎಲ್ಲಾ ಮಂತ್ರಿಗಳು ಕೈ ಜೋಡಿಸಿ ಕೆಲಸ ಮಾಡಬೇಕಾಗುತ್ತದೆ. ಒಟ್ಟಾಗಿ ಇಡೀ ರಾಜ್ಯದ ಬರ ಪರಿಸ್ಥಿತಿಯನ್ನು ಅವಲೋಕಿಸಬೇಕು. ಹಳ್ಳಿಗಳಲ್ಲಿ ರೈತರ ಬದುಕಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಇದೇ ನಮ್ಮ ಮುಂದಿರುವ ಹೊಣೆಗಾರಿಕೆ

ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ: ವಿದ್ಯಾರ್ಥಿ ಚಳವಳಿಗೆ ಗೆಲುವು

ನೀಟ್ ಪರೀಕ್ಷೆ ಅಕ್ರಮಗಳನ್ನು ಖಂಡಿಸಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸುತ್ತಿರುವ ವಿದ್ಯಾರ್ಥಿ ಚಳವಳಿಗೆ ಪ್ರಧಾನ್‌ ರಾಜೀನಾಮೆ ಮೂಲಕ ಗೆಲುವಾಗಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಧ ಎಕ್ಸ್‌ ಖಾತೆಯಲ್ಲಿ ರಾಜೀನಾಮೆ

ವಿದ್ಯಾರ್ಥಿಗಳಿಗೆ ಆಜ್ಞೆ ಮಾಡಬೇಕಿಲ್ಲ, ಅರ್ಥಪೂರ್ಣ ಚರ್ಚೆ ನಡೆಸಿ ಸಮಸ್ಯೆ ಪರಿಹರಿಸಿ: ಮೋಹನ್‌ ಭಾಗವತ್‌

ಇಂದಿನ ಯುವ ವಿದ್ಯಾರ್ಥಿಗಳು ದಾರಿ ತಪ್ಪಿಲ್ಲ, ಅವರು ದೂರದೃಷ್ಟಿಯುಳ್ಳವರು. ಹಾಗಾಗಿ ಅವರನ್ನು ಅರ್ಥಮಾಡಿಕೊಳ್ಳಲು ಆಜ್ಞೆ ನೀಡುವುದಲ್ಲ, ಬದಲಾಗಿ ಅವರೊಂದಿಗೆ ಅರ್ಥಪೂರ್ಣ ಚರ್ಚೆ ನಡೆಸಿ  ಸಮಸ್ಯೆಗಳನ್ನು ಬಗೆಹರಿಸುವ ಅಗತ್ಯವಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದಿಂದ

ಕೆಪಿಎಸ್‌ಸಿ ಅಧ್ಯಕ್ಷನ ಆಯ್ಕೆ ಮಾಡಿದ ಬಿಜೆಪಿಯವರಿಂದಲೇ ವಜಾಗೊಳಿಸಲು ರಾಜ್ಯಪಾಲರಿಗೆ ಪತ್ರ: ಸಿಎಂ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ? ನನ್ನ ವಿರುದ್ಧ ಪ್ರತಿಭಟನೆ ಮಾಡುವವರನ್ನು ನಾನು ಬೇಡ ಎನ್ನಲು ಸಾಧ್ಯವೇ? ಮಾಧ್ಯಮದವರೂ ಪ್ರತಿಭಟನೆ ಮಾಡುತ್ತಾರೆ. ಇದನ್ನು ಬೇಡ ಎನ್ನಲು ಆಗುತ್ತದೆಯೇ? ಕೆಪಿಎಸ್‌ ಸಿ ಅಧ್ಯಕ್ಷನ ನೇಮಕ  ನಾವು ಮಾಡಿದ್ದಲ್ಲ. ಬಿಜೆಪಿಯವರೇ

ಮಾಜಿ ಸಚಿವ ಸಿ.ವೀರಣ್ಣ ನಿಧನ

ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಸಿ.ವೀರಣ್ಣ (86) ಕೊರಟಗೆರೆಯ ತಮ್ಮ ತೋಟದ ಮನೆಯಲ್ಲಿ ನಿಧನರಾಗಿದ್ದಾರೆ. ವಕೀಲರಾಗಿದ್ದ ವೀರಣ್ಣ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದು, ಸಚಿವರಾಗಿ, ಡೆಪ್ಯೂಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿ ರಾಜಕೀಯದಲ್ಲಿ ದೀರ್ಘಕಾಲ ಸಕ್ರಿಯರಾಗಿದ್ದರು. ಅವರಿಗೆ ಇಬ್ಬರು ಗಂಡು ಮಕ್ಕಳು

ವಿದ್ಯಾರ್ಥಿ ಪ್ರತಿಭಟನೆ: ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರವೆಂದ ಸಿಎಂ

ನೀಟ್‌ ಪರೀಕ್ಷಾ ಅಕ್ರಮ ಖಂಡಿಸಿ ಹಾಗೂ ಅದರ ಹೊಣೆ ಹೊತ್ತು ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ  ವಿದ್ಯಾರ್ಥಿಗಳು ಮತ್ತು ಯುವಜನರು  ಪ್ರತಿಭಟನೆ ಆರಂಭಿಸಿ ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ  ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ