ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವದಲ್ಲಿ ನಡೆದ ಕಾಲ್ತುಳಿತ ಅನಾಹುತ ತಡೆಯಬಹುದಾದ ದುರಂತವಾಗಿತ್ತು. ಜನಸಂದಣಿ ನಿರ್ವಹಣೆ, ಭದ್ರತೆ ಮತ್ತು ಅಗತ್ಯ ಸೌಲಭ್ಯಗಳಲ್ಲಿನ ಸ್ಪಷ್ಟ ಲೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಿ, ಹೊಣೆಗಾರಿಕೆ ಸ್ಥಾಪಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತುರ್ತು ಮಧ್ಯಸ್ಥಿಕೆ ವಹಿಸಬೇಕೆಂದು ಕೋರಿ ಪತ್ರ ಬರೆದಿದ್ದೇನೆ ಎಂದು ಪ್ರತಿಪಕ್ಷ ನಾಯಕ ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಅನಾಹುತ ತಡೆಯಬಹುದಾದ ದುರಂತವಾಗಿತ್ತು. ಜನಸಂದಣಿ ನಿರ್ವಹಣೆ, ಭದ್ರತೆ ಮತ್ತು ಅಗತ್ಯ ಸೌಲಭ್ಯಗಳಲ್ಲಿನ ಸ್ಪಷ್ಟ ಲೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಿ, ಹೊಣೆಗಾರಿಕೆ ಸ್ಥಾಪಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತುರ್ತು ಮಧ್ಯಸ್ಥಿಕೆ ವಹಿಸಬೇಕೆಂದು ಕೋರಿ ಪತ್ರ ಬರೆದಿದ್ದೇನೆ.
ಸಂತ್ರಸ್ತರಿಗೆ… https://t.co/wzFJZQ3tFt
— R. Ashoka (@RAshokaBJP) June 12, 2025
ಸಂತ್ರಸ್ತರಿಗೆ ನ್ಯಾಯ ಒದಗಿಸುವುದು ಮತ್ತು ಇಂತಹ ಘಟನೆಗಳು ಮುಂದೆಂದೂ ಮರುಕಳಿಸದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದ್ದು, ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಸಂವೇದನಾರಹಿತ, ಬೇಜವಾಬ್ದಾರಿ ಧೋರಣೆ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಧ್ಯ ಪ್ರವೇಶ ಅನಿವಾರ್ಯವಾಗಿದೆ ಎಂದೂ ಪತ್ರದಲ್ಲಿ ತಿಳಿಸಿರುವುದಾಗಿ ಸಾಮಾಜಿಕಿ ಮಾಧ್ಯಮ ಎಕ್ಸ್ನಲ್ಲಿ ಪತ್ರ ಸಹಿತ ಪೋಸ್ಟ್ ಮಾಡಿದ್ದಾರೆ.
ಆರ್ಸಿಬಿ ವಿಜಯೋತ್ಸವ ವೇಳೆ ನಡೆದ ದುರಂತದಲ್ಲಿ ಹನ್ನೊಂದು ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿದ್ದರು. ಘಟನೆ ಬಳಿಕ ಸಿಎಂ ಆಪ್ತ ಕಾರ್ಯದರ್ಶಿ ಗೋವಿಂದರಾಜ್ ಹಾಗೂ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.