Menu

ಇರಾನ್‌ ಹಡಗು ವಶಕ್ಕೆ ಪಡೆದ ಅಮೆರಿಕ, ತಕ್ಕ ಪ್ರತಿಕ್ರಿಯೆ ನೀಡುತ್ತೇನೆಂದ ಟೆಹ್ರಾನ್‌

ಓಮನ್ ಸಮುದ್ರದ ಬಳಿ ಅಮೆರಿಕ ಸೇನೆಯು ಇರಾನ್‌ನ ಸರಕು ಹಡಗೊಂದನ್ನು ವಶಪಡಿಸಿಕೊಂಡಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉಲ್ಬಣಗೊಂಡಿದೆ. ಈ ಬೆಳವಣಿಗೆ ಶಾಂತಿ ಒಪ್ಪಂದ ಸಾಧ್ಯತೆಯನ್ನು ಕುಗ್ಗಿಸಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಆತಂಕ ಹೆಚ್ಚಿಸಿದೆ. ಟೌಸ್ಕಾ ಎಂಬ ಇರಾನ್ ಹಡಗು ಓಮನ್ ಸಮುದ್ರದ ಬಳಿ ಅಮೆರಿಕ ನೌಕಾಪಡೆಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ್ದರಿಂದ ಎಂಜಿನ್ ಭಾಗಕ್ಕೆ ಗುಂಡು ಹಾರಿಸಿ ಹಡಗನ್ನು ನಿಷ್ಕ್ರಿಯಗೊಳಿಸಿದೆ. ಹಡಗನ್ನು ವಶಕ್ಕೆ ಪಡೆದು ಅದರೊಳಗಿನ ಸರಕುಗಳನ್ನು ಪರಿಶೀಲನೆ ನಡೆಸಿದೆ. ಅಮೆರಿಕದ

ಕ್ಷೇತ್ರ ಮರುವಿಂಗಡನೆ ಹೊಸ ಜನಗಣತಿ ನಂತರ ಮಾಡುವುದು ಸೂಕ್ತ : ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.   ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ

ಹರ್ಮುಜ್‌ ಜಲಸಂಧಿಯಲ್ಲಿ ಹಡಗುಗಳ ಮೇಲೆ ಇರಾನ್‌ ದಾಳಿ: ನಾಲ್ವರು ಭಾರತೀಯರ ಸಾವು

ಹರ್ಮುಜ್‌ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಒಬ್ಬ ನಾವಿಕ ನಾಪತ್ತೆಯಾಗಿರುವುದಾಗಿ ಭಾರತದ ವಿದೇಶಾಂಗ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಭಾರತದ

ಅಮೆರಿಕದಿಂದ ಕದನ ವಿರಾಮ ಉಲ್ಲಂಘನೆ: ಹರ್ಮುಜ್‌ ಜಲಸಂಧಿ ಮೇಲೆ ಮತ್ತೆ ಇರಾನ್‌ ನಿರ್ಬಂಧ

ಅಮೆರಿಕ ಕದನ ವಿರಾಮವನ್ನು ಉಲ್ಲಂಘಿಸಿರುವ ಕಾರಣ ಹರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಲಾಗುತ್ತಿದೆ ಎಂದು ಇರಾನ್ ಹೇಳಿದೆ. ಇರಾನ್ ನಿರ್ಣಾಯಕ ಜಲಮಾರ್ಗವಾಗಿರುವ ಹರ್ಮುಜ್ ಜಲಸಂಧಿಯ ಮೇಲೆ ಮತ್ತೆ ನಿರ್ಬಂಧಗಳನ್ನು ಹೇರಿದ್ದು, ತೆರೆಯುವ ನಿರ್ಧಾರವನ್ನು ಹಿಂತೆಗೆದುಕೊಂಡಿದೆ. ಇರಾನ್ ಸಂಬಂಧಿತ ಹಡಗು ಸಾಗಣೆಯ ಮೇಲಿನ ದಿಗ್ಬಂಧನವನ್ನು

ಒಮ್ಮತದಿಂದ ಸ್ವೀಕೃತಗೊಂಡಿದ್ದ ಮಹಿಳಾ ಮೀಸಲು ಮಸೂದೆ ಮರಳಿ ತನ್ನಿ: ಪ್ರಿಯಾಂಕಾ ಗಾಂಧಿ

ಹಿಂದೆ ಎಲ್ಲಾ ರಾಜಕೀಯ ಪಕ್ಷಗಳಿಂದ ಒಮ್ಮತದಿಂದ ಸ್ವೀಕೃತಗೊಂಡಿದ್ದ ಮಹಿಳಾ ಮೀಸಲು ಮಸೂದೆಯನ್ನು ಮರಳಿ ತರುವಂತೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದರು. ಎಲ್ಲಾ ಪಕ್ಷಗಳಿಂದ ಅಂಗೀಕರಿಸಲ್ಪಟ್ಟ ಹಳೆಯ ಮಹಿಳಾ ಮಸೂದೆಯನ್ನು ಸೋಮವಾರವೇ ಕೇಂದ್ರ ಸರ್ಕಾರ ಮಂಡಿಸಬೇಕು. ಸಂಸತ್

ದಕ್ಷಿಣ ಭಾರತದ ರಾಜ್ಯಗಳ ಕ್ಷೇತ್ರಗಳನ್ನು ಕಡಿಮೆ ಮಾಡುವ ಷಡ್ಯಂತ್ರವನ್ನು ವಿರೋಧಿಸುತ್ತೇವೆ: ಡಿಕೆ ಶಿವಕುಮಾರ್‌

“ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ವಿಧೇಯಕವನ್ನು ಮಂಡನೆ ಮಾಡಿತ್ತು. ಮಹಿಳಾ ಮೀಸಲಾತಿಗೆ ನಾವೆಲ್ಲರೂ ಬೆಂಬಲ ನೀಡುತ್ತೇವೆ. ಆದರೆ ಕ್ಷೇತ್ರ ಪುನರ್ ವಿಂಗಡಣೆ ಹೆಸರಿನಲ್ಲಿ ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಕ್ಷೇತ್ರಗಳನ್ನು ಕಡಿಮೆ ಮಾಡುವ ಷಡ್ಯಂತ್ರವನ್ನು ನಾವು ವಿರೋಧಿಸುತ್ತೇವೆ.

ಸಿದ್ದರಾಮಯ್ಯನವರ ತಂಡದವರನ್ನು ಹುಡುಕಿ ಹುಡುಕಿ ಡಿಕೆ ಶಿವಕುಮಾರ್‌ಟಾರ್ಗೆಟ್‌ ಮಾಡುತ್ತಿದ್ದಾರೆ: ಆರ್‌ ಅಶೋಕ

ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ. ಅವರಿಗೆ ಆಪ್ತರಾಗಿದ್ದ ನಾಗೇಂದ್ರ, ರಾಜಣ್ಣ ಮನೆಗೆ ಹೋಗಿದ್ದಾರೆ. ಈ ಜಮೀರ್‌ ಅಹ್ಮದ್‌ ಅವರ ಸರದಿ ಬಂದಿದ್ದು, ಅವರನ್ನು ಮನೆಗೆ ಕಳುಹಿಸಲು ಪ್ಲಾನ್‌ ನಡೆದಿದೆ. ಅಬ್ದುಲ್‌ ಜಬ್ಬಾರ್‌ಗೆ ಈಗಾಗಲೇ ಗೇಟ್‌ಪಾಸ್‌ ಸಿಕ್ಕಿದೆ. ಸಿದ್ದರಾಮಯ್ಯನವರ ತಂಡದವರನ್ನು ಡಿಕೆ ಶಿವಕುಮಾರ್‌ ಹುಡುಕಿ

ಬೆಂಗಳೂರಿನಲ್ಲಿ ಹೂಡಿಕೆ ಮಾಡಿದವರು ಲಾಭ ಮಾಡಿದ್ದಾರೆ, ನಷ್ಟ ಅನುಭವಿಸಿಲ್ಲ: ಡಿಕೆ ಶಿವಕುಮಾರ್

“ಬೆಂಗಳೂರು ಎಲ್ಲಾ ಕ್ಷೇತ್ರದಲ್ಲಿ ದೇಶದ ಇತರೆ ನಗರಗಳಿಗಿಂತ ಮುಂಚೂಣಿಯಲ್ಲಿದೆ. ನಮ್ಮಲ್ಲಿ ಬಂದು ಹೂಡಿಕೆ ಮಾಡಿದ ಪ್ರತಿಯೊಬ್ಬರೂ ಲಾಭ ಪಡೆದಿದ್ದಾರೆ ಹೊರತು ನಷ್ಟ ಅನುಭವಿಸಿಲ್ಲ. ಈ ಕಾರಣಕ್ಕೆ ಬೆಂಗಳೂರಿಗೆ ಬಂದವರು ಮತ್ತೆ ವಾಪಸ್ ಹೋಗಲು ಬಯಸುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.

ತಂತ್ರಜ್ಞಾನ ಜೊತೆ ವ್ಯಾಪಾರ, ನಾವೀನ್ಯತೆ, ಜನರ ಸಹಯೋಗ ಹಾಗೂ ವಿಶ್ವ ಪಾಲುದಾರಿಕೆಯತ್ತ ಕರ್ನಾಟಕ ಒಲವು: ಸಿಎಂ ಸಿದ್ದರಾಮಯ್ಯ

ತಂತ್ರಜ್ಞಾನದ ಜೊತೆಗೆ ವ್ಯಾಪಾರ, ನಾವೀನ್ಯತೆ, ಜನರ ಸಹಯೋಗ ಹಾಗೂ ವಿಶ್ವದೊಂದಿಗಿನ ಪಾಲುದಾರಿಕೆಯತ್ತ ಕರ್ನಾಟಕ ಆಸಕ್ತಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ.  ನವದೆಹಲಿಯಲ್ಲಿ ನಡೆದ ಬ್ರಿಡ್ಜ್ ಟು ಬೆಂಗಳೂರು ಕಾರ್ಯಕ್ರಮದಲ್ಲಿ  ವಿವಿಧ ದೇಶಗಳ ರಾಯಭಾರಿಗಳು ಹಾಗೂ ರಾಜತಾಂತ್ರಿಕರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು

ವಿನಯ್‌ ಕುಲಕರ್ಣಿ ಕೇಸ್‌: ರಾಜಕೀಯದಿಂದಾಗುವ ಕೊಲೆ ಪ್ರಕರಣಗಳಿಗೆ ತಿಲಾಂಜಲಿ ನೀಡಿದ ತೀರ್ಪು ಎಂದ ಆರ್‌ ಅಶೋಕ

ಮಾಜಿ ಸಚಿವ ವಿನಯ್‌ ಕುಲಕರ್ಣಿ ಮಾಡಿಸಿದ ಕೊಲೆ ಪ್ರಕರಣದಲ್ಲಿ, ಇಬ್ಬರು ಸಾಕ್ಷಿ ಹೇಳಿದ್ದಾರೆ. ರಾಜಕಾರಣಿಗಳ ಮಾತು ಕೇಳಿಕೊಂಡು ಕೊಲೆ ಮಾಡಿದರೆ ಏನಾಗುತ್ತದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ. ಸಿಬಿಐ ತನಿಖೆ ನಡೆಯದೇ ಇದ್ದಿದ್ದರೆ ಪೊಲೀಸ್‌ ಇಲಾಖೆ ಕೇಸನ್ನು ಮುಚ್ಚಿಹಾಕುತ್ತಿತ್ತು. ಈಗ ಎಲ್ಲವೂ