Menu

ಮೇಕೆದಾಟು ಯೋಜನೆ ದೇವೇಗೌಡರ ಕುಟುಂಬದಿಂದ ಮಾತ್ರ ಸಾಧ್ಯ: ಎಚ್.ಡಿ. ಕುಮಾರಸ್ವಾಮಿ

ಮೈಸೂರು: ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವುದು ಇವರ್ಯಾರ ಕೈಯಲ್ಲೂ ಆಗಲ್. ಅದು ದೇವೇಗೌಡರ ಕುಟುಂಬದಿಂದ ಮಾತ್ರ ಸಾಧ್ಯ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ಆಡಳಿತಾರೂಢ ಮಿತ್ರ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ. ಹಾಗೆ ಮಾಡಿದರೆ, ನಾನು ಐದೇ ನಿಮಿಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದರು. ಈ ಹಿಂದೆ ನಾನು

ಸಿಎಂ ಸಿದ್ದರಾಮಯ್ಯ ವಿರುದ್ಧ ಯಾಕೆ ಕ್ರಮವಿಲ್ಲ: ಆರ್.ಅಶೋಕ್ ಪ್ರಶ್ನೆ

ಸಿಎಂ ಸಿದ್ದರಾಮಯ್ಯ ಹಲವಾರು ಬಾರಿ ಅಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್‌ ಸದಸ್ಯರಾದ ಎನ್‌.ರವಿಕುಮಾರ್‌ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ರಚನೆ

ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಅರಿತು, ಅವುಗಳಿಗೆ ಪರಿಹಾರ ಒದಗಿಸುವ ದಿಕ್ಕಿನಲ್ಲಿ ಕಾರ್ಯತಂತ್ರ ರೂಪಿಸುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಷ್ಟ್ರೀಯ ಮಟ್ಟದ ಸಲಹಾ ಮಂಡಳಿ  ರಚಿಸಲಾಗಿದೆ. ಎಐಸಿಸಿಯ ಹಿಂದುಳಿದ ವರ್ಗಗಳ ಘಟಕಕ್ಕೆ ಮುಂದಿನ ಕಾರ್ಯಯೋಜನೆಗಳು,

ಭೂ ಸ್ವಾಧೀನಕ್ಕೆ ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ

ಪ್ರಯತ್ನ ವಿಫಲ ಆದರೂ ಪ್ರಾರ್ಥನೆ ವಿಫಲ ಆಗಲ್ಲ: ಡಿಕೆ ಶಿವಕುಮಾರ್‌

ಪ್ರಯತ್ನ ವಿಫಲ ಆದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಹೇಳಿದ್ದಾರೆ.  ಆಷಾಢ ಮಾಸದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿ   ದೇವಿಗೆ  ಪತ್ನಿ ಉಷಾ ಜತೆ ಪೂಜೆ ಸಲ್ಲಿಸಿದ  ಬಳಿಕ

ಸಿಎಸ್‌ ವಿರುದ್ಧ ಕೀಳು ಹೇಳಿಕೆ: ಎಂಎಲ್ಸಿ ಎನ್‌ ರವಿಕುಮಾರ್‌ ವಿರುದ್ಧ ಕ್ರಮಕ್ಕೆ ಸಚಿವ ಭೋಸರಾಜು ಆಗ್ರಹ

ರಾಜ್ಯ ಸರಕಾರದ ಆಡಳಿತಾತ್ಮಕ ಮುಖ್ಯಸ್ಥರಾಗಿರುವಂತಹ ಮುಖ್ಯ ಕಾರ್ಯದರ್ಶಿಗಳು ಹಾಗೂ ಒಬ್ಬ ಮಹಿಳೆಯ ಬಗ್ಗೆ  ಕೀಳು ಹೇಳಿಕೆ ನೀಡಿರುವ ಪರಿಷತ್‌ ಸದಸ್ಯ ರವಿಕುಮಾರ್‌ ವಿರುದ್ದ ಕ್ರಮ ಅಗತ್ಯ ಎಂದು  ಸಚಿವ ಎನ್‌ ಎಸ್‌ ಭೋಸರಾಜು ಹೇಳಿದ್ದಾರೆ.  ರವಿಕುಮಾರ್‌ ವಿರುದ್ದ ಕಠಿಣ ಕ್ರಮದ ಅಗತ್ಯವಿದೆ.

ಪರಿಸರ ಸ್ನೇಹಿ ಹಸಿರು ಕಲಬುರಗಿ ನಿರ್ಮಾಣಕ್ಕೆ ಐದು ಹಂತಗಳ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ನಗರ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರು ಹೆಜ್ಜೆ ಕಾರ್ಯಕ್ರಮಮದ ಅಡಿಯಲ್ಲಿ ಸಸಿಗಳ ನೆಡುವ ಮೂಲಕ ಹಸಿರು ನಿರ್ಮಾಣಕ್ಕೆ ಕ್ರಮ ವಹಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಜನಸ್ನೇಹಿ ಆಡಳಿತ: ಭೂ ಮತ್ತು ಕಂದಾಯ ಯೋಜನೆಗಳಲ್ಲಿ ಸರ್ಕಾರದ ಪ್ರಮುಖ ಸಾಧನೆಗಳೇನು?

ತೆರಿಗೆ ಸಂಗ್ರಹ ಮತ್ತು ಸಂಗ್ರಹವಾದ ತೆರಿಗೆಯನ್ನು ವಿನಿಯೋಗಿಸುವ ವಿಧಾನ ಎರಡೂ ಕೂಡ ಜನಪರವಾಗಿರಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದಾಗಲೆಲ್ಲ ನಿರಂತರವಾಗಿ ಜನಪರವಾದ ಯೋಜನೆಗಳನ್ನು, ಅಭಿವೃದ್ಧಿ ಮಾದರಿಗಳನ್ನು, ಕಲ್ಯಾಣ ಯೋಜನೆಗಳನ್ನು  ರೂಪಿಸಿ ಅನುಷ್ಠಾನ ಮಾಡುತ್ತಿದೆ, ಅವುಗಳಲ್ಲಿ ಭೂ ಮತ್ತು

ಕೌಶಲ್ಯ ವಿನಿಮಯ:  ಜರ್ಮಿನಿಯಲ್ಲಿ  ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ ಕಾರ್ಯಾಗಾರ

ಜರ್ಮಿನಿಯ ಪ್ರವಾಸ ಕೈಗೊಂಡಿರುವ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್‌. ಪಾಟೀಲ್ ನೇತೃತ್ವದ ನಿಯೋಗ ಎರಡನೇ ದಿನದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರೈಸಿದೆ. ಸಚಿವರ ನಿಯೋಗ ಡಸೆಲ್ಡಾರ್ಫ್‌ನಲ್ಲಿ ಸಾಂಸ್ಥಿಕ ಮತ್ತು ರಾಜ್ಯಮಟ್ಟದ ಸಹಕಾರದ

ಗಾಜಾದಲ್ಲಿ ಆಹಾರಕ್ಕಾಗಿ ಕಾಯುತ್ತಿದ್ದ‌ ಪ್ಯಾಲೆಸ್ತೀನಿಯನ್ನರ ಮೇಲೆ ಇಸ್ರೇಲ್‌ ದಾಳಿ: 94 ಮಂದಿ ಬಲಿ

ಗಾಜಾದಲ್ಲಿ ಇಸ್ರೇಲ್‌ ವಾಯುದಾಳಿ ನಡೆಸಿದ್ದು, ಆಹಾರಕ್ಕಾಗಿ ಕಾಯುತ್ತಿದ್ದ‌ 94 ಪ್ಯಾಲೆಸ್ತೀನಿಯನ್ನರು ಪ್ರಾಣ ಕಳೆದುಕೊಂಡಿದ್ದಾರೆ. ದಕ್ಷಿಣ ಗಾಜಾದಲ್ಲಿ ಸ್ಥಳಾಂತರಗೊಂಡ ಜನರು ಮಲಗಿದ್ದಾಗ ರಾತ್ರಿ ಟೆಂಟ್ ಮೇಲೆ ನಡೆದ ದಾಳಿ ಇದಾಗಿದೆ. 12 ವರ್ಷದೊಳಗಿನ ಕನಿಷ್ಠ ಆರು ಮಕ್ಕಳು ಕೂಡ ಮೃತಪಟ್ಟಿದ್ದಾರೆ. ಸ್ಥಳಾಂತರಗೊಂಡ ಜನರಿಗೆ