ರಾಜಕೀಯ
ನೀಟ್ ರದ್ದು: ಕಾಲಮಿತಿಯಲ್ಲಿ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ
ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹವಾಗಿದೆ. ಕರ್ನಾಟಕದ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ದೇಶದ 22 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಶ್ರಮಪಟ್ಟು ಈ ಪರೀಕ್ಷೆ ಬರೆದಿದ್ದರು. ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ತರಬೇತಿ, ಪ್ರಯಾಣ ಸೇರಿದಂತೆ ಸಾಕಷ್ಟು ಖರ್ಚುಗಳನ್ನು ಮಾಡಿದ್ದರು. ಆದರೆ ಕೇಂದ್ರದ ಒಂದು
ತೈವಾನ್ ಬಿಕ್ಕಟ್ಟು ಸರಿಯಾಗಿ ನಿರ್ವಹಿಸದಿದ್ದರೆ ಸಂಘರ್ಷ: ಟ್ರಂಪ್ಗೆ ಕ್ಸಿ ಜಿನ್ಪಿಂಗ್ ವಾರ್ನ್
ತೈವಾನ್ ಸಮಸ್ಯೆಯನ್ನು ಸರಿಯಾಗಿ ನಿರ್ವಹಿಸದಿದ್ದರೆ ಉಭಯ ದೇಶಗಳ ನಡುವೆ ನೇರ ಸಂಘರ್ಷ ಸಂಭವಿಸಬಹುದು ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ನೇರವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಬೀಜಿಂಗ್ನಲ್ಲಿ ನಡೆದ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಮಾತನಾಡಿದ ಅವರು ತೈವಾನ್ ವಿಷಯವು
ವ್ಯಾಪಂ ಹಗರಣ ಸಂಬಂಧ 44 ಮಂದಿಯ ಕೊಲೆ, ಈ ಬಗ್ಗೆ ಸಿನಿಮಾ ಮಾಡಿ: ಧುರಂಧರ್ ನಿರ್ದೇಶಕನಿಗೆ ಸಚಿವ ಲಾಡ್ ಸಲಹೆ
ಧುರಂಧರ್ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ನಿರ್ದೇಶಕ ಆದಿತ್ಯ ಧರ್ ಅವರಿಗೆ ವ್ಯಾಪಂ ಹಗರಣದ ಬಗ್ಗೆಯೂ ಒಂದು ಸಿನಿಮಾ ಮಾಡಿ ಎಂದು ಸಚಿವ ಸಂತೋಷ್ ಲಾಡ್ ಸಲಹೆ ನೀಡಿದರು. ವ್ಯಾಪಂ ಹಗರಣ ಮುಚ್ಚಲು ಈವರೆಗೆ 44 ಜನರ ಕಗ್ಗೊಲೆ ಮಾಡಲಾಗಿದೆ ಎಂದು ಆಕ್ರೋಶ
ಕೇರಳ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಹೆಸರು ಘೋಷಣೆ
ಕೇರಳದ ನೂತನ ಸಿಎಂ ಆಗಿ ವಿ.ಡಿ.ಸತೀಶನ್ ಅವರ ಹೆಸರನ್ನು ಎಐಸಿಸಿ ಘೋಷಿಸಿದೆ. ಕೇರಳ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್, ವಿ.ಡಿ ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಹೆಸರು ಪ್ರಮುಖವಾಗಿ ಸಿಎಂ ರೇಸ್ನಲ್ಲಿ ಕೇಳಿ ಬಂದಿದ್ದವು. ಎಐಸಿಸಿ ಕೇರಳ ಉಸ್ತುವಾರಿ ದೀಪಾ ದಾಸ್ಮುನ್ಸಿ
ರಾಜ್ಯದಲ್ಲಿ ಪ್ರತಿದಿನ 67 ಜನ ನಾಪತ್ತೆ! ಹೊಣೆ ಯಾರು
ರಾಜ್ಯದಲ್ಲಿ ದಿನಕ್ಕೆ ಸರಾಸರಿ 67 ಜನರು ನಾಪತ್ತೆಯಾಗುತ್ತಿದ್ದಾರೆ. ಮಕ್ಕಳಿಗಿಲ್ಲ ರಕ್ಷಣೆ… ಹೆಣ್ಣುಮಕ್ಕಳಿಗಿಲ್ಲ ಭದ್ರತೆ… ಕರ್ನಾಟಕವನ್ನು ಅಪರಾಧಿಗಳ ಸ್ವರ್ಗವನ್ನಾಗಿ ಮಾಡಿದೆ ಕಾಂಗ್ರೆಸ್ ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಟೀಕಿಸಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಅಂಕಿ-ಅಂಶಗಳು ರಾಜ್ಯದ ಭಯಾನಕ
ಕೋರ್ಟ್ ನಿರ್ದೇಶನದಂತೆ ಜಿಬಿಎ ಪಾಲಿಕೆಗಳ ಚುನಾವಣೆ: ಡಿಕೆ ಶಿವಕುಮಾರ್
“ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಬುಧವಾರ ಪ್ರತಿಕ್ರಿಯೆ ನೀಡಿದರು. ಜಿಬಿಎ ಚುನಾವಣೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.
ಎಸ್ಟಿ ಮೀಸಲಾತಿ ಇಳಿಸಿ ದಲಿತರಿಗೆ ವಂಚನೆ: ಸರ್ಕಾರದ ವಿರುದ್ಧ ಆರ್ ಅಶೋಕ ಕಿಡಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಮರಳಿ 3% ಗೆ ಇಳಿಕೆ ಮಾಡಿ ಈ ಸಮುದಾಯಕ್ಕೆ ವಂಚನೆ ಮಾಡಿದೆ. ಇದರ ವಿರುದ್ಧ ಜನಾಂದೋಲನ ನಡೆಯಲಿದ್ದು, ಬಿಜೆಪಿ ಕೂಡ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ
ತಮಿಳುನಾಡು ಸಿಎಂ ವಿಶೇಷ ಕರ್ತವ್ಯಾಧಿಕಾರಿ ವೆಟ್ರಿವೇಲ್: ವ್ಯಾಪಕ ವಿರೋಧ ಬಳಿಕ ನೇಮಕಾತಿ ಹಿಂಪಡೆದ ಸರ್ಕಾರ
ತಮಿಳುನಾಡು ಮುಖ್ಯಮಂತ್ರಿಯ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಜ್ಯೋತಿಷಿ ಹಾಗೂ ಟಿವಿಕೆ ವಕ್ತಾರ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ನೇಮಕಾತಿಯನ್ನು ಹಿಂಪಡೆಯಲಾಗಿದೆ. ವಿಧಾನಸಭೆಯ ವಿಶ್ವಾಸಮತದ ಸಂದರ್ಭದಲ್ಲಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ (ರಾಜಕೀಯ) ಹುದ್ದೆಗೆ ನೇಮಿಸಿದ್ದಕ್ಕೆ ಸರ್ಕಾರದ ಮಿತ್ರಪಕ್ಷಗಳು
ರಾಜ್ಯದಲ್ಲಿ ಕಾನೂನು ರಕ್ಷಕರೇ ಭಕ್ಷಕರು, ಬೆಂಗಳೂರು ಭ್ರಷ್ಟಾಚಾರದ ಕೇಂದ್ರ: ಆರ್ ಅಶೋಕ
ರಾಜ್ಯದಲ್ಲಿ ಕಾನೂನು ರಕ್ಷಕರೇ ಭಕ್ಷಕರು, ಬೆಂಗಳೂರು ಭ್ರಷ್ಟಾಚಾರದ ಕೇಂದ್ರ, ಜನಸಾಮಾನ್ಯರು ಅಪರಾಧಿಗಳಿಗಿಂತ ಹೆಚ್ಚು ಭಯಪಡುವುದು ಕಾನೂನು ಕಾಪಾಡಬೇಕಾದ ವ್ಯವಸ್ಥೆಗೆ ಎಂಬ ಪರಿಸ್ಥಿತಿ ಇದೆ. ಪೊಲೀಸ್ ಇಲಾಖೆ ಕುರಿತಂತೆ ಮಾಧ್ಯಮಗಳಲ್ಲಿ ವರದಿಯಾಗಿರುವ ಅಂಕಿ-ಅಂಶಗಳು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಬೆಚ್ಚಿಬೀಳಿಸುವ ಸತ್ಯವನ್ನು ಬಯಲಿಗೆಳೆಯುತ್ತಿದೆ ಎಂದು
ತಮಿಳುನಾಡಿನಲ್ಲಿ ವಿಶ್ವಾಸಮತ ಗೆದ್ದು ಭದ್ರಗೊಂಡ ವಿಜಯ್ ಸರ್ಕಾರ
ವಿಜಯ್ ಅವರ ಟಿವಿಕೆ ಪಕ್ಷ ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದೆ. ಡಿಎಂಕೆ ಮೈತ್ರಿ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದ ಮುಖ್ಯಮಂತ್ರಿ ವಿಜಯ್ಗೆ ವಿಶ್ವಾಸಮತ ಪರೀಕ್ಷೆ ಎದುರಾಗಿದ್ದು, ಅವರು ಅದರಲ್ಲಿ ಗೆಲುವು ಕಾಣುವ ಮೂಲಕ ಸರ್ಕಾರ ಭದ್ರವಾಗಿದೆ. ವಿಧಾನಸಭೆಯಲ್ಲಿ ಕಲಾಪ




