ರಾಜ್ಯ
ಭಾರತ- ಇಯು ಒಪ್ಪಂದ: ಕರ್ನಾಟಕಕ್ಕೆ ಭಾಗ್ಯದ ಬಾಗಿಲು ತೆರೆಯಲಿದೆ ಎಂದ ಹೆಚ್ಡಿ ಕುಮಾರಸ್ವಾಮಿ
ಭಾರತ-ಯುರೋಪ್ ಒಕ್ಕೂಟದ ನಡುವೆ ಏರ್ಪಟ್ಟಿರುವ ಮುಕ್ತ ವ್ಯಾಪಾರ ಒಪ್ಪಂದವು ಭಾರತಕ್ಕೆ ವರವಾಗಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ಡಿ ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲಾಗುವ ಒಪ್ಪಂದವು ಭಾರತ ಮತ್ತು ಯುರೋಪ್ ಒಕ್ಕೂಟದ ನಡುವಿನ ವ್ಯಾಪಾರ ರೇಖೆಯನ್ನು ಮತ್ತಷ್ಟು ಸರಳವಾಗಿಸುತ್ತದೆ ಹಾಗೂ ಯುರೋಪ್ ಜತೆಗಿನ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ ಎಂದು ಹೇಳಿದ್ದಾರೆ. ಈ
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ: ಡಿಕೆ ಶಿವಕುಮಾರ್
ಬೆಂಗಳೂರು: ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ ಕರೆದು ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ವಿಧಾನಸಭೆಯ ಗಮನ ಸೆಳೆವ ಸೂಚನೆ ವೇಳೆ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಉತ್ತರ ನೀಡಿದರು. ಬಿಜೆಪಿ
ಹೊಳೆಹೊನ್ನೂರಿನಲ್ಲಿ ಹುಚ್ಚು ನಾಯಿ ಭೀತಿ, 11 ಜನ ಆಸ್ಪತ್ರೆಗೆ
ಶಿವಮೊಗ್ಗ : ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 11 ಜನರು ನಾಯಿ ಕಡಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳು ನೀಡಿರುವ ಮಾಹಿತಿಯಂತೆ, ಒಟ್ಟು 11 ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ.
ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಘೋಷಣೆ
ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. ದುರುದ್ದೇಶದಿಂದ ಮನ್ ರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜೀ ರಾಮ್ ಜೀ’ ಜಾರಿ ಮಾಡಿದ್ದಾರೆ. ನಾವು ರಾಜ್ಯದಲ್ಲಿರುವ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.
ನಾಗಮಂಗಲದಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಲಸಿಗರಿಗೆ ಭೂಮಿ: ತನಿಖೆಗೆ ಆಗ್ರಹ
ನಾಗಮಂಗಲ ತಾಲೂಕಿನಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ವಲಸಿಗರಿಗೆ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ರವೀಂದ್ರ ಎಂಬವರು ಆರೋಪಿಸಿದ್ದಾರೆ. ಬಗರ್ ಹುಕುಂ ಯೋಜನೆಯಡಿ ಗರಿಷ್ಠ 4
ನರೇಗಾ ಮರು ಜಾರಿವರೆಗೂ ನಮ್ಮ ಹೋರಾಟ, ಕುಮಾರಸ್ವಾಮಿ, ಬಿಜೆಪಿ ನಾಯಕರು ಚರ್ಚೆಗೆ ಬರಲಿ: ಡಿಕೆ ಶಿವಕುಮಾರ್
ನರೇಗಾ ಮರು ಜಾರಿವರೆಗೂ ನಮ್ಮ ಹೋರಾಟ, ಕುಮಾರಸ್ವಾಮಿ, ಬಿಜೆಪಿ ನಾಯಕರು ಚರ್ಚೆಗೆ ಬರಲಿ. ನಾನು ಸಿದ್ಧನಿದ್ದೇನೆ. ಈ ಯೋಜನೆ ಜಾರಿಯಾಗಿ 20 ವರ್ಷಗಳಾಗಿವೆ. 11 ವರ್ಷ ಗಳಿಂದ ನಿಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಈ ಯೋಜನೆ ಯಲ್ಲಿ ಅಕ್ರಮ ನಡೆದಿದ್ದರೆ ನೀವು ಏನು
ಜಿಬಿಎ ಚುನಾವಣೆ: ಕಾಂಗ್ರೆಸ್ನಿಂದ 1,800 ಆಕಾಂಕ್ಷಿಗಳು
ಜಿಬಿಎ ಚುನಾವಣೆಯಲ್ಲಿ ಕಣಕ್ಕಿಳಿಯಲು ಬಯಸಿ 369 ವಾರ್ಡ್ಗಳಲ್ಲಿ 1,800 ಕಾಂಗ್ರೆಸ್ ಆಕಾಂಕ್ಷಿಗಳು ಅರ್ಜಿ ಸ್ವೀಕರಿಸಿದ್ದಾರೆ. ಜೂನ್ 30ರ ಒಳಗಡೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಈಗಾಗಲೇ ಎಲ್ಲಾ ಪಕ್ಷಗಳು ಜಿಬಿಎ ಚುನಾವಣೆಗೆ ಸಿದ್ಧತೆ ಆರಂಭಿಸಿವೆ. ಕಾಂಗ್ರೆಸ್ನಲ್ಲಿ ಇದು
ಮದ್ಯ ಮಾರಾಟಗಾರರಿಂದ ರಾಹುಲ್ ಗಾಂಧಿಗೆ ದೂರು: ಸಿಎಂ, ಡಿಸಿಎಂಗೆ ನಾಚಿಕೆಯಾಗ್ಬೇಕು ಎಂದ ಆರ್ ಅಶೋಕ
ಅಬಕಾರಿ ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಕಮಿಷನ್ ದಂಧೆ, ಭ್ರಷ್ಟಾಚಾರದ ಬಗ್ಗೆ ಬೇಸತ್ತಿರುವ ಮದ್ಯ ಮಾರಾಟಗಾರರ ಸಂಘ ಈ ಬಗ್ಗೆ ರಾಹುಲ್ ಗಾಂಧಿ ಅವರಿಗೆ ದೂರು ಕೊಡಲು ಮುಂದಾಗಿದೆ. ಈ ನಡೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಅವರಿಗೆ ನಿಜಕ್ಕೂ ನಾಚಿಕೆಗೇಡಿನ
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕ: ಮಧು ಬಂಗಾರಪ್ಪ
ಮುಂದಿನ ಶೈಕ್ಷಣಿಕ ವರ್ಷಕ್ಕೆ ಮೊದಲು ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರನ್ನು ನೇಮಕ ಮಾಡಲು ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ
ನಾಳೆ ಕನಕೋತ್ಸವಕ್ಕೆ ಚಾಲನೆ, “ಮನರೇಗಾ” ಮಕ್ಕಳಿಗೆ ಚಿತ್ರ ಸ್ಪರ್ಧೆ: ಡಿಕೆ ಶಿವಕುಮಾರ್
ಜನವರಿ 28ರಂದು ಬೆಳಗ್ಗೆ 5 ಗಂಟೆಗೆ ಕನಕೋತ್ಸವ ಕಾರ್ಯಕ್ರಮ ಅಧಿಕೃತವಾಗಿ ಆರಂಭವಾಗಲಿದೆ. ಯೋಗ ಗುರು ವಚನಾನಂದ ಸ್ವಾಮೀಜಿ ಅವರು ಆಗಮಿಸುತ್ತಿದ್ದಾರೆ.”ಮನರೇಗಾ” ಯೋಜನೆ ವಿಷಯದಲ್ಲಿ ಮಕ್ಕಳಿಗೆ ಚಿತ್ರ ಬರೆಯುವ ಸ್ಪರ್ಧೆ ಹಮ್ಮಿಕೊಂಡಿದ್ದೇವೆ. ಜನಪದ, ದೇಶಭಕ್ತಿ ಗೀತೆ, ಸಿನಿಮಾ ಗೀತೆಗಳ ಜಿಲ್ಲಾ ಮಟ್ಟದ ಸ್ಪರ್ಧೆ




