Menu

RCB Victory tragedy: ಸಿಎಂ, ಡಿಸಿಎಂಗೆ ಹೈಕಮಾಂಡ್‌ ಬುಲಾವ್‌

ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿರುವ ಕಾಲ್ತುಳಿತ ದುರಂತದಿಂದ ೧೧ ಜನ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆಗೆ  ಸಂಬಂಧಿಸಿದಂತೆ ಕಾಂಗ್ರೆಸ್‌ ಹೈ ಕಮಾಂಡ್‌ ರಾಜ್ಯದ ಸಿಎಂ ಹಾಗೂ ಡಿಸಿಎಂ ಗೆ ದೆಹಲಿಗೆ ಬರುವಂತೆ ಬುಲಾವ್‌ ನೀಡಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಘಟನೆಗೆ ಸಂಬಂಧಿಸಿದಂತೆ ಹೈಕಮಾಂಡ್‌ಗೆ ವರದಿ ನೀಡಲಿದ್ದಾರೆ. ಒಂದೇ ವಿಮಾನದಲ್ಲಿ ಸಿಎಂ ಹಾಗೂ ಡಿಕೆಶಿ ದೆಹಲಿಗೆ ತೆರಳಿದ್ದು ಒಟ್ಟಿಗೆ ರಾಹುಲ್ ಗಾಂಧಿಯನ್ನು ಭೇಟಿಯಾಗಲಿದ್ದಾರೆ. ಬೆಳಗ್ಗೆ 11 ಗಂಟೆಗೆ ರಾಹುಲ್ ಗಾಂಧಿಯನ್ನು ಭೇಟಿಯಾಗಲು ಸಮಯ ನಿಗದಿಪಡಿಸಲಾಗಿದೆ.

ದುರಂತಕ್ಕೆ ಕರ್ನಾಟಕ ಕ್ರಿಕೆಟ್‌ ಮಂಡಳಿಮತ್ತು ಪೊಲೀಸ್‌ ವೈಫಲ್ಯ ಕಾರಣವೆಂದು ಸರ್ಕಾರ ಹೇಳಿದರೆ, ಇದಕ್ಕೆ ಸರ್ಕಾರವೇ ಕಾರಣ ಎಂದು ಕರ್ನಾಟಕ ಕ್ರಿಕೆಟ್‌ ಮಂಡಳಿಯು ಹೇಳುತ್ತಿದೆ. ಈ ಮಧ್ಯೆ ಸರ್ಕಾರವು ತನಿಖೆಯನ್ನು ಜಸ್ಟಿಸ್‌ ಡಿ. ಕುನ್ನಾ ಏಕ ಸದಸ್ಯ ಆಯೋಗಕ್ಕೆ ವಹಿಸಿದೆ. ಹಲವು ಪೊಲೀಸ್‌ ಅಧಿಕಾರಿಗಳನ್ನು ಕೂಡ ಅಮಾನತು ಮಾಡಿದೆ. ಸರ್ಕಾರದ ಈ ಕ್ರಮಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಪಿಐಎಲ್ ದಾಖಲಿಸಿಕೊಂಡಿದ್ದು, ಇಂದು ವಿಚಾರಣೆ ನಡೆಯಲಿದೆ.

Related Posts

Leave a Reply

Your email address will not be published. Required fields are marked *